AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಒಬ್ಬರೂ ತ್ಯಾಗ ಬಲಿದಾನ ಮಾಡಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ತ್ಯಾಗ ಬಲಿದಾನ ಮಾಡಿದ್ದಾರೆ‌‌. ಬಿಜೆಪಿಯವರು ಒಬ್ಬರು ಸಹ ಮಾಡಿಲ್ಲ. ಸಮಾ ಸಮಾಜದ ನಿರ್ಮಾಣ ಮಾಡುವುದಕ್ಕೆ ಕಾಂಗ್ರೆಸ್ ಶ್ರಮಿಸುತ್ತಿದೆ. ಇಂದಿರಾಗಾಂಧಿ ಹಠಾವೋ ಎಂದು ವಿಪಕ್ಷಗಳ ನಾಯಕರು ಎನ್ನುತ್ತಿದ್ದರು. ಆದರೆ ಇಂದಿರಾಗಾಂಧಿ ಗಗರೀಬಿ ಹಠಾವೋ ಎನ್ನುತ್ತಿದ್ದರು ಎಂದು ಸಿಎಂ ಸಿದ್ದರಾಮಯ್ಯ KPCC ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಒಬ್ಬರೂ ತ್ಯಾಗ ಬಲಿದಾನ ಮಾಡಿಲ್ಲ: ಸಿದ್ದರಾಮಯ್ಯ ವಾಗ್ದಾಳಿ
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 19, 2023 | 1:15 PM

Share

ಬೆಂಗಳೂರು, ನ.19: ಸ್ವಾತಂತ್ರ್ಯ ಹೋರಾಟದಲ್ಲಿ ‘ಕೈ’ ನಾಯಕರು ತ್ಯಾಗ ಬಲಿದಾನ ಮಾಡಿದ್ದಾರೆ‌‌. ಬಿಜೆಪಿಯವರು (BJP) ಒಬ್ಬರೂ ತ್ಯಾಗ ಬಲಿದಾನ ಮಾಡಿಲ್ಲ. ಇಂದಿರಾ ಗಾಂಧಿರವರು (Indira Gandhi) ಬಾಲ್ಯದಿಂದಲೇ ಜನಪರ ಧೋರಣೆ ಹೊಂದಿದ್ದರು. ದೇಶಕ್ಕಾಗಿ ಇಂದಿರಾ ಗಾಂಧಿ ಬಹಳ ದೃಢವಾದ ನಿರ್ಧಾರ ತೆಗೆದುಕೊಳ್ತಿದ್ದರು. ಹೀಗಾಗಿ ಇಂದಿರಾ ಗಾಂಧಿರವರನ್ನು ಉಕ್ಕಿನ ಮಹಿಳೆ ಎಂದು ಕರೆಯುತ್ತಿದ್ದರು ಎಂದು ಕೆಪಿಸಿಸಿ (KPCC) ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಬೈರತಿ ಸುರೇಶ್, ಬಿ.ಕೆ ಹರಿಪ್ರಸಾದ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಚಂದ್ರಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೇ ಇಂದಿರಾ ಗಾಂಧಿಯವರನ್ನು ಹಾಡಿ ಹೊಗಳಿದ್ದಾರೆ.

ಇಂದಿರಾಗಾಂಧಿರವರು ಗರೀಬಿ ಹಠಾವೋ ಎನ್ನುತ್ತಿದ್ದರು

ರಾಜಕೀಯ ಸಮಾರಂಭದಲ್ಲಿ ಸಿಳ್ಳೆ ಹೊಡೆಯುವುದು ದಯಮಾಡಿ ಮಾಡಬೇಡಿ. ರಾಷ್ಟ್ರಾದ್ಯಂತ ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆ ಮಾಡ್ತಾ ಇದ್ದೇವೆ. ಅವರು ಹುಟ್ಟಿದ ಸ್ಥಳ ರಾಜಕೀಯ ಕೇಂದ್ರವಾಗಿತ್ತು. ಅವರ ತಂದೆ, ತಾಯಿ, ತಾತ ಸಕ್ರಿಯ ರಾಜಕೀಯ ಮಾಡಿದವರು. ಅವರು ಸಣ್ಣವರು ಇದ್ದಾಗ ಗಾಂಧಿಜೀ ಸೇರಿದಂತೆ ಎಲ್ಲರು ಬರುತ್ತಿದ್ದರು. ಹಾಗಾಗಿ ಇಂದಿರಾಗಾಂಧಿ ಬಾಲ್ಯದಿಂದಲೇ ಜನಪರ ಧೋರಣೆ ಹೊಂದಿದ್ದರು. ದೇಶಕ್ಕಾಗಿ ಬಹಳ ದೃಢವಾದ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಆದ್ದರಿಂದ ಉಕ್ಕಿನ ಮಹಿಳೆ ಎಂದು ಕರೆಯುತ್ತಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ತ್ಯಾಗ ಬಲಿದಾನ ಮಾಡಿದ್ದಾರೆ‌‌. ಬಿಜೆಪಿಯವರು ಒಬ್ಬರು ಸಹ ಮಾಡಿಲ್ಲ. ಸಮಾ ಸಮಾಜದ ನಿರ್ಮಾಣ ಮಾಡುವುದಕ್ಕೆ ಕಾಂಗ್ರೆಸ್ ಶ್ರಮಿಸುತ್ತಿದೆ. ಇಂದಿರಾಗಾಂಧಿ ಹಠಾವೋ ಎಂದು ವಿಪಕ್ಷಗಳ ನಾಯಕರು ಎನ್ನುತ್ತಿದ್ದರು. ಆದರೆ ಇಂದಿರಾಗಾಂಧಿ ಗಗರೀಬಿ ಹಠಾವೋ ಎನ್ನುತ್ತಿದ್ದರು ಎಂದು ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:  ಇಂದಿರಾ ಗಾಂಧಿ ಜನಪ್ರಿಯತೆ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಹೇಳಿದ ಕತೆ!

ಇನ್ನು ಇದೇ ವೇಳೆ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಮಾತನಾಡಿದ್ದು, ಇಡೀ ರಾಷ್ಟ್ರದ ಇತಿಹಾಸದಲ್ಲಿ ಬಹಳ ಪ್ರಮುಖ ದಿನ. ಇಂದಿರಾ ಗಾಂಧಿಯವರು ಹುಟ್ಟಿದ ಪವಿತ್ರ ದಿನ. ಝಾನ್ಸಿ ರಾಣಿ ಹಾಗೂ ಇಂದಿರಾಗಾಂಧಿ ಬಹಳ ಪ್ರಮುಖ ಮಹಿಳೆಯರು. ಇಂದಿರಾಗಾಂಧಿ ಹಸಿರು ಕ್ರಾಂತಿ ಮಾಡಿದವರು. ಈಗಿನ ಪ್ರಧಾನಿ ಅಂತಹ ಯಾವುದೆ ಕ್ರಾಂತಿ ಮಾಡಿಲ್ಲ. ಅವರದ್ದೇನಿದ್ರೂ ಸ್ಕ್ರೀನ್ ಕ್ರಾಂತಿ. ಕೇವಲ ಟಿವಿ ಸ್ಕ್ರೀನ್ ಗಳ ಮೇಲೆ ಕಾಣಿಸುವ ಕ್ರಾಂತಿ ಮಾಡಿದವರು. ಕೇವಲ ದ್ವಜ ಹಿಡಿದು ಭಾರತ್ ಮಾತಾಕಿ ಜೈ ಅಂದ್ರೆ ದೇಶಭಕ್ತ ಅಲ್ಲ. ದೇಶದ ಆಸ್ತಿಪಾಸ್ತಿಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಬೇಕು. ಅದನ್ನು ಇಂದಿರಾಗಾಂಧಿ ಮಾಡಿದ್ದರು. ಯಾವುದೇ ಧರ್ಮದ ಬಗ್ಗೆ ಭೇದ ಮಾಡದೇ ತಮ್ಮ ಪ್ರಾಣಕ್ಕೆ ಬೆದರಿಕೆ ಇದ್ದರೂ ಸಿಕ್ಕರನ್ನು ಅಂಗರಕ್ಷಕರಾಗಿ ಇಟ್ಟುಕೊಂಡಿದ್ದರು. ಈಗ ಅಂತಹ ಜಾತ್ಯಾತೀತ ಭಾವನೆ ಯಾರಲ್ಲೂ ಕಾಣುವುದಿಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ