AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ 2,454 ವಿವಿಧ ಹಂತದ ಪೊಲೀಸ್ ಹುದ್ದೆ ಭರ್ತಿ ಮಾಡ್ತೇವೆ; ಸಿಎಂ ಸಿದ್ದರಾಮಯ್ಯ

ನಿಮ್ಮ ವ್ಯಾಪ್ತಿಗಳಲ್ಲಿ ಅಪರಾಧ ನಿಯಂತ್ರಣ ಆಗದಿದ್ರೆ ಡಿಸಿಪಿ, ಎಸ್​​ಪಿ ಅವರೇ ನೇರ ಹೊಣೆಯಾಗಲಿದ್ದಾರೆ. ಒಳ್ಳೆ ಕೆಲಸ ಮಾಡುವ ಅಧಿಕಾರಿಗಳಿಗೆ ಸಹಕಾರ, ಪ್ರೋತ್ಸಾಹ ನಮ್ಮ ಸರ್ಕಾರ ನೀಡುತ್ತದೆ. ಕರ್ತವ್ಯಲೋಪ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶೀಘ್ರವೇ 2,454 ವಿವಿಧ ಹಂತದ ಪೊಲೀಸ್ ಹುದ್ದೆ ಭರ್ತಿ ಮಾಡ್ತೇವೆ; ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 15, 2023 | 5:04 PM

Share

ಬೆಂಗಳೂರು, ಸೆ.15: ಪೊಲೀಸರು ಜನರ ನಂಬಿಕೆ, ವಿಶ್ವಾಸಗಳಿಸಿ ಕೆಲಸ ಮಾಡಬೇಕು. ಅದಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಹೇಳಿದರು. ಬೆಂಗಳೂರಿನ ಪೊಲೀಸ್ (Police) ಪ್ರಧಾನ ಕಚೇರಿಯಲ್ಲಿ ನಡೆದ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು ‘ ಶೀಘ್ರವೇ 2,454 ವಿವಿಧ ಹಂತದ ಪೊಲೀಸ್ ಹುದ್ದೆ ಭರ್ತಿ ಮಾಡುತ್ತೇವೆ ಎನ್ನುವ ಮೂಲಕ ಪೊಲೀಸ್​ ಆಗುವ ಆಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇದರ ಜೊತೆಗೆ ಹೊಸದಾಗಿ 5 ಸಂಚಾರಿ ಠಾಣೆ, 6 ಮಹಿಳಾ ಠಾಣೆ ತೆರೆಯಲಾಗುವುದು ಎಂದಿದ್ದಾರೆ.

ಅಪರಾಧ ನಿಯಂತ್ರಣ ಆಗದಿದ್ರೆ ಡಿಸಿಪಿ, ಎಸ್​​ಪಿ ಹೊಣೆ

ನಿಮ್ಮ ವ್ಯಾಪ್ತಿಗಳಲ್ಲಿ ಅಪರಾಧ ನಿಯಂತ್ರಣ ಆಗದಿದ್ರೆ ಡಿಸಿಪಿ, ಎಸ್​​ಪಿ ಅವರೇ ನೇರ ಹೊಣೆಯಾಗಲಿದ್ದಾರೆ. ಒಳ್ಳೆ ಕೆಲಸ ಮಾಡುವ ಅಧಿಕಾರಿಗಳಿಗೆ ಸಹಕಾರ, ಪ್ರೋತ್ಸಾಹ ನಮ್ಮ ಸರ್ಕಾರ ನೀಡುತ್ತದೆ. ಕರ್ತವ್ಯಲೋಪ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು. ಇನ್ನು ಇದೇ ವೇಳೆ ಡ್ರಗ್ಸ್​​ನಿಂದ ಯುವ ಸಮುದಾಯ ಹಾಳಾಗುತ್ತಿದೆ. ಡ್ರಗ್ಸ್​​ ನಿರ್ಮೂಲನೆ ಒಂದು ಅಭಿಯಾನದ ರೀತಿಯಲ್ಲಿ ಆಗಬೇಕು. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡಬಾರದು ಎಂದರು.

ಇದನ್ನೂ ಓದಿ:ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ, ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು ಎಂದ ಸಿಎಂ ಸಿದ್ದರಾಮಯ್ಯ

ಹೊಸ ವಾಹನಗಳ ಖರೀದಿಗೆ ಪೊಲೀಸ್​ ಇಲಾಖೆಗೆ 100 ಕೋಟಿ ರೂ.

ಹೌದು, ಪೊಲೀಸ್​ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಸಿಎಂ ಬಂಪರ್​ ಕೊಡುಗೆ ನೀಡಿದ್ದಾರೆ. ಹೊಸ ವಾಹನಗಳ ಖರೀದಿಗೆ ಪೊಲೀಸ್​ ಇಲಾಖೆಗೆ 100 ಕೋಟಿ ರೂಪಾಯಿಗೆ ಮುಂದಿನ ಕ್ಯಾಬಿನೆಟ್​ನಲ್ಲಿ ಅನುದಾನಕ್ಕೆ ಅನುಮೋದನೆ ನೀಡಲಾಗುವುದು ಎಂದಿದ್ದಾರೆ. ಪೊಲೀಸ್​ ಸಿಬ್ಬಂದಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ನೈತಿಕ ಪೊಲೀಸ್​ಗಿರಿ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!