AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯವಾಗಿ ನನ್ನನ್ನು ಮುಗಿಸಿಬಿಟ್ರೆ, ಇಡೀ ಕಾಂಗ್ರೆಸ್​ ಪಕ್ಷವನ್ನೇ ಮುಗಿಸಬಹುದು ಎಂಬ ಭ್ರಮೆಯಲ್ಲಿದ್ದಾರೆ – ಸಿದ್ದರಾಮಯ್ಯ

ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಿದ್ರೆ, ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಹಾಗೂ ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನನಗೆ ಮಸಿ ಬಳಿಯಬೇಕು ಅಂತಾ ಈ ರೀತಿ ಆರೋಪ ಮಾಡ್ತಿದ್ದಾರೆ ಎಂದರು.

ರಾಜಕೀಯವಾಗಿ ನನ್ನನ್ನು ಮುಗಿಸಿಬಿಟ್ರೆ, ಇಡೀ ಕಾಂಗ್ರೆಸ್​ ಪಕ್ಷವನ್ನೇ ಮುಗಿಸಬಹುದು ಎಂಬ ಭ್ರಮೆಯಲ್ಲಿದ್ದಾರೆ - ಸಿದ್ದರಾಮಯ್ಯ
ಸಿದ್ದರಾಮಯ್ಯ
Anil Kalkere
| Edited By: |

Updated on:Aug 19, 2024 | 2:11 PM

Share

ಬೆಂಗಳೂರು, ಆಗಸ್ಟ್​.19: ನಾನು ಯಾವುದೇ ತಪ್ಪು ಮಾಡಿಲ್ಲ, ಮುಂದೆ ಮಾಡುವುದಿಲ್ಲ. ರಾಜಕೀಯ ದುರುದ್ದೇಶದಿಂದ ಇದನೆಲ್ಲ ಮಾಡ್ತಿದ್ದಾರೆ. ರಾಜಕೀಯವಾಗಿ ನಾವು ಎದುರಿಸುತ್ತೇವೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ರೆ, ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​​ ನೀಡುತ್ತಿದ್ದಂತೆ ಬಿಜೆಪಿ ಸಿಎಂ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಮತ್ತೊಂದೆಡೆ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಿದ್ರೆ, ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ತಿಳಿಸಿದರು. ಇನ್ನು ಇದದೇ ವೇಳೆ ಮಾನಸಿಕವಾಗಿ ನೀವು ಡಲ್​ ಆಗಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಡಲ್​ ಆಗಿಲ್ಲ, ಇನ್ನೂ ಸ್ಟ್ರಾಂಗ್ ಆಗಿದ್ದೇನೆ ಎಂದರು.

ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ; ಜಮೀರ್​

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದ ಸಿದ್ದರಾಮಯ್ಯ

ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇವೆ. ಪ್ರಾಸಿಕ್ಯೂಷನ್​ಗೆ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ಬೆಂಗಳೂರಿಗೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬರುತ್ತಿದ್ದಾರೆ. ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸ ಇದೆ. 40 ವರ್ಷದ ರಾಜಕೀಯ ಜೀವನದಲ್ಲಿ ಯಾವ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ನಾನು ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ಮಸಿ ಬಳಿಯಬೇಕು ಅಂತಾ ಈ ರೀತಿ ಆರೋಪ ಮಾಡ್ತಿದ್ದಾರೆ. ರಾಜಕೀಯ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇನ್ನು ಇದೇ ವೇಳೆ ಸಿಎಂ ಸಿದ್ದರಾಮಯ್ಯ, ಆ.23ರಂದು‌ ದೆಹಲಿ ಪ್ರವಾಸ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ದೆಹಲಿಗೆ ಹೊಗ್ತಿದ್ದೀನಿ. ಖರ್ಗೆಯವರು ಬೆಂಗಳೂರಿಗೆ ಬಂದಿದ್ದರು, ಮಾತನಾಡಿದ್ದೀನಿ ಎಂದರು. ನಾನು ಬಡವರ ಪರ ಇರೋದಕ್ಕೆ ಬಿಜೆಪಿ ಅವರಿಗೆ ಭಯ. ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೀನಿ ಅದಕ್ಕೆ ಅವರಿಗೆ ಭಯ. ಸಿದ್ದರಾಮಯ್ಯನ ರಾಜಕೀಯವಾಗಿ ಮುಗಿಸಿದ್ರೆ, ಕಾಂಗ್ರೆಸ್ಸನ್ನೆ ಮುಗಿಸಿದ್ವಿ ಅನ್ನೋ ಭ್ರಮೆಯಲ್ಲಿದ್ದಾರೆ. ಅವರ ಭ್ರಮೆ ಈಡೇರಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:01 pm, Mon, 19 August 24

Follow Us
Anil Kalkere
Anil Kalkere
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್