Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇವೆಗೆ ಸಜ್ಜಾದ ಬೈಯಪ್ಪನಹಳ್ಳಿ-KR ಪುರಂ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ; ಸೆ.7ಕ್ಕೆ CMRS ಪರಿಶೀಲನೆ

ಬೈಯಪ್ಪನಹಳ್ಳಿ-K.R.ಪುರಂ, ಕೆಂಗೇರಿ-ಚಲ್ಲಘಟ್ಟ ಮಾರ್ಗದ ಮೆಟ್ರೋ ಸಂಚಾರಕ್ಕೆ ಸಿದ್ಧವಾಗುತ್ತಿದೆ. ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ವಿಸ್ಕೃತ ಮೆಟ್ರೋ ಮಾರ್ಗ ಸೇವೆಗೆ ಲಭ್ಯವಾಗಲಿದೆ ಎಂದು ಬಿಎಂಆರ್​ಸಿಎಲ್​ನ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಸೆಪ್ಟೆಂಬರ್ 7 ರ ಬಳಿಕ ಸುರಕ್ಷತಾ ಆಯುಕ್ತರು ಒಂದು ವಾರಗಳ ಕಾಲ ವಿಸ್ತೃತ ಮೆಟ್ರೋ ಮಾರ್ಗ ತಪಾಸಣೆ ನಡೆಸಲಿದ್ದಾರೆ.

ಸೇವೆಗೆ ಸಜ್ಜಾದ ಬೈಯಪ್ಪನಹಳ್ಳಿ-KR ಪುರಂ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ; ಸೆ.7ಕ್ಕೆ CMRS ಪರಿಶೀಲನೆ
ಸಾಂದರ್ಭಿಕ ಚಿತ್ರ
Follow us
Poornima Agali Nagaraj
| Updated By: ಆಯೇಷಾ ಬಾನು

Updated on:Aug 29, 2023 | 12:04 PM

ಬೆಂಗಳೂರು, ಆ.29: ಬೆಂಗಳೂರಿನಲ್ಲಿ ಮತ್ತೊಂದು ಹಂತದ ಮೆಟ್ರೋ ಸಂಚಾರಕ್ಕೆ(Namma Metro) ಸಜ್ಜಾಗುತ್ತಿದೆ. ಬೈಯಪ್ಪನಹಳ್ಳಿ-K.R.ಪುರಂ(Baiyappanahalli To KR puram Metro), ಕೆಂಗೇರಿ-ಚಲ್ಲಘಟ್ಟ(Kengeri to Challaghatta Metro) ಮಾರ್ಗದ ಮೆಟ್ರೋ ಸಂಚಾರಕ್ಕೆ ಸಿದ್ಧವಾಗುತ್ತಿದೆ. ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ವಿಸ್ಕೃತ ಮೆಟ್ರೋ ಮಾರ್ಗ ಸೇವೆಗೆ ಲಭ್ಯವಾಗಲಿದೆ ಎಂದು ಬಿಎಂಆರ್​ಸಿಎಲ್​ನ(BMRCL) ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈಗಾಗಲೇ ಸಂಪೂರ್ಣ ಕಾಮಗಾರಿ ಮುಗಿಸಿ ರೈಲಿನ ಟ್ರಯಲ್ ರನ್ ನಡೆಸಲಾಗುತ್ತಿದೆ. ಸೆಪ್ಟೆಂಬರ್ 7 ರ ಬಳಿಕ ಸುರಕ್ಷತಾ ಆಯುಕ್ತರು ಒಂದು ವಾರಗಳ ಕಾಲ ವಿಸ್ತೃತ ಮೆಟ್ರೋ ಮಾರ್ಗ ತಪಾಸಣೆ ನಡೆಸಲಿದ್ದಾರೆ. ತಪಾಸಣೆ ಕಾರ್ಯ ಮುಗಿದ ಬಳಿಕ 43 ಕಿ.ಮೀ ಉದ್ದದ ಸಂಪೂರ್ಣ ನೇರಳೆ ಮಾರ್ಗ ಸಂಚಾರ ಮುಕ್ತವಾಗಲಿದೆ.

ಬಹುನಿರೀಕ್ಷಿತ ಬೈಯಪ್ಪನಹಳ್ಳಿ-ಕೆ.ಆರ್‌.ಪುರಂ ನಡುವಿನ ರೈಲು ಸಂಚಾರಕ್ಕೆ ಕಾಲ ಕೂಡಿ ಬಂದಿದೆ. ಸದ್ಯ ಅಂತಿಮ ಹಂತದ ತಪಾಸಣೆ ಮಾತ್ರ ಬಾಕಿ ಇದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸುರಕ್ಷತೆ ತಂಡ ಸೆಪ್ಟೆಂಬರ್ 7 ರಂದು ಈ ಮಾರ್ಗವನ್ನು ಒಂದು ವಾರಗಳ ಕಾಲ ಪರಿಶೀಲನೆ ನಡೆಸಲಿದೆ. ಬಳಿಕ ಮೆಟ್ರೋ ಮಾರ್ಗಗಳ ಉದ್ಘಾಟನೆಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತೆ. ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟ ಬಳಿಕ ಸೆಪ್ಟೆಂಬರ್ ಕೊನೆಯ ವಾರದ ಒಳಗೆ ಎರಡು ವಿಸ್ತೃತ ಮಾರ್ಗ ಸಂಚಾರಕ್ಕೆ ಲಭ್ಯವಾಗಲಿದೆ. ಪೂರ್ವ ಬೆಂಗಳೂರು ವ್ಯಾಪ್ತಿಗೆ ಸೇರುವ ಬೈಯಪ್ಪನಹಳ್ಳಿ-ಕೆ.ಆರ್‌.ಪುರಂ ನಡುವಿನ ಮೆಟ್ರೋ ಮಾರ್ಗ ಸುಮಾರು ಎರಡು ಕಿಲೋ ಮೀಟರ್ ಉದ್ದವಿದ್ದು ಇದು ಐಟಿ ಕಾರಿಡಾರ್‌ಗೆ ಸಂಪರ್ಕಿಸುವ ಕಾಡುಗೋಡಿ ರೈಲು ಮಾರ್ಗಕ್ಕೆ ಸಂಪರ್ಕ ಕೊಂಡಿಯಾಗಿದೆ.

ಇದನ್ನೂ ಓದಿ: Viral Video: ಮೆಟ್ರೋ; ಯಾರಿಗೆ ಕರೀತೀಯೋ ಕರಿ! ಲೇಡೀಸ್​ ಕೋಚ್​​ನಲ್ಲಿ ನುಗ್ಗಿದ ಯುವಕನ ಆಟಾಟೋಪ

ಇನ್ನು BMRCL ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಈ ಬಗ್ಗೆ ಮಾತನಾಡಿದ್ದು, ಬೈಯಪ್ಪನಹಳ್ಳಿ-ಕೆಆರ್ ಪುರಂ ಮಾರ್ಗದಲ್ಲಿ ಸಿಗ್ನಲ್ ಪರೀಕ್ಷೆ ಮತ್ತು ಇತರ ಪ್ರಯೋಗಗಳು ನಡೆಯುತ್ತಿವೆ. ಮುಂದಿನ ಸೆಪ್ಟಂಬರ್ 6 ರೊಳಗೆ ಎಲ್ಲಾ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಸೆಪ್ಟೆಂಬರ್ 7ರ ಬಳಿಕ CMRS ತಂಡದ ಅಧಿಕಾರಿಗಳು ಈ ಮಾರ್ಗವನ್ನು ಪರಿಶೀಲಿಸಲಿದ್ದಾರೆ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:45 am, Tue, 29 August 23

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು