AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಸಭೆಯಲ್ಲಿ ದೋಸ್ತಿ, ಹೊರಗಡೆ ಕುಸ್ತಿ: ಸಿದ್ದರಾಮಯ್ಯ ಮತ್ತು ಅಶೋಕ್​​ ನಡುವೆ ಕಳ್ಳೆತ್ತು, ಕುಂಟೆತ್ತು ಕಾಳಗ

ವಿಧಾನಸಭೆಯಲ್ಲಿ ಮೃದುವಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಮಾತು, ಉಪಚುನಾವಣೆ ಅಖಾಡದಲ್ಲಿ ತೀವ್ರ ವಾಗ್ಯುದ್ಧಕ್ಕೆ ತಿರುಗಿದೆ. ಸಿದ್ದರಾಮಯ್ಯ ಬಿಜೆಪಿಗರನ್ನು 'ಕಳ್ಳೆತ್ತುಗಳು' ಎಂದಿದ್ದರೆ, ಅಶೋಕ್ 'ಸಿದ್ದರಾಮಯ್ಯ-ಡಿಕೆಶಿ ಜೋಡೆತ್ತುಗಳಲ್ಲ, ಕುಂಟೆತ್ತುಗಳು' ಎಂದು ತಿರುಗೇಟು ನೀಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ, ಅಭಿವೃದ್ಧಿ ಹಾಗೂ ಸಾಲದ ವಿಚಾರದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

ವಿಧಾನ ಸಭೆಯಲ್ಲಿ ದೋಸ್ತಿ, ಹೊರಗಡೆ ಕುಸ್ತಿ: ಸಿದ್ದರಾಮಯ್ಯ ಮತ್ತು ಅಶೋಕ್​​ ನಡುವೆ ಕಳ್ಳೆತ್ತು, ಕುಂಟೆತ್ತು ಕಾಳಗ
ಸಿದ್ದರಾಮಯ್ಯ ಮತ್ತು ಅಶೋಕ್​​ ನಡುವೆ ಮಾತಿನ ಕಾಳಗ
ಪ್ರಸನ್ನ ಹೆಗಡೆ
|

Updated on: Mar 31, 2026 | 5:03 PM

Share

ಬೆಂಗಳೂರು, ಮಾರ್ಚ್​​ 31: ವಿಧಾನಸಭೆ ಬಜೆಟ್​​ ಅಧಿವೇಶನದ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್​​. ಅಶೋಕ್​​ ನಡುವೆ ಹೇಳಿಕೊಳ್ಳುವಂತಹ ವಾಗ್ಯುದ್ಧವೇನೂ ನಡೆದಿರಲಿಲ್ಲ. ಇಬ್ಬರ ಮಾತುಗಳೂ ಕೊಂಚ ಮಟ್ಟಿಗೆ ಮೃದು ಎಂಬಂತೆಯೇ ಭಾಸವಾಗಿತ್ತು. ಆದರೆ ಇದೀಗ ಉಪ ಚುನಾವಣೆ ಅಖಾಡದಲ್ಲಿ ಇವರಿಬ್ಬರ ನಡುವಿನ ಮಾತಿನ ಸಮರ ಬಹಳ ಜೋರಾಗಿಯೇ ನಡೆಯುತ್ತಿದೆ. ನಿನ್ನೆ ಬಾಗಲಕೋಟೆಗೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಸಿಎಂ ಸಿದ್ದರಾಮಯ್ಯ 2028ಕ್ಕೂ ನಾವೇ ಗೆಲ್ತೇವೆ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಉಳುಮೆ ಮಾಡುವ ಎತ್ತುಗಳು ಬೇಕು. ಬಿಜೆಪಿಯವರು ಕಳ್ಳೆತ್ತುಗಳು, ಅವರಿಗೆ ವೋಟ್​​ ಹಾಕಬಾರದು ಎಂದಿದ್ದರು. ಮುಖ್ಯಮಂತ್ರಿಗಳ ಈ ಹೇಳಿಕೆಗೀಗ ಅಶೋಕ್​​ ಕೌಂಟರ್​​ ಕೊಟ್ಟಿದ್ದಾರೆ.

‘ಜೋಡೆತ್ತುಗಳಲ್ಲ, ಕುಂಟೆತ್ತುಗಳು’

ಕಾಂಗ್ರೆಸ್​​ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಆರ್​​. ಅಶೋಕ್​​, ಸಿದ್ದರಾಮಯ್ಯ ಮತ್ತು ಡಿಕೆ ಜೋಡೆತ್ತುಗಳಲ್ಲ, ಕುಂಟೆತ್ತುಗಳು ಎಂದು ತಿವಿದಿದ್ದಾರೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ಒಬ್ಬರ ದಾರಿಗೆ ಮತ್ತೊಬ್ಬರು ಬರಲ್ಲ. ಹೀಗಾಗಿ ಕುಂಟೆತ್ತುಗಳು ಬೇಡವೆಂದು ಜನ ತೀರ್ಮಾನಿಸಿದ್ದಾರೆ. ನಾವು ಅಧಿಕಾರದಲ್ಲಿದ್ದಾಗ ಹೆಚ್ಚು ಸಾಲ ಮಾಡದೆ ಅಭಿವೃದ್ಧಿಗೆ ಒತ್ತು ನೀಡಿದ್ದೆವು. ಆದರೆ ಈ ಸರ್ಕಾರ 3 ವರ್ಷಗಳಿಂದ ಯಾವುದೇ ಅಭಿವೃದ್ಧಿ ಮಾಡಿಲ್ಲ. ಕೇಂದ್ರ ಸರ್ಕಾರ ಪೆಟ್ರೋಲ್​, ಡೀಸೆಲ್​ ಬೆಲೆ ಕಡಿಮೆ‌ ಮಾಡಿದೆ. ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲವನ್ನೂ ಜಾಸ್ತಿ ಮಾಡಿದೆ. ಉಪ‌ ಚುನಾವಣೆ ಬಳಿಕ ಜನರ ಮೇಲೆ ಎಲ್ಲಾ ತೆರಿಗೆ ಹಾಕಲಿದ್ದು, ಜನ ಕಾಂಗ್ರೆಸ್ ಸರ್ಕಾರಕ್ಕೆ ಈಗ ಬುದ್ಧಿ ಕಲಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ಸಿದ್ದರಾಮಯ್ಯ ಸಮಾಜವಾದಿ ಅಲ್ಲ ಮಜಾ ರಾಮಯ್ಯ ಎಂದೂ ಕಿಡಿ ಕಾರಿರುವ ಅಶೋಕ್​​, ಕರ್ನಾಟಕದ ಆರ್ಥಿಕ ಪರಿಸ್ಥಿತಿ ಐಸಿಯುನಲ್ಲಿದೆ. ಸಿಎಂ ಸಿದ್ದರಾಮಯ್ಯ ಬ್ಲಾಕ್ ಮ್ಯಾಜಿಕ್ ಮಾಡಿದ್ದಾರೆ. ಆರ್ಥಿಕ ಶಿಸ್ತಿನ ರೇಖೆ ದಾಟಿದೆ, ಆದ್ರೆ ದಾಟಿಲ್ಲ ಎಂಬಂತೆ ತೋರಿಸ್ತಾರೆ. ಗೃಹಲಕ್ಷ್ಮೀ ಯೋಜನೆ ಹಣ ಕೇವಲ 10 ತಿಂಗಳು ನೀಡಿ, ಎರಡು ತಿಂಗಳಿನದ್ದನ್ನು ದೋಚಿದ್ದಾರೆ. ರಾಜ್ಯದಿಂದ ವರ್ಷಕ್ಕೆ 45,600 ಕೋಟಿ ಬಡ್ಡಿ ಕಟ್ಟಬೇಕಿದ್ದು, ಪ್ರತಿ ದಿನಕ್ಕೆ 125 ಕೋಟಿ ಹಣ ಬಡ್ಡಿ ಭರಿಸಬೇಕಿದೆ. ಸಿಎಂ ಸಿದ್ದರಾಮಯ್ಯ ಸಾಲಗಾರ ಆಗಿದ್ದು, ರಾಜ್ಯದ ಜನರು ಈ ಸರ್ಕಾರ ಕಿತ್ತೊಗೆಯುವ ಹಾದಿಯಲ್ಲಿದ್ದಾರೆ ಎಂದು ಅಶೋಕ್​​ ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ