AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಟಿಎಂಸಿ ನೀರು ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೇಸಿಗೆ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

6 ಟಿಎಂಸಿ ನೀರು ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ, ಸಿಎಂ ಏಕನಾಥ್ ಶಿಂಧೆ
ಗಂಗಾಧರ​ ಬ. ಸಾಬೋಜಿ
|

Updated on:May 31, 2023 | 4:17 PM

Share

ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ (water) ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಸಿಎಂ ಸಿದ್ಧರಾಮಯ್ಯ (Cm Siddaramaiah) ಪತ್ರ ಬರೆದಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ಜನರಿಗೆ ಕುಡಿಯುವ ನೀರು ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಉಜ್ಜನಿ, ಕೋಯ್ನಾ ಡ್ಯಾಂನಿಂದ ಕೃಷ್ಣಾ ಹಾಗೂ ಭೀಮಾ ನದಿಗೆ ತಲಾ 3 ಟಿಎಂಸಿ ಅಂತೆ ಒಟ್ಟು 6 ಟಿಎಂಸಿ ನೀರು ಬಿಡುಗಡೆಗೆ ಕರ್ನಾಟಕ ಮನವಿ ಮಾಡಿದೆ.

ಮೇ ತಿಂಗಳಲ್ಲಿ 1 ಟಿಎಂಸಿ ನೀರು ಬಿಡುಗಡೆಗೆ ಪತ್ರ ಬರೆಯಲಾಗಿತ್ತು. ಆಗ ಜಲಾಶಯದಿಂದ ನೀರು ಬಿಡುಗಡೆ ಮಾಡಿದಕ್ಕೆ ಧನ್ಯವಾದಗಳು. ಈಗ ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿಗಾಗಿ ಮತ್ತೆ ನೀರು ಬಿಡುಗಡೆ ಮಾಡುವಂತೆ ಪತ್ರದ ಮೂಲಕ ಕೋರಲಾಗಿದೆ.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3,000 ಕೋಟಿ ರೂ. ಅಕ್ರಮ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ

ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರತೆ ಇನ್ನೂ ಮುಂದುವರೆದಿದೆ. ಜೊತೆಗೆ ಈ ಭಾಗದಲ್ಲಿ ಮುಂಗಾರು ಸಹ ಇನ್ನೂ ಆರಂಭವಾಗಿಲ್ಲ. ಹಾಗಾಗಿ ಮಾನವರು ಮತ್ತು ಜಾನುವಾರುಗಳ ಬಳಕೆಗಾಗಿ ನೀರಿನ ಅವಶ್ಯಕತೆಯಿದೆ. ಕುಡಿಯುವ ನೀರಿನ ಪೂರೈಕೆಗಾಗಿ ವಾರ್ನಾ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ತಕ್ಷಣ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶನ ನೀಡಬೇಕೆಂದು ಸಿಎಂ ಸಿದ್ಧರಾಮಯ್ಯ ವಿನಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:01 pm, Wed, 31 May 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?