AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Tea Price in Bangalore: ಸಾಕಾ, ಬೇಕಾ… ಹಾಲಿನ ದರ 4 ರೂ. ಹೆಚ್ಚಾದ್ರೆ ಕಾಫಿ, ಚಹಾ ಬೆಲೆ 5 ರೂ.ವರೆಗೆ ದುಬಾರಿ

ಬೆಂಗಳೂರಿನಲ್ಲಿ ಕಾಫಿ ಟೀ ಬೆಲೆ ಏರಿಕೆ: ನಂದಿನಿ ಹಾಲಿನ ದರ 4 ರೂಪಾಯಿ ಹೆಚ್ಚಾಗಿದ್ದಾಯ್ತು. ಇದೀಗ ಕಾಫಿ, ಚಹಾದ ಸರದಿ. ಹಾಲಿನ ದರ 4 ರೂ. ಹೆಚ್ಚಾದರೆ ಇದೀಗ ಕಾಫಿ, ಚಹಾ ಬೆಲೆ 5 ರೂ. ಏರಿಕೆಯಾಗಿದೆ! ಆ ಮೂಲಕ ಗ್ರಾಹಕರಿಗೆ ಶಾಕ್ ಎದುರಾಗಿದೆ. ಬೆಂಗಳೂರಿನ ಅನೇಕ ದರ್ಶಿನಿಗಳಲ್ಲಿ, ಹೋಟೆಲ್​ಗಳಲ್ಲಿ ಹಾಗೂ ಅಂಗಡಿಗಳಲ್ಲಿ ಕಾಫಿ ಮತ್ತು ಚಹಾ ದರ ಏರಿಕೆಯಾಗಿದೆ. 2, 3 ಹಾಗೂ 5 ರೂಪಾಯಿವರೆಗೆ ದರ ಏರಿಕೆ ಮಾಡಲಾಗಿದೆ.

Coffee Tea Price in Bangalore: ಸಾಕಾ, ಬೇಕಾ... ಹಾಲಿನ ದರ 4 ರೂ. ಹೆಚ್ಚಾದ್ರೆ ಕಾಫಿ, ಚಹಾ ಬೆಲೆ 5 ರೂ.ವರೆಗೆ ದುಬಾರಿ
ಕಾಫಿ, ಚಹಾ ದರ 5 ರೂ. ಹೆಚ್ಚಳ
ಗಣಪತಿ ಶರ್ಮಾ
|

Updated on:Apr 03, 2025 | 12:09 PM

Share

ಬೆಂಗಳೂರು, ಏಪ್ರಿಲ್ 3: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ (Karnataka Govt) ಕೆಲವು ದಿನಗಳ ಹಿಂದೆ ಅಧಿಸೂಚನೆ ಹೊರಡಿಸಿತ್ತು. ಏಪ್ರಿಲ್ ಒಂದರಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಅನೇಕ ಹೋಟೆಲ್​​ಗಳು (Bengaluru Hotels) ಮತ್ತು ದರ್ಶಿನಿಗಳು ಕಾಫಿ ಮತ್ತು ಚಹಾ ದರವನ್ನು (Coffee, Tea Price)  ಏರಿಕೆ ಮಾಡಿವೆ. 3 ರೂಪಾಯಿಯಿಂದ ತೊಡಗಿ 5 ರೂಪಾಯಿವರೆಗೆ ದರ ಹೆಚ್ಚಳವಾಗಿದೆ. ಆದರೆ, ಕಾಫಿ ಮತ್ತು ಚಹಾ ದರ ಏರಿಕೆ ವಿಚಾರವಾಗಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಈವರಿಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ನಂದಿನಿ ಹಾಲಿನ ದರ ಪ್ರತಿ ಲೀಟರ್​​ಗೆ ನಾಲ್ಕು ರೂಪಾಯಿ ಹೆಚ್ಚಳವಾಗಿರುವುದರಿಂದ ಅನಿವಾರ್ಯವಾಗಿ ಕಾಫಿ ಮತ್ತು ಚಹಾದ ದರ ಹೆಚ್ಚಳ ಮಾಡಬೇಕಾಗಿದೆ. ಅದೇ ರೀತಿ ಇತರ ಹಾಲಿನ ಉತ್ಪನ್ನಗಳ ದರ ಕೂಡ ಏರಿಕೆ ಮಾಡಬೇಕಾಗುತ್ತದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಕೆಲವು ದಿನಗಳ ಹಿಂದೆ ಹೇಳಿಕೆ ನೀಡಿದ್ದರು.

ಹಾಲಿನ ಉತ್ಪನ್ನಗಳ ಬೆಲೆಯೂ ಏರಿಕೆ

ಕಾಫಿ, ಚಹಾ ಮಾತ್ರವಲ್ಲದೆ ಹಾಲಿನಿಂದ ತಯಾರಿಸುವ ಇತರ ಉತ್ಪನ್ನಗಳ ಬೆಲೆಯೂ ಏರಿಕೆಯಾಗಲಿದೆ. ಹಾಲಿನ ಉತ್ಪನ್ನಗಳಾದ ಫೇಡಾ, ಪನ್ನೀರ್ ಇತ್ಯಾದಿಗಳ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಹಾಲಿನ ದರ ಹೆಚ್ಚಳದಿಂದ ಇತರ ಉತ್ಪನ್ನಗಳ ತಯಾರಿಕಾ ವೆಚ್ಚವೂ ಹೆಚ್ಚಾಗುತ್ತಿದೆ. ಹೀಗಾಗಿ ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಿಸುತ್ತೇವೆ ಎಂದು ಬೆಂಗಳೂರಿನ ಹೋಟೆಲ್ ಮಾಲೀಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ
Image
ಕಲ್ಯಾಣ ಕರ್ನಾಟಕ ರೈತರ 7 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ
Image
ಹಾಲಿನ ಬೆಲೇಲಿ ರೈತರಿಗೆ ಸಿಗೋದೆಷ್ಟು, ಸರ್ಕಾರದ ಪಾಲೆಷ್ಟು? ಇಲ್ಲಿದೆ ವಿವರ
Image
ಮತ್ತೆ ಬೆಲೆ ಏರಿಕೆ ಬರೆ:ನಂದಿನಿ ಹಾಲಿನ ದರ ಏರಿಕೆಗೆ ಸಂಪುಟ ಗ್ರೀನ್ ಸಿಗ್ನಲ್
Image
ಜೇಬಿಗೆ ಬೀಳಲಿದೆ ಕತ್ತರಿ: ಒಂದು ಕಪ್ ಕಾಫಿ ಬೆಲೆ 5 ರೂ. ಏರಿಕೆ ಸಾಧ್ಯತೆ

ಕಾಫಿ ಪುಡಿ ದರವೂ ಏರಿಕೆ

ಕಾಫಿ ಪುಡಿಯ ದರ ಕೂಡ ಕೆಲವು ವಾರಗಳ ಹಿಂದೆ ಹೆಚ್ಚಾಗಿತ್ತು. ಇದು ಕೂಡ ಕಾಫಿ ದರ ಏರಿಕೆಗೆ ಕಾರಣವಾಗಿದೆ. ಫೆಬ್ರವರಿ ಕೊನೆಯ ವಾರದ ವೇಳೆಗೆ ಹುರಿದ ಕಾಫಿ ಪುಡಿಯ ಬೆಲೆ ಪ್ರತಿ ಕೆಜಿಗೆ 100 ರೂ.ಗಳಷ್ಟು ಹೆಚ್ಚಾಗಿತ್ತು. ಇದು ಮತ್ತೆ ಕೆಜಿಗೆ 100 ರೂ.ಗಳಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಇತ್ತೀಚೆಗೆ ಇಂಡಿಯನ್ ಕಾಫಿ ರೋಸ್ಟರ್ಸ್ ಅಸೋಸಿಯೇಷನ್ ಮತ್ತು ಕಾಫಿ ಮಂಡಳಿಯ ಮೂಲಗಳು ತಿಳಿಸಿದ್ದವು.

ಇದನ್ನೂ ಓದಿ: ನಂದಿನಿ ಹಾಲಿನ ಬೆಲೆ ಏರಿಕೆ: ರೈತರಿಗೆ ಸಿಗೋದೆಷ್ಟು, ಲಾಭದಲ್ಲಿ ಸರ್ಕಾರದ ಪಾಲೆಷ್ಟು? ಇಲ್ಲಿದೆ ಮಾಹಿತಿ

ಕಾಫಿ ಪುಡಿ ದರ ಹೆಚ್ಚಳವಾದ ಕಾರಣ ಮಾರಾಟಗಾರರು ಒಂದು ಕಪ್ ಕಾಫಿಯ ಬೆಲೆಯನ್ನು ಸುಮಾರು 5 ರೂ.ಗಳಷ್ಟು ಹೆಚ್ಚಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಚಿಕೋರಿ ಮಿಶ್ರಣವು ಗುಣಮಟ್ಟ ಮತ್ತು ಸುವಾಸನೆಯ ಮೇಲೆ ಪರಿಣಾಮ ಬೀರುವುದರಿಂದ ನಾವು ಅದರ ಪ್ರಮಾಣ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಇಂಡಿಯನ್ ಕಾಫಿ ರೋಸ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷರು ಕೆಲವು ದಿನಗಳ ಹಿಂದೆ ತಿಳಿಸಿದ್ದರು. ಅದೀಗ ನಿಜವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:48 am, Thu, 3 April 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ