AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಗನಕ್ಕೇರಿದ ಕೊಬ್ಬರಿ ಎಣ್ಣೆ ದರ: ಕೊಬ್ಬರಿಗೆ ಬೇಡಿಕೆ ಗಣನೀಯ ಹೆಚ್ಚಳ

Coconut Oil Price Hike: ಕೇರಳದ ಆಹಾರಪದಾರ್ಥಗಳಿಂದ ಹಿಡಿದು ರಾಜ್ಯದ ಜನರ ತಲೆಯ ಆರೋಗ್ಯದ ತನಕ ಕೊಬ್ಬರಿ ಎಣ್ಣೆ ಬೇಕೆ ಬೇಕು ಎಂಬ ಸ್ಥಿತಿ ಇದೆ. ಇದೀಗ ಕೊಬ್ಬರಿ ಎಣ್ಣೆ ದರ ಲೀಟರ್​ಗೆ 400 ರೂ. ದಾಟಿ ಮುನ್ನುಗ್ಗುತ್ತಿದೆ. ಬೇಸಿಗೆ ವೇಳೆ ಎಳನೀರಿನ ಆಸೆಗೆ ತೆಂಗಿನ ಮರಗಳನ್ನು ಬರಿದು ಮಾಡಿದ್ದರ ಪರಿಣಾಮ ಇದೀಗ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆಯ ಉದ್ಯಮಕ್ಕೆ ಹೊಡೆತ ಬಿದ್ದಿದೆ. ಕೊಬ್ಬರಿ ಬೆಲೆ ದುಪ್ಪಟ್ಟಾಗಿದೆ.

ಬೆಂಗಳೂರಿನಲ್ಲಿ ಗಗನಕ್ಕೇರಿದ ಕೊಬ್ಬರಿ ಎಣ್ಣೆ ದರ: ಕೊಬ್ಬರಿಗೆ ಬೇಡಿಕೆ ಗಣನೀಯ ಹೆಚ್ಚಳ
ಬೆಂಗಳೂರಿನಲ್ಲಿ 200 ರೂ. ದಾಟಿದ ಕೊಬ್ಬರಿ ಎಣ್ಣೆ ದರ
ಶಾಂತಮೂರ್ತಿ
| Edited By: |

Updated on:Jun 26, 2025 | 9:39 AM

Share

ಬೆಂಗಳೂರು, ಜೂನ್ 26: ನಿತ್ಯ ಒಂದಿಲ್ಲೊಂದು ರೀತಿಯಲ್ಲಿ ಬೇಕೆ ಬೇಕು ಎಂಬಂತೆ ಬೇಡಿಕೆ ಸೃಷ್ಟಿಸಿದ್ದ ಕೊಬ್ಬರಿ ಎಣ್ಣೆಗೆ (Coconut Oil) ಇದೀಗ ಮತ್ತಷ್ಟು ಬೇಡಿಕೆ ಹೆಚ್ಚಾಗಿದೆ. ಅದೇ ರೀತಿ ದರವೂ ಏರಿಕೆಯಾಗುತ್ತಿದ್ದು, ಲೀಟರ್​​ಗೆ 390 ರೂ.ಗಳಿಂದ 420 ರೂ. ವರೆಗೆ ಮಾರಾಟವಾಗುತ್ತಿದೆ. ಪರಿಣಾಮವಾಗಿ ಕೊಬ್ಬರಿ ಬೆಲೆ ಕೂಡ 200 ರೂ. ಗಡಿದಾಟಿ ಮುನ್ನುಗ್ಗುತ್ತಿದೆ. ಬೇಸಿಗೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದ್ದ ಹಿನ್ನೆಲೆ ಎಳನೀರು ಮಾರಾಟ ಹೆಚ್ಚಾಗಿದ್ದು, ಇದೀಗ ಕೊಬ್ಬರಿ ಎಣ್ಣೆ ಹಾಗೂ ಕೊಬ್ಬರಿ ಕಾಯಿ ಅಭಾವಕ್ಕೆ ಕಾರಣವಾಗಿದೆ. ಪ್ರತಿ ಕೆಜಿಗೆ 150 ರಿಂದ 200 ರೂ. ಇದ್ದ ಕೊಬ್ಬರಿ ದರ ಇದೀಗ ಕೆಜಿಗೆ 250 ರಿಂದ 280 ರೂಪಾಯಿಗೆ ಜಿಗಿತ ಕಂಡಿದೆ.

ಕಳೆದ ವರ್ಷ ಲೀಟರ್‌ಗೆ 200 ರೂಪಾಯಿಯಷ್ಟಿದ್ದ ಕೊಬ್ಬರಿ ಎಣ್ಣೆ ದರ ಈಗ 390 ರೂ.ಗಳಿಂದ 420 ರೂ. ವರೆಗೆ ಏರಿಕೆ ಕಂಡಿದೆ. ಕೆಲವೆಡೆ ಉತ್ತಮ ಗುಣಮಟ್ಟದ ಕೊಬ್ಬರಿ ಎಣ್ಣೆ ಪ್ರತಿ ಲೀಟರ್​ಗೆ 500 ರೂಪಾಯಿ ತನಕ ಮಾರಾಟವಾಗುತ್ತಿದೆ. ಈ ವರ್ಷದ ಹೊಸ ತೆಂಗಿನಕಾಯಿ ಇಳುವರಿ ಅಕ್ಟೋಬರ್–ನವೆಂಬರ್ ವೇಳೆಗೆ ಬರುವ ನಿರೀಕ್ಷೆಯಿದ್ದು, ಅಲ್ಲಿ ತನಕ ಮಾರುಕಟ್ಟೆಗೆ ಒಣಕೊಬ್ಬರಿ ಬರುವುದು ಅನುಮಾನ ಎನ್ನಲಾಗುತ್ತಿದೆ. ಸದ್ಯ ಕೇರಳ, ತಮಿಳುನಾಡಿನಿಂದಲೂ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆ ಬರುತ್ತಿಲ್ಲ. ಇದು ವ್ಯಾಪಾರಿಗಳಿಗೂ ಸಂಕಷ್ಟ ತಂದಿಟ್ಟಿದೆ.

ಇದನ್ನೂ ಓದಿ: ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದ ಬೆಸ್ಕಾಂ: ವಿದ್ಯುತ್ ಬಿಲ್ ನೋಡಿ ಜನ ಬೇಸ್ತು

ಇದನ್ನೂ ಓದಿ
Image
ಗ್ರಾಹಕರಿಗೆ ಮತ್ತೊಂದು ಶಾಕ್: ಬೆಸ್ಕಾಂ ವಿದ್ಯುತ್ ಬಿಲ್ ನೋಡಿ ಜನ ಬೇಸ್ತು
Image
ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ಮೆಟ್ರೋ ಟಿಕೆಟ್!
Image
ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ತೀರ್ಪು
Image
ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ

ಬಹುತೇಕ ರೈತರು ಎಳನೀರನ್ನು ಮಾರಾಟ ಮಾಡುವ ಜೊತೆಗೆ ಬೇರೆಡೆಗೆ ರಫ್ತು ಮಾಡಿರುವುದು ಕೂಡ ಇದೀಗ ಕೊಬ್ಬರಿಯ ಅಭಾವ ಎದುರಾಗಲು ಕಾರಣವಾಗಿದೆ. ಇತ್ತ ಕೊಬ್ಬರಿ ಎಣ್ಣೆಯ ಮಾರಾಟದ ಮೇಲೂ ಪರಿಣಾಮ ತಟ್ಟುತ್ತಿದ್ದು, ಖರೀದಿ ಕೂಡ ಕುಸಿತವಾಗುತ್ತಿದೆ.

ಸದ್ಯ ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯಗಳಲ್ಲೂ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆಯ ಲಭ್ಯತೆ ಕಡಿಮೆಯಾಗತ್ತಿದೆ. ಸದ್ಯ ಗಗನಕ್ಕೇರಿರುವ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆಯ ದರ ಯಾವಾಗ ಕಡಿಮೆಯಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:53 am, Thu, 26 June 25

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?