AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೆಲ್ಮೆಟ್ ಕಳ್ಳತನ, ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು

ಹೆಲ್ಮೆಟ್ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಯುವಕನೊಬ್ಬ ಜ್ಯೂಸ್ ಕುಡಿಯಲು ಬೇಕರಿಗೆ ತೆರಳಿದ್ದ ವೇಳೆ ಅಲ್ಲಿಯೇ ಹೆಲ್ಮೆಟ್ ಮರೆತು ಬಂದಿದ್ದಾನೆ. ಬಳಿಕ ಹೋಗಿ ನೋಡುವಷ್ಟರಲ್ಲಿ ದುಷ್ಕರ್ಮಿಗಳು ಹೆಲ್ಮೆಟ್ ಕದ್ದು ಪರಾರಿಯಾಗಿದ್ದಾರೆ.

ಬೆಂಗಳೂರು: ಹೆಲ್ಮೆಟ್ ಕಳ್ಳತನ, ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 17, 2023 | 7:07 AM

Share

ಬೆಂಗಳೂರು, ಆ.17: ಮಹಾನಗರದಲ್ಲಿ ಕಳ್ಳತನ ಮೀತಿಮೀರಿದ್ದು, ಇದೀಗ ಹೆಲ್ಮೆಟ್ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಬೆಂಗಳೂರಿನ (Bengaluru) ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಹೌದು, ಬೈಕ್​ ಸವಾರ ಸೂರ್ಯ ಎಂಬುವವರು ದೂರು ನೀಡಿದವರು. ಇವರು ದ್ವಾರಕಾನಗರದ ಜಯದುರ್ಗ ಬೇಕರಿಗೆ ತೆರಳಿದ್ದರು. ಈ ವೇಳೆ ಬೇಕರಿಯ ಟೇಬಲ್ ಮೇಲೆ 10 ಸಾವಿರ ಮೌಲ್ಯದ ಹೆಲ್ಮೆಟ್ ಇಟ್ಟಿದ್ದಾರೆ. ಬಳಿಕ ಜ್ಯೂಸ್ ಕುಡಿದು ಹೆಲ್ಮೆಟ್ ಮರೆತು ಸ್ವಲ್ಪ ದೂರ ಹೋದ ಮೇಲೆ ಮರೆತಿರುವುದು ಅರಿವಿಗೆ ಬಂದಿದೆ. ವಾಪಸ್​ ಬೇಕರಿಗೆ ಬಂದು ನೋಡುವಷ್ಟರಲ್ಲಿ ಹೆಲ್ಮೆಟ್​ ಕಳುವಾಗಿದೆ ಎಂದು ದೂರು ನೀಡಿದ್ದಾರೆ.

ಸಿಸಿಕ್ಯಾಮರಾ ದೃಶ್ಯ ಆಧರಿಸಿ ಹೆಲ್ಮೆಟ್​ ಪತ್ತೆಗೆ ಶೋಧ

ಇನ್ನು ಬೈಕ್​ ಸವಾರ ಸೂರ್ಯ ಎಂಬುವವರು ನೀಡಿದ ದೂರಿನನ್ವಯ ಗಿರಿನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಈ ಕುರಿತು ಬೇಕರಿಯಲ್ಲಿನ ಸಿಸಿಕ್ಯಾಮರಾ ದೃಶ್ಯ ಆಧರಿಸಿ ಹೆಲ್ಮೆಟ್​ ಪತ್ತೆಗೆ ಈಗಾಗಲೇ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:Mysore police: ಐಶಾರಾಮಿ ಕಾರು, ಶ್ರೀಮಂತರ ಮನೆಯೇ ಇವನ ಟಾರ್ಗೆಟ್: 56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​

ಸಕ್ಕರೆ ಸಮೇತ ಲಾರಿ ಮಾರಾಟ ಮಾಡುತ್ತಿದ್ದ ಚಾಲಕನ ಬಂಧನ

ಬಾಗಲಕೋಟೆ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಾಳದ ವಿಜಯ್ ದಳವಾಯಿ ಎಂಬಾತ ಸಕ್ಕರೆ ಲೋಡ್ ಸಮೇತ ಲಾರಿ ಮಾರಾಟ ಮಾಡುತ್ತಿದ್ದ ವೇಳೆ ಆತನನ್ನು ಮುಧೋಳ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ 10.83 ಲಕ್ಷ ಮೌಲ್ಯದ 600 ಚೀಲ ಸಕ್ಕರೆ ಜೊತೆಗೆ 10 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಲಾಗಿದೆ. ಇನ್ನು ಈ ಲಾರಿ ಟ್ರಾನ್ಸ್​​ಪೋರ್ಟ್​​ ಉದ್ಯಮಿ ಸಂತೋಷ್ ನೀರಕೇರಿ ಎನ್ನುವವರಿಗೆ ಸೇರಿದೆ. ಈ ಲಾರಿ ನಿರಾಣಿ ಕಾರ್ಖಾನೆಯಿಂದ ಲೋಡ್​ ಮಾಡಿಕೊಂಡು ಹೋಗಿದ್ದು, ಚಿಕ್ಕಬಳ್ಳಾಪುರದ ವಿಲ್​ಕಾರ್ಟ್ ಕಂಪನಿಗೆ ಅನ್​ಲೋಡ್ ಮಾಡಬೇಕಿತ್ತು. ಆದರೆ, ಜೂ.14ರಂದು ಲಾರಿ ಸಮೇತ ಚಾಲಕ ನಾಪತ್ತೆಯಾಗಿದ್ದ. ಈ ಬಗ್ಗೆ ಮುಧೋಳ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:07 am, Thu, 17 August 23

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ