AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ರ್ಯಾಲಿ ವೇಳೆ ಭದ್ರತಾ ಲೋಪ: ಬಂದೂಕುಧಾರಿ ರಿಯಾಜ್​​ ಒಳ್ಳೆ ಹುಡಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದ ಕಾಂಗ್ರೆಸ್​ ಮಾಜಿ ಶಾಸಕ

ಬಂದೂಕುಧಾರಿ ರಿಯಾಜ್ ಸಿದ್ದಾಪುರ ರ್ಯಾಲಿ ಉಸ್ತುವಾರಿ ವಹಿಸಿಕೊಂಡಿದ್ದನು. ಅವನು ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ. ಅವನು ಬೇರೆ ಉದ್ದೇಶದಿಂದ ಬಂದಿದ್ದರೆ ಮುಖ್ಯಮಂತ್ರಿಗಳ ರಕ್ಷಣೆಗೆ ನಾವೆ ನಿಲ್ಲುತಿದ್ದವಿ. ಇದು ಆಕಸ್ಮಿಕವಾಗಿ ನಡೆದಿರೋ ಘಟನೆ ಎಂದು ಮಾಜಿ ಶಾಸಕ ಆರ್.ವಿ.ದೇವರಾಜ್ ಹೇಳಿದರು.

ಸಿಎಂ ರ್ಯಾಲಿ ವೇಳೆ ಭದ್ರತಾ ಲೋಪ: ಬಂದೂಕುಧಾರಿ ರಿಯಾಜ್​​ ಒಳ್ಳೆ ಹುಡಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದ ಕಾಂಗ್ರೆಸ್​ ಮಾಜಿ ಶಾಸಕ
ಮಾಜಿ ಶಾಸಕ ಆರ್​​​​. ಬಿ ದೇವರಾಜ್​
TV9 Web
| Updated By: ವಿವೇಕ ಬಿರಾದಾರ|

Updated on:Apr 09, 2024 | 10:33 AM

Share

ಬೆಂಗಳೂರು, ಏಪ್ರಿಲ್​ 09: ಮುಖ್ಯಮಂತ್ರಿ ಸಿದ್ದರಾಮಯ್ಯ (Siddarmaiah) ಅವರಿಗೆ ಮಾಲಾರ್ಪಣೆ ಮಾಡಿದ ಬಂದೂಕುಧಾರಿ ರಿಯಾಜ್ ಸಿದ್ದಾಪುರ ರ್ಯಾಲಿ ಉಸ್ತುವಾರಿ ವಹಿಸಿಕೊಂಡಿದ್ದನು. ಅವನು ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದು ಮಾಜಿ ಶಾಸಕ ಆರ್.ವಿ.ದೇವರಾಜ್ (RV Devaraj) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೂವಿನ ಹಾರ ತೆಗೆದುಕೊಂಡು ಎಲ್ಲರೂ ನಿಂತಿದ್ದರು. ನಾನೇ ರಿಯಾಜ್​ಗೆ ಹೂವಿನ ಹಾರ ಹಾಕಲು ಮೇಲೆ ಕರೆದೆ. ಅದರಂತೆ ರಿಯಾಜ್ ಬಂದು ಹೂವಿನ ಹಾರ ಹಾಕಿದ್ದಾನೆ. ಅದು ಬಿಟ್ಟರೇ ಬೇರೆ ಯಾವುದೇ ಉದ್ದೇಶ ಇರಲಿಲ್ಲ. ಬೇರೆ ಉದ್ದೇಶದಿಂದ ಬಂದಿದ್ದರೆ ಮುಖ್ಯಮಂತ್ರಿಗಳ ರಕ್ಷಣೆಗೆ ನಾವೆ ನಿಲ್ಲುತಿದ್ದವಿ. ಇದು ಆಕಸ್ಮಿಕವಾಗಿ ನಡೆದಿರೋ ಘಟನೆ ಎಂದು ಸ್ಪಷ್ಟಪಡಿಸಿದರು.

ಭದ್ರತಾ ವೈಫಲ್ಯ ಯಾವುದು ಆಗಿಲ್ಲ. ಅವರವರ ರಕ್ಷಣೆಗೆ ಅವರು ಗನ್​ ಇಟ್ಟುಕೊಂಡಿರುತ್ತಾರೆ. ನನ್ನ ಜೊತೆನೂ ಗನ್ ಮ್ಯಾನ್​ಗಳು ಇದ್ದಾರೆ. ವಿಪಕ್ಷಗಳು ಒಳ್ಳೆಯ ವಿಷಯ ಇದ್ರೆ ಮಾತನಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು.

ಇನ್ನು ರಿಯಾಜ್ ಅಹಮದ್​ನನ್ನು ಪೊಲೀಸರು ಈಗಾಗಲೆ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ, “ದೇವರಾಜ್ ಸಾಹೇಬರು ನನ್ನನ್ನು ಮೇಲೆ ಕರೆದರು. ಹೀಗಾಗಿ ವಾಹನ ಮೇಲೆ ಹೋಗಿ ಮುಖ್ಯಮಂತ್ರಿಗಳಿಗೆ ಹಾರ ಹಾಕಿದೆ. ಇಲ್ಲದಿದ್ದರೆ ನಾನು ಮುಖ್ಯಮಂತ್ರಿಗಳ ಬಳಿ ಹೋಗುತ್ತಿರಲಿಲ್ಲ. ನನ್ನ ಪಾಡಿಗೆ ನಾನು ರ್ಯಾಲಿಯನ್ನು ಸೈಡಲ್ಲಿ ನಿಂತುಕೊಂಡು ನೋಡುತ್ತಿದ್ದೆ” ಎಂದು ಪೊಲೀಸರ ಮುಂದೆ ಹೇಳಿದ್ದಾನೆ.

ಇದನ್ನೂ ಓದಿ: ನಾನು ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಬೇಕಾದರೆ ಶ್ರೇಯಸ್ ಪಟೇಲ್​ರನ್ನು ಗೆಲ್ಲಿಸಬೇಕು: ಕೆಎಂ ಶಿವಲಿಂಗೇಗೌಡ

ನನಗೆ ಜೀವ ಬೆದರಿಕೆ ಇದೆ ಸರ್​, ಹೀಗಾಗಿ ಪ್ರತೀದಿನ ಗನ್ ಇಟ್ಟುಕೊಂಡು ಹೊರಗೆ ಬರುತ್ತೇನೆ. ಮುಖ್ಯಮಂತ್ರಿಗಳ ಮುಂದೆ ಗನ್ ಪ್ರದರ್ಶನ ಮಾಡಬೇಕು ಅನ್ನೊ ಉದ್ದೇಶ ನಂಗಿರಲಿಲ್ಲ. ವಾಹನದ ಮೇಲೇರಿದಾಗ ಆಕಸ್ಮಿಕವಾಗಿ ಸೊಂಟದಲ್ಲಿದ್ದ ಗನ್ ಕಂಡಿದೆ. ನಾನು ಗನ್ ತೋರಿಸಿಲ್ಲ ಸಾರ್ ಅಂತ ಹೇಳಿದ್ದಾನೆ.

ಏನಿದು ಪ್ರಕರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 08 ರಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಭರ್ಜರಿ ಪ್ರಚಾರ ಮಾಡಿದ್ದರು. ಈ ವೇಳೆ ವ್ಯಕ್ತಿಯೋರ್ವ ಗನ್​ ಇಟ್ಟುಕೊಂಡು ಬಂದು ಸಿದ್ದರಾಮಯ್ಯ ಅವರಿಗೆ ಹೂವಿನ ಹಾರ ಹಾಕಿ ತೆರಳಿದ್ದನು. ಕ್ಯಾಂಪೇನ್ ವಾಹನ ಏರಿ ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ್ದರು. ಈ ವೇಳೆ ವ್ಯಕ್ತಿ ಸೊಂಟದಲ್ಲಿ ಪಿಸ್ತೂಲ್​ ಇಟ್ಟುಕೊಂಡಿರುವುದು ಕಂಡುಬಂದಿದೆ. ಇದರಿಂದ ಪೊಲೀಸರ ಭದ್ರತಾ ಲೋಪ ಎಸಗಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:26 am, Tue, 9 April 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!