AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಟಿಎಂಸಿ ನೀರು ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೇಸಿಗೆ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

6 ಟಿಎಂಸಿ ನೀರು ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ, ಸಿಎಂ ಏಕನಾಥ್ ಶಿಂಧೆ
ಗಂಗಾಧರ​ ಬ. ಸಾಬೋಜಿ
|

Updated on:May 31, 2023 | 4:17 PM

Share

ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ (water) ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಸಿಎಂ ಸಿದ್ಧರಾಮಯ್ಯ (Cm Siddaramaiah) ಪತ್ರ ಬರೆದಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ಜನರಿಗೆ ಕುಡಿಯುವ ನೀರು ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಉಜ್ಜನಿ, ಕೋಯ್ನಾ ಡ್ಯಾಂನಿಂದ ಕೃಷ್ಣಾ ಹಾಗೂ ಭೀಮಾ ನದಿಗೆ ತಲಾ 3 ಟಿಎಂಸಿ ಅಂತೆ ಒಟ್ಟು 6 ಟಿಎಂಸಿ ನೀರು ಬಿಡುಗಡೆಗೆ ಕರ್ನಾಟಕ ಮನವಿ ಮಾಡಿದೆ.

ಮೇ ತಿಂಗಳಲ್ಲಿ 1 ಟಿಎಂಸಿ ನೀರು ಬಿಡುಗಡೆಗೆ ಪತ್ರ ಬರೆಯಲಾಗಿತ್ತು. ಆಗ ಜಲಾಶಯದಿಂದ ನೀರು ಬಿಡುಗಡೆ ಮಾಡಿದಕ್ಕೆ ಧನ್ಯವಾದಗಳು. ಈಗ ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿಗಾಗಿ ಮತ್ತೆ ನೀರು ಬಿಡುಗಡೆ ಮಾಡುವಂತೆ ಪತ್ರದ ಮೂಲಕ ಕೋರಲಾಗಿದೆ.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3,000 ಕೋಟಿ ರೂ. ಅಕ್ರಮ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ

ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರತೆ ಇನ್ನೂ ಮುಂದುವರೆದಿದೆ. ಜೊತೆಗೆ ಈ ಭಾಗದಲ್ಲಿ ಮುಂಗಾರು ಸಹ ಇನ್ನೂ ಆರಂಭವಾಗಿಲ್ಲ. ಹಾಗಾಗಿ ಮಾನವರು ಮತ್ತು ಜಾನುವಾರುಗಳ ಬಳಕೆಗಾಗಿ ನೀರಿನ ಅವಶ್ಯಕತೆಯಿದೆ. ಕುಡಿಯುವ ನೀರಿನ ಪೂರೈಕೆಗಾಗಿ ವಾರ್ನಾ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ತಕ್ಷಣ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶನ ನೀಡಬೇಕೆಂದು ಸಿಎಂ ಸಿದ್ಧರಾಮಯ್ಯ ವಿನಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:01 pm, Wed, 31 May 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ