AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳಿನಿಂದ ಮುಖ್ಯ ರಸ್ತೆಯೇ ಬಂದ್​​: ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರ

ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಬಳಿ ರಾಜಕಾಲುವೆ ಹಾಗೂ ಪೈಪ್ ಲೈನ್ ಕಾಮಗಾರಿಗಾಗಿ ಮುಖ್ಯ ರಸ್ತೆಯನ್ನು ಒಂದು ತಿಂಗಳಿನಿಂದ ಬಂದ್ ಮಾಡಲಾಗಿದ್ದು, ಕುಂಟುತ್ತಾ ಸಾಗಿರುವ ಕಾಮಗಾರಿಯಿಂದಾಗಿ ವಾಹನ ಸವಾರರು ಮತ್ತು ಸ್ಥಳೀಯರು ತೀವ್ರ ಪರದಾಡುತ್ತಿದ್ದಾರೆ. ಎಂಜಿ ರಸ್ತೆ ಕಡೆಯಿಂದ ಫ್ರೆಜರ್ ಟೌನ್ ಕಡೆಗೆ ತೆರಳಲು ಇದುವೇ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಅಕ್ಕಪಕ್ಕದ ಪರ್ಯಾಯ ಮಾರ್ಗದ ರಸ್ತೆಗಳು ಕಿರಿದಾಗಿರುವ ಕಾರಣ ಸುಗಮ ಸಂಚಾರ ಕಷ್ಟಕರವಾಗಿದೆ.

ತಿಂಗಳಿನಿಂದ ಮುಖ್ಯ ರಸ್ತೆಯೇ ಬಂದ್​​: ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರ
ರಾಜಕಾಲುವೆ ದುರಸ್ತಿ ಕಾಮಗಾರಿImage Credit source: Tv9 Kannada
ಪ್ರಸನ್ನ ಹೆಗಡೆ
|

Updated on: Jun 15, 2026 | 8:15 AM

Share

ಬೆಂಗಳೂರು, ಜೂನ್​​ 15: ನಗರದ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್ ಆಗಿರುವ ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರವಾಗಿದೆ. ರಾಜಕಾಲುವೆ ದುರಸ್ತಿ ಹಾಗೂ ಪೈಪ್ ಲೈನ್ ಕಾಮಗಾರಿಗಾಗಿ ಮುಖ್ಯರಸ್ತೆಯನ್ನೇ ಬಂದ್ ಮಾಡಿ ಬರೋಬ್ಬರಿ ಒಂದು ತಿಂಗಳುಗಳೇ ಕಳೆದಿದ್ದು, ನಿಧಾನಗತಿಯ ಕಾಮಗಾರಿಯಿಂದಾಗಿ ವಾಹನ ಸವಾರರು ಮತ್ತು ಸ್ಥಳೀಯರು ಹೈರಾಣಾಗುತ್ತಿದ್ದಾರೆ. ಫ್ರೆಜರ್ ಟೌನ್ ಕಡೆಗೆ ತೆರಳಲು ವಾಹನ ಸವಾರರಿಗೆ ಬಹಳ ಕಿರಿಕಿರಿ ಉಂಟಾಗುತ್ತಿದೆ. ಸೂಕ್ತ ಪರ್ಯಾಯ ಮಾರ್ಗವೂ ಇಲ್ಲದ ಕಾರಣ ಸಮಸ್ಯೆ ಹೆಚ್ಚಿದೆ.

ಎಂಜಿ ರಸ್ತೆ ಕಡೆಯಿಂದ ಫ್ರೆಜರ್ ಟೌನ್ ಕಡೆಗೆ ತೆರಳಲು ಇದುವೇ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಅಕ್ಕಪಕ್ಕದ ಪರ್ಯಾಯ ಮಾರ್ಗದ ರಸ್ತೆಗಳು ಕಿರಿದಾಗಿರುವ ಕಾರಣ ಸುಗಮ ಸಂಚಾರ ಕಷ್ಟಕರ. ಹೀಗಿದ್ದರೂ ಒಂದು ತಿಂಗಳಿನಿಂದ ರಸ್ತೆ ಬಂದ್​​ ಮಾಡಿ ನಡೆಸುತ್ತಿರುವ ಕಾಮಗಾರಿ ಮಾತ್ರ ಕುಂಟುತ್ತಲೇ ಸಾಗಿದೆ. ಯಾವಾಗ ಕಾಮಗಾರಿ ಮುಗಿಬಹುದೆಂಬ ಸ್ಪಷ್ಟತೆಯೂ ಇಲ್ಲದ ಕಾರಣ ಸ್ಥಳೀಯರೂ ಕೂಡ ಪರದಾಡುವಂತಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಡಿರೌಡಿಗಳ ಕಿರುಕುಳ ತಪ್ಪಿಸಲು ವ್ಯಾಪಾರಿಗಳು ಆಗ್ರಹ; ಜೂ.1ರಂದು ಬೇಕರಿ-ಕಾಂಡಿಮೆಂಟ್ಸ್ ಬಂದ್

ವಾಹನ ಸವಾರರ ಆಕ್ರೋಶ

ಕಾಮಗಾರಿ ವಿಳಂಬದಿಂದ ಸಂಚಾರವೇ ದುಸ್ಥರವಾಗಿದೆ ಎಂದು ವಾಹನ ಸವಾರರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡಿಕೊಡಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಕಾಮಗಾರಿ ಆರಂಭಿಸಿ 4 ತಿಂಗಳಾಗಿದ್ದರೆ ರಸ್ತೆ ಬಂದ್​​ ಮಾಡಿ ತಿಂಗಳು ಕಳೆದಿದೆ. ಇದರಿಂದಾಗಿ ಬಹಳ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳೂ ಅಲವತ್ತುಕೊಂಡಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಇತ್ತ ಗಮನಹರಿಸಿ ಶೀಘ್ರವೇ ಕಾಮಗಾರಿ ಮುಗಿಸುವ ಮೂಲಕ ಸಾರ್ವಜನಿಕರಿಗೆ ಉಂಟಾಗುತ್ತಿರುವ ಅನಾನುಕೂಲವನ್ನು ತಪ್ಪಿಸಬೇಕಿದೆ.

ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ