AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಜತೆ ನಾವಿದ್ದೇವೆ, ಉಗ್ರರನ್ನು ಸಂಪೂರ್ಣ ಮಟ್ಟ ಹಾಕಿ: ಸಿಎಂ ಸಿದ್ದರಾಮಯ್ಯ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಭರತ್​ ಭೂಷಣ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಭಯೋತ್ಪಾದನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ದೇಶದಲ್ಲಿ ಉಗ್ರರನ್ನು ಸಂಪೂರ್ಣ ಮಟ್ಟಹಾಕಬೇಕಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಎಲ್ಲ ರೀತಿಯ ಬೆಂಬಲ, ಸಹಕಾರ ನೀಡಲಿದ್ದೇವೆ ಎಂದರು.

ಕೇಂದ್ರದ ಜತೆ ನಾವಿದ್ದೇವೆ, ಉಗ್ರರನ್ನು ಸಂಪೂರ್ಣ ಮಟ್ಟ ಹಾಕಿ: ಸಿಎಂ ಸಿದ್ದರಾಮಯ್ಯ
ಭರತ್​ ಭೂಷಣ್ ಪತ್ನಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
Follow us
ಶಾಂತಮೂರ್ತಿ
| Updated By: Ganapathi Sharma

Updated on: Apr 24, 2025 | 9:19 AM

ಬೆಂಗಳೂರು, ಏಪ್ರಿಲ್ 24: ನಮ್ಮ ದೇಶದಲ್ಲಿ ಉಗ್ರ ಚಟುವಟಿಕೆ ಇರಬಾರಬಾರದು. ಭಯೋತ್ಪಾದನೆಯನ್ನು (Terrorism) ಸಂಪೂರ್ಣ ಮಟ್ಟ ಹಾಕಬೇಕು. ಕೇಂದ್ರ ಸರ್ಕಾರ ಎಲ್ಲಾ ಉಗ್ರರನ್ನು ನಾಶಪಡಿಸುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಜತೆ ನಾವೆಲ್ಲ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು. ಪಹಲ್ಗಾಂನಲ್ಲಿ ಉಗ್ರ ದಾಳಿಯಲ್ಲಿ (Pahalgam Terror Attack) ಮೃತಪಟ್ಟ ಭರತ್​ ಭೂಷಣ್ ಪಾರ್ಥಿವ ಶರೀರದ​ ಅಂತಿಮ ದರ್ಶನ ಪಡೆದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಮಾನೀಯವಾದ ಕೃತ್ಯ ಇದು, ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಭರತ್​ ಭೂಷಣ್ ಅವರನ್ನು ಹಾಡಹಗಲೇ ಹೆಂಡತಿ, ಮಗುವಿನ ಕಣ್ಣೇದುರೇ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು. ನಮ್ಮ ದೇಶದಲ್ಲಿ ಉಗ್ರರು ಇರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಭಯೋತ್ಪಾದಕರ ದಾಳಿಯಲ್ಲಿ ಭರತ್​ ಭೂಷಣ್, ಮಂಜುನಾಥ್​ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಲ್ಲದೆ, ಭರತ್​ ಭೂಷಣ್​, ಮಂಜುನಾಥ್ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗುತ್ತದೆ. ಭರತ್ ಅಂತಿಮ ಸಂಸ್ಕಾರದಲ್ಲಿ ರಾಮಲಿಂಗಾರೆಡ್ಡಿ ಭಾಗಿಯಾಗುತ್ತಾರೆ. ಮಂಜುನಾಥ್​ ಅಂತ್ಯಕ್ರಿಯೆಯಲ್ಲಿ ಮಧು ಬಂಗಾರಪ್ಪ ಭಾಗಿಯಾಗುತ್ತಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ
Image
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
Image
ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್‌ಪೆಕ್ಟರ್ ಭರ್ಜರಿ ರೋಡ್ ಶೋ
Image
ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗರ ಮೃತದೇಹ ಬೆಂಗಳೂರಿಗೆ ಬರುವುದು ಯಾವಾಗ?
Image
ಉಗ್ರರ ದಾಳಿ: ಮೃತ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸರ್ಕಾರ

ಬಹುಶಃ ಇದು ಕೇಂದ್ರ ಸರ್ಕಾರ ಗುಪ್ತಚರ ಇಲಾಖೆಯ ವೈಫಲ್ಯ ಆಗಿರಬಹುದು. ಹಾಗೆಂದು, ಮೃತರ ಕುಟುಂಬದದ ಜೊತೆ ಯಾವಾಗಲೂ ರಾಜ್ಯ ಸರ್ಕಾರ ಇರುತ್ತದೆ. ಕಾಶ್ಮೀರದಲ್ಲಿ ಸಿಲುಕಿದ ಇನ್ನುಳಿದವರನ್ನು ಕರೆತರಲು ಸಚಿವ ಸಂತೋಷ್ ಲಾಡ್​​ರನ್ನು ಕಳುಹಿಸಿದ್ದೇನೆ. 170ಕ್ಕೂ ಹೆಚ್ಚು ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಪಹಲ್ಗಾಮ್ ದಾಳಿ: ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ

ಮುಖ್ಯಮಂತ್ರಿಗಳು ಬಂದ ಕೂಡಲೇ, ‘ತಾತಾ’ ಎಂದ ಭರತ್ ಭೂಷಣ್ ಮಗುವಿನ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ ಹೇಳಿದರು.  ಕುಟುಂಬಸ್ಥರ ಬಳಿ ಸಿದ್ದರಾಮಯ್ಯ ಮಾಹಿತಿ ಪಡೆದರು. ಇದೇ ವೇಳೆ, ಮಗು ಇದೆ ಎಂದರೂ ಕೇಳಲಿಲ್ಲ ಸರ್ ಎಂದು ಭರತ್​ ಪತ್ನಿ ಕಣ್ಣೀರು ಹಾಕಿದರು. ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ, ನಿಮ್ಮ ಜತೆ ಸರ್ಕಾರ ಇದೆ ಎಂದು ಧೈರ್ಯದ ಮಾತುಗಳನ್ನಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು