ಶೀಘ್ರವೇ 2,454 ವಿವಿಧ ಹಂತದ ಪೊಲೀಸ್ ಹುದ್ದೆ ಭರ್ತಿ ಮಾಡ್ತೇವೆ; ಸಿಎಂ ಸಿದ್ದರಾಮಯ್ಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 15, 2023 | 5:04 PM

ನಿಮ್ಮ ವ್ಯಾಪ್ತಿಗಳಲ್ಲಿ ಅಪರಾಧ ನಿಯಂತ್ರಣ ಆಗದಿದ್ರೆ ಡಿಸಿಪಿ, ಎಸ್​​ಪಿ ಅವರೇ ನೇರ ಹೊಣೆಯಾಗಲಿದ್ದಾರೆ. ಒಳ್ಳೆ ಕೆಲಸ ಮಾಡುವ ಅಧಿಕಾರಿಗಳಿಗೆ ಸಹಕಾರ, ಪ್ರೋತ್ಸಾಹ ನಮ್ಮ ಸರ್ಕಾರ ನೀಡುತ್ತದೆ. ಕರ್ತವ್ಯಲೋಪ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶೀಘ್ರವೇ 2,454 ವಿವಿಧ ಹಂತದ ಪೊಲೀಸ್ ಹುದ್ದೆ ಭರ್ತಿ ಮಾಡ್ತೇವೆ; ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು, ಸೆ.15: ಪೊಲೀಸರು ಜನರ ನಂಬಿಕೆ, ವಿಶ್ವಾಸಗಳಿಸಿ ಕೆಲಸ ಮಾಡಬೇಕು. ಅದಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಹೇಳಿದರು. ಬೆಂಗಳೂರಿನ ಪೊಲೀಸ್ (Police) ಪ್ರಧಾನ ಕಚೇರಿಯಲ್ಲಿ ನಡೆದ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು ‘ ಶೀಘ್ರವೇ 2,454 ವಿವಿಧ ಹಂತದ ಪೊಲೀಸ್ ಹುದ್ದೆ ಭರ್ತಿ ಮಾಡುತ್ತೇವೆ ಎನ್ನುವ ಮೂಲಕ ಪೊಲೀಸ್​ ಆಗುವ ಆಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇದರ ಜೊತೆಗೆ ಹೊಸದಾಗಿ 5 ಸಂಚಾರಿ ಠಾಣೆ, 6 ಮಹಿಳಾ ಠಾಣೆ ತೆರೆಯಲಾಗುವುದು ಎಂದಿದ್ದಾರೆ.

ಅಪರಾಧ ನಿಯಂತ್ರಣ ಆಗದಿದ್ರೆ ಡಿಸಿಪಿ, ಎಸ್​​ಪಿ ಹೊಣೆ

ನಿಮ್ಮ ವ್ಯಾಪ್ತಿಗಳಲ್ಲಿ ಅಪರಾಧ ನಿಯಂತ್ರಣ ಆಗದಿದ್ರೆ ಡಿಸಿಪಿ, ಎಸ್​​ಪಿ ಅವರೇ ನೇರ ಹೊಣೆಯಾಗಲಿದ್ದಾರೆ. ಒಳ್ಳೆ ಕೆಲಸ ಮಾಡುವ ಅಧಿಕಾರಿಗಳಿಗೆ ಸಹಕಾರ, ಪ್ರೋತ್ಸಾಹ ನಮ್ಮ ಸರ್ಕಾರ ನೀಡುತ್ತದೆ. ಕರ್ತವ್ಯಲೋಪ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು. ಇನ್ನು ಇದೇ ವೇಳೆ ಡ್ರಗ್ಸ್​​ನಿಂದ ಯುವ ಸಮುದಾಯ ಹಾಳಾಗುತ್ತಿದೆ. ಡ್ರಗ್ಸ್​​ ನಿರ್ಮೂಲನೆ ಒಂದು ಅಭಿಯಾನದ ರೀತಿಯಲ್ಲಿ ಆಗಬೇಕು. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡಬಾರದು ಎಂದರು.

ಇದನ್ನೂ ಓದಿ:ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ, ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು ಎಂದ ಸಿಎಂ ಸಿದ್ದರಾಮಯ್ಯ

ಹೊಸ ವಾಹನಗಳ ಖರೀದಿಗೆ ಪೊಲೀಸ್​ ಇಲಾಖೆಗೆ 100 ಕೋಟಿ ರೂ.

ಹೌದು, ಪೊಲೀಸ್​ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಸಿಎಂ ಬಂಪರ್​ ಕೊಡುಗೆ ನೀಡಿದ್ದಾರೆ. ಹೊಸ ವಾಹನಗಳ ಖರೀದಿಗೆ ಪೊಲೀಸ್​ ಇಲಾಖೆಗೆ 100 ಕೋಟಿ ರೂಪಾಯಿಗೆ ಮುಂದಿನ ಕ್ಯಾಬಿನೆಟ್​ನಲ್ಲಿ ಅನುದಾನಕ್ಕೆ ಅನುಮೋದನೆ ನೀಡಲಾಗುವುದು ಎಂದಿದ್ದಾರೆ. ಪೊಲೀಸ್​ ಸಿಬ್ಬಂದಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ನೈತಿಕ ಪೊಲೀಸ್​ಗಿರಿ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ