6 ಟಿಎಂಸಿ ನೀರು ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೇಸಿಗೆ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

6 ಟಿಎಂಸಿ ನೀರು ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ, ಸಿಎಂ ಏಕನಾಥ್ ಶಿಂಧೆ
Follow us
|

Updated on:May 31, 2023 | 4:17 PM

ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ (water) ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಸಿಎಂ ಸಿದ್ಧರಾಮಯ್ಯ (Cm Siddaramaiah) ಪತ್ರ ಬರೆದಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ಜನರಿಗೆ ಕುಡಿಯುವ ನೀರು ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಉಜ್ಜನಿ, ಕೋಯ್ನಾ ಡ್ಯಾಂನಿಂದ ಕೃಷ್ಣಾ ಹಾಗೂ ಭೀಮಾ ನದಿಗೆ ತಲಾ 3 ಟಿಎಂಸಿ ಅಂತೆ ಒಟ್ಟು 6 ಟಿಎಂಸಿ ನೀರು ಬಿಡುಗಡೆಗೆ ಕರ್ನಾಟಕ ಮನವಿ ಮಾಡಿದೆ.

ಮೇ ತಿಂಗಳಲ್ಲಿ 1 ಟಿಎಂಸಿ ನೀರು ಬಿಡುಗಡೆಗೆ ಪತ್ರ ಬರೆಯಲಾಗಿತ್ತು. ಆಗ ಜಲಾಶಯದಿಂದ ನೀರು ಬಿಡುಗಡೆ ಮಾಡಿದಕ್ಕೆ ಧನ್ಯವಾದಗಳು. ಈಗ ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿಗಾಗಿ ಮತ್ತೆ ನೀರು ಬಿಡುಗಡೆ ಮಾಡುವಂತೆ ಪತ್ರದ ಮೂಲಕ ಕೋರಲಾಗಿದೆ.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3,000 ಕೋಟಿ ರೂ. ಅಕ್ರಮ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ

ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರತೆ ಇನ್ನೂ ಮುಂದುವರೆದಿದೆ. ಜೊತೆಗೆ ಈ ಭಾಗದಲ್ಲಿ ಮುಂಗಾರು ಸಹ ಇನ್ನೂ ಆರಂಭವಾಗಿಲ್ಲ. ಹಾಗಾಗಿ ಮಾನವರು ಮತ್ತು ಜಾನುವಾರುಗಳ ಬಳಕೆಗಾಗಿ ನೀರಿನ ಅವಶ್ಯಕತೆಯಿದೆ. ಕುಡಿಯುವ ನೀರಿನ ಪೂರೈಕೆಗಾಗಿ ವಾರ್ನಾ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ತಕ್ಷಣ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶನ ನೀಡಬೇಕೆಂದು ಸಿಎಂ ಸಿದ್ಧರಾಮಯ್ಯ ವಿನಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:01 pm, Wed, 31 May 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್