AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸಭೆ ಅಂತ್ಯ: ಕ್ರಿಸ್​ಮಸ್​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದ ಸಿಎಂ

ಕರ್ನಾಟಕದಲ್ಲಿ ಕೊರೋನಾ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕೆಲ ಖಡಕ್ ಸೂಚನೆಗಳನ್ನು ನೀಡಿದ್ದಾರೆ.

ಕೋವಿಡ್ ಸಭೆ ಅಂತ್ಯ: ಕ್ರಿಸ್​ಮಸ್​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದ ಸಿಎಂ
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆ
Anil Kalkere
| Edited By: |

Updated on:Dec 21, 2023 | 2:56 PM

Share

ಬೆಂಗಳೂರು, (ಡಿಸೆಂಬರ್ 21): ಕರ್ನಾಟಕದಲ್ಲಿ (Karnataka) ಕೋವಿಡ್ (Coronavirus)​ ಆತಂಕ ಶುರುವಾಗಿದ್ದು, ಈ ಬಗ್ಗೆ ಇಂದು (ಡಿಸೆಂಬರ್ 21) ಗೃಹ ಕಚೇರಿ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah) ಮಹತ್ವದ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಈಗಾಗಲೇ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. Tac ಜೊತೆ ಚರ್ಚೆ ಮಾಡಿ ಅವರ ಸಲಹೆ ತೆಗೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಮಾಡಿದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗೆ ಸೂಚನೆ ನೀಡಿದ್ದೇನೆ. ಆಕ್ಸಿಜನ್, ಬೆಡ್ ಸಮಸ್ಯೆ ಬರಬಾರದು ಎಂದು ಹೇಳಿದ್ದೇನೆ. ಬೇರೆ ಖಾಯಿಲೆಗಳನ್ನ ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆಗೆ ಸೂಚಿಸಿದ್ದೇನೆ ಎಂದರು. ಇನ್ನು ಇದೇ ವೇಳೆ ಕ್ರಿಸ್​ಮಸ್​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಹಾಗೇ ಇನ್ನುಳಿದವರೂ ಸಹ ಜನಸಂದಣಿ ಇರುವ ಕಡೆ ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್​​ ಹಾಕುವ ಪರಿಸ್ಥಿತಿ ಬಂದಿಲ್ಲ. ಕಡ್ಡಾಯವಾಗಿ ಮಾಸ್ಕ್​ ಹಾಕಿ ಎಂದು ಹೇಳುತ್ತಿಲ್ಲ. ಸಲಹೆ ಅಷ್ಟೇ. ಇನ್ನು ಸೂಕ್ತ ಕೋವಿಡ್ ಚಿಕಿತ್ಸೆ ನೀಡಲು ಸೂಚಿಸಿದ್ದೇನೆ. ಔಷಧಿ, ಉಪಕರಣಗಳ ಕೊರತೆ ಆಗಬಾರದು. ವ್ಯಾಕ್ಸಿನ್ ಅಗತ್ಯ ಇದ್ರೆ ಪ್ರಾರಂಭ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ತಿಳಿಸಿದರು.

ಇದನ್ನೂ ಓದಿ: ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಹೆಚ್ಚಾಗಲಿದೆ; ಸಿಎಂಗೆ ತಜ್ಞರ ವರದಿ

ಇದು ಈಗ ಬಂದಿರುವ ಉಪತಳಿ JN.1. ಇದು ಒಮಿಕ್ರಾನ್ ನ ಉಪತಳಿ. ರಾಜ್ಯದಲ್ಲಿ 92 ಜನರಿಗೆ ಪಾಸಿಟಿವ್ ಎನ್ನುವುದು ಗೊತ್ತಾಗಿದೆ. ಬೆಂಗಳೂರು ನಗರದಲ್ಲೇ 80 ಕೇಸ್ ಇವೆ. ಮೈಸೂರು 5, ಸೇರಿದಂತೆ 372 ಸೋಂಕಿತರಿಗೆ ಮನೆಯಲ್ಲೇ ಕ್ವಾರಂಟೈನ್ ಮಾಡಲಾಗಿದೆ. 20 ಸೋಂಕಿತರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಜನ ಐಸಿಯು ನಲ್ಲಿ‌ ಇದ್ದಾರೆ. ಆದ್ರೆ, ಕೋವಿಡ್ ನಿಂದ ಅಲ್ಲ. ಅವರಿಗೆ ಬೇರೆ ಬೇರೆ ಕಾಯಿಲೆಗಳು ಇವೆ. ಇನ್ನು ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಇದ್ದ ಮೂರು ಜನ ಸಾವನ್ನಪ್ಪಿದ್ದಾರೆ. ಕೋವಿಡ್ ನಿಂದಲೇ ಸಾವನ್ನಪ್ಪಿದ್ದಾರೆ ಅಂತ ಹೇಳುವುದಕ್ಕೆ ಆಗುವುದಿಲ್ಲ. ಕಿಡ್ನಿ, ಶ್ವಾಸಕೋಶ, ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ವಿವರಿಸಿದರು.

ನಿತ್ಯ ಐದು ಸಾವಿರ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಕ್ಯಾಬಿನಿಟ್ ಉಪ ಸಮಿತಿಯಲ್ಲಿ ಚರ್ಚೆ ಮಾಡುತ್ತೇವೆ. RTPCR 3,500 ಸೇರಿ ಒಟ್ಟು 5 ಸಾವಿರ ಟೆಸ್ಟ್ ನಿತ್ಯ ಆಗಲಿದ್ದು, ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ಗೆ ಸೂಚಿಸಲಾಗಿದೆ. ಈ ಖಾಯಿಲೆಗೆ ಯಾರೂ ಭಯ, ಆತಂಕ ಪಡುವ ಅಗತ್ಯವಿಲ್ಲ. ಆದ್ರೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

ಆಕ್ಸಿಜನ್, ವೆಂಟಿಲೇಟರ್, ಬೆಡ್ ಮುಂಚೆಯೇ ತಯಾರಿ ಮಾಡಿಕೊಂಡಿರಬೇಕು. ಅಗತ್ಯ ಉಪಕರಣಗಳನ್ನ ಒದಗಿಸಿಕೊಳ್ಳಬೇಕು ಅಂತ ಆರೋಗ್ಯ ಇಲಾಖೆಗೆ ಹೇಳಿದ್ದೇನೆ. ಈ ಹಿಂದೆ ವ್ಯಾಕ್ಸಿನ್ ಕೇಂದ್ರ ಸರ್ಕಾರ ಕೊಡುತ್ತಿತ್ತು. ಅಲ್ಲಿಯವರೆಗೆ ಕಾಯಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Published On - 2:49 pm, Thu, 21 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್