AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೆಲ್ಮೆಟ್ ಕಳ್ಳತನ, ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು

ಹೆಲ್ಮೆಟ್ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಯುವಕನೊಬ್ಬ ಜ್ಯೂಸ್ ಕುಡಿಯಲು ಬೇಕರಿಗೆ ತೆರಳಿದ್ದ ವೇಳೆ ಅಲ್ಲಿಯೇ ಹೆಲ್ಮೆಟ್ ಮರೆತು ಬಂದಿದ್ದಾನೆ. ಬಳಿಕ ಹೋಗಿ ನೋಡುವಷ್ಟರಲ್ಲಿ ದುಷ್ಕರ್ಮಿಗಳು ಹೆಲ್ಮೆಟ್ ಕದ್ದು ಪರಾರಿಯಾಗಿದ್ದಾರೆ.

ಬೆಂಗಳೂರು: ಹೆಲ್ಮೆಟ್ ಕಳ್ಳತನ, ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on:Aug 17, 2023 | 7:07 AM

Share

ಬೆಂಗಳೂರು, ಆ.17: ಮಹಾನಗರದಲ್ಲಿ ಕಳ್ಳತನ ಮೀತಿಮೀರಿದ್ದು, ಇದೀಗ ಹೆಲ್ಮೆಟ್ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಬೆಂಗಳೂರಿನ (Bengaluru) ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಹೌದು, ಬೈಕ್​ ಸವಾರ ಸೂರ್ಯ ಎಂಬುವವರು ದೂರು ನೀಡಿದವರು. ಇವರು ದ್ವಾರಕಾನಗರದ ಜಯದುರ್ಗ ಬೇಕರಿಗೆ ತೆರಳಿದ್ದರು. ಈ ವೇಳೆ ಬೇಕರಿಯ ಟೇಬಲ್ ಮೇಲೆ 10 ಸಾವಿರ ಮೌಲ್ಯದ ಹೆಲ್ಮೆಟ್ ಇಟ್ಟಿದ್ದಾರೆ. ಬಳಿಕ ಜ್ಯೂಸ್ ಕುಡಿದು ಹೆಲ್ಮೆಟ್ ಮರೆತು ಸ್ವಲ್ಪ ದೂರ ಹೋದ ಮೇಲೆ ಮರೆತಿರುವುದು ಅರಿವಿಗೆ ಬಂದಿದೆ. ವಾಪಸ್​ ಬೇಕರಿಗೆ ಬಂದು ನೋಡುವಷ್ಟರಲ್ಲಿ ಹೆಲ್ಮೆಟ್​ ಕಳುವಾಗಿದೆ ಎಂದು ದೂರು ನೀಡಿದ್ದಾರೆ.

ಸಿಸಿಕ್ಯಾಮರಾ ದೃಶ್ಯ ಆಧರಿಸಿ ಹೆಲ್ಮೆಟ್​ ಪತ್ತೆಗೆ ಶೋಧ

ಇನ್ನು ಬೈಕ್​ ಸವಾರ ಸೂರ್ಯ ಎಂಬುವವರು ನೀಡಿದ ದೂರಿನನ್ವಯ ಗಿರಿನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಈ ಕುರಿತು ಬೇಕರಿಯಲ್ಲಿನ ಸಿಸಿಕ್ಯಾಮರಾ ದೃಶ್ಯ ಆಧರಿಸಿ ಹೆಲ್ಮೆಟ್​ ಪತ್ತೆಗೆ ಈಗಾಗಲೇ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:Mysore police: ಐಶಾರಾಮಿ ಕಾರು, ಶ್ರೀಮಂತರ ಮನೆಯೇ ಇವನ ಟಾರ್ಗೆಟ್: 56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​

ಸಕ್ಕರೆ ಸಮೇತ ಲಾರಿ ಮಾರಾಟ ಮಾಡುತ್ತಿದ್ದ ಚಾಲಕನ ಬಂಧನ

ಬಾಗಲಕೋಟೆ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಾಳದ ವಿಜಯ್ ದಳವಾಯಿ ಎಂಬಾತ ಸಕ್ಕರೆ ಲೋಡ್ ಸಮೇತ ಲಾರಿ ಮಾರಾಟ ಮಾಡುತ್ತಿದ್ದ ವೇಳೆ ಆತನನ್ನು ಮುಧೋಳ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ 10.83 ಲಕ್ಷ ಮೌಲ್ಯದ 600 ಚೀಲ ಸಕ್ಕರೆ ಜೊತೆಗೆ 10 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಲಾಗಿದೆ. ಇನ್ನು ಈ ಲಾರಿ ಟ್ರಾನ್ಸ್​​ಪೋರ್ಟ್​​ ಉದ್ಯಮಿ ಸಂತೋಷ್ ನೀರಕೇರಿ ಎನ್ನುವವರಿಗೆ ಸೇರಿದೆ. ಈ ಲಾರಿ ನಿರಾಣಿ ಕಾರ್ಖಾನೆಯಿಂದ ಲೋಡ್​ ಮಾಡಿಕೊಂಡು ಹೋಗಿದ್ದು, ಚಿಕ್ಕಬಳ್ಳಾಪುರದ ವಿಲ್​ಕಾರ್ಟ್ ಕಂಪನಿಗೆ ಅನ್​ಲೋಡ್ ಮಾಡಬೇಕಿತ್ತು. ಆದರೆ, ಜೂ.14ರಂದು ಲಾರಿ ಸಮೇತ ಚಾಲಕ ನಾಪತ್ತೆಯಾಗಿದ್ದ. ಈ ಬಗ್ಗೆ ಮುಧೋಳ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:07 am, Thu, 17 August 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್