AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇವೆಗೆ ಸಜ್ಜಾದ ಬೈಯಪ್ಪನಹಳ್ಳಿ-KR ಪುರಂ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ; ಸೆ.7ಕ್ಕೆ CMRS ಪರಿಶೀಲನೆ

ಬೈಯಪ್ಪನಹಳ್ಳಿ-K.R.ಪುರಂ, ಕೆಂಗೇರಿ-ಚಲ್ಲಘಟ್ಟ ಮಾರ್ಗದ ಮೆಟ್ರೋ ಸಂಚಾರಕ್ಕೆ ಸಿದ್ಧವಾಗುತ್ತಿದೆ. ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ವಿಸ್ಕೃತ ಮೆಟ್ರೋ ಮಾರ್ಗ ಸೇವೆಗೆ ಲಭ್ಯವಾಗಲಿದೆ ಎಂದು ಬಿಎಂಆರ್​ಸಿಎಲ್​ನ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಸೆಪ್ಟೆಂಬರ್ 7 ರ ಬಳಿಕ ಸುರಕ್ಷತಾ ಆಯುಕ್ತರು ಒಂದು ವಾರಗಳ ಕಾಲ ವಿಸ್ತೃತ ಮೆಟ್ರೋ ಮಾರ್ಗ ತಪಾಸಣೆ ನಡೆಸಲಿದ್ದಾರೆ.

ಸೇವೆಗೆ ಸಜ್ಜಾದ ಬೈಯಪ್ಪನಹಳ್ಳಿ-KR ಪುರಂ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ; ಸೆ.7ಕ್ಕೆ CMRS ಪರಿಶೀಲನೆ
ಸಾಂದರ್ಭಿಕ ಚಿತ್ರ
Poornima Agali Nagaraj
| Edited By: |

Updated on:Aug 29, 2023 | 12:04 PM

Share

ಬೆಂಗಳೂರು, ಆ.29: ಬೆಂಗಳೂರಿನಲ್ಲಿ ಮತ್ತೊಂದು ಹಂತದ ಮೆಟ್ರೋ ಸಂಚಾರಕ್ಕೆ(Namma Metro) ಸಜ್ಜಾಗುತ್ತಿದೆ. ಬೈಯಪ್ಪನಹಳ್ಳಿ-K.R.ಪುರಂ(Baiyappanahalli To KR puram Metro), ಕೆಂಗೇರಿ-ಚಲ್ಲಘಟ್ಟ(Kengeri to Challaghatta Metro) ಮಾರ್ಗದ ಮೆಟ್ರೋ ಸಂಚಾರಕ್ಕೆ ಸಿದ್ಧವಾಗುತ್ತಿದೆ. ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ವಿಸ್ಕೃತ ಮೆಟ್ರೋ ಮಾರ್ಗ ಸೇವೆಗೆ ಲಭ್ಯವಾಗಲಿದೆ ಎಂದು ಬಿಎಂಆರ್​ಸಿಎಲ್​ನ(BMRCL) ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈಗಾಗಲೇ ಸಂಪೂರ್ಣ ಕಾಮಗಾರಿ ಮುಗಿಸಿ ರೈಲಿನ ಟ್ರಯಲ್ ರನ್ ನಡೆಸಲಾಗುತ್ತಿದೆ. ಸೆಪ್ಟೆಂಬರ್ 7 ರ ಬಳಿಕ ಸುರಕ್ಷತಾ ಆಯುಕ್ತರು ಒಂದು ವಾರಗಳ ಕಾಲ ವಿಸ್ತೃತ ಮೆಟ್ರೋ ಮಾರ್ಗ ತಪಾಸಣೆ ನಡೆಸಲಿದ್ದಾರೆ. ತಪಾಸಣೆ ಕಾರ್ಯ ಮುಗಿದ ಬಳಿಕ 43 ಕಿ.ಮೀ ಉದ್ದದ ಸಂಪೂರ್ಣ ನೇರಳೆ ಮಾರ್ಗ ಸಂಚಾರ ಮುಕ್ತವಾಗಲಿದೆ.

ಬಹುನಿರೀಕ್ಷಿತ ಬೈಯಪ್ಪನಹಳ್ಳಿ-ಕೆ.ಆರ್‌.ಪುರಂ ನಡುವಿನ ರೈಲು ಸಂಚಾರಕ್ಕೆ ಕಾಲ ಕೂಡಿ ಬಂದಿದೆ. ಸದ್ಯ ಅಂತಿಮ ಹಂತದ ತಪಾಸಣೆ ಮಾತ್ರ ಬಾಕಿ ಇದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸುರಕ್ಷತೆ ತಂಡ ಸೆಪ್ಟೆಂಬರ್ 7 ರಂದು ಈ ಮಾರ್ಗವನ್ನು ಒಂದು ವಾರಗಳ ಕಾಲ ಪರಿಶೀಲನೆ ನಡೆಸಲಿದೆ. ಬಳಿಕ ಮೆಟ್ರೋ ಮಾರ್ಗಗಳ ಉದ್ಘಾಟನೆಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತೆ. ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟ ಬಳಿಕ ಸೆಪ್ಟೆಂಬರ್ ಕೊನೆಯ ವಾರದ ಒಳಗೆ ಎರಡು ವಿಸ್ತೃತ ಮಾರ್ಗ ಸಂಚಾರಕ್ಕೆ ಲಭ್ಯವಾಗಲಿದೆ. ಪೂರ್ವ ಬೆಂಗಳೂರು ವ್ಯಾಪ್ತಿಗೆ ಸೇರುವ ಬೈಯಪ್ಪನಹಳ್ಳಿ-ಕೆ.ಆರ್‌.ಪುರಂ ನಡುವಿನ ಮೆಟ್ರೋ ಮಾರ್ಗ ಸುಮಾರು ಎರಡು ಕಿಲೋ ಮೀಟರ್ ಉದ್ದವಿದ್ದು ಇದು ಐಟಿ ಕಾರಿಡಾರ್‌ಗೆ ಸಂಪರ್ಕಿಸುವ ಕಾಡುಗೋಡಿ ರೈಲು ಮಾರ್ಗಕ್ಕೆ ಸಂಪರ್ಕ ಕೊಂಡಿಯಾಗಿದೆ.

ಇದನ್ನೂ ಓದಿ: Viral Video: ಮೆಟ್ರೋ; ಯಾರಿಗೆ ಕರೀತೀಯೋ ಕರಿ! ಲೇಡೀಸ್​ ಕೋಚ್​​ನಲ್ಲಿ ನುಗ್ಗಿದ ಯುವಕನ ಆಟಾಟೋಪ

ಇನ್ನು BMRCL ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಈ ಬಗ್ಗೆ ಮಾತನಾಡಿದ್ದು, ಬೈಯಪ್ಪನಹಳ್ಳಿ-ಕೆಆರ್ ಪುರಂ ಮಾರ್ಗದಲ್ಲಿ ಸಿಗ್ನಲ್ ಪರೀಕ್ಷೆ ಮತ್ತು ಇತರ ಪ್ರಯೋಗಗಳು ನಡೆಯುತ್ತಿವೆ. ಮುಂದಿನ ಸೆಪ್ಟಂಬರ್ 6 ರೊಳಗೆ ಎಲ್ಲಾ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಸೆಪ್ಟೆಂಬರ್ 7ರ ಬಳಿಕ CMRS ತಂಡದ ಅಧಿಕಾರಿಗಳು ಈ ಮಾರ್ಗವನ್ನು ಪರಿಶೀಲಿಸಲಿದ್ದಾರೆ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:45 am, Tue, 29 August 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ