Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೆಲ್ಮೆಟ್ ಕಳ್ಳತನ, ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು

ಹೆಲ್ಮೆಟ್ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಯುವಕನೊಬ್ಬ ಜ್ಯೂಸ್ ಕುಡಿಯಲು ಬೇಕರಿಗೆ ತೆರಳಿದ್ದ ವೇಳೆ ಅಲ್ಲಿಯೇ ಹೆಲ್ಮೆಟ್ ಮರೆತು ಬಂದಿದ್ದಾನೆ. ಬಳಿಕ ಹೋಗಿ ನೋಡುವಷ್ಟರಲ್ಲಿ ದುಷ್ಕರ್ಮಿಗಳು ಹೆಲ್ಮೆಟ್ ಕದ್ದು ಪರಾರಿಯಾಗಿದ್ದಾರೆ.

ಬೆಂಗಳೂರು: ಹೆಲ್ಮೆಟ್ ಕಳ್ಳತನ, ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು
ಪ್ರಾತಿನಿಧಿಕ ಚಿತ್ರ
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 17, 2023 | 7:07 AM

ಬೆಂಗಳೂರು, ಆ.17: ಮಹಾನಗರದಲ್ಲಿ ಕಳ್ಳತನ ಮೀತಿಮೀರಿದ್ದು, ಇದೀಗ ಹೆಲ್ಮೆಟ್ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಬೆಂಗಳೂರಿನ (Bengaluru) ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಹೌದು, ಬೈಕ್​ ಸವಾರ ಸೂರ್ಯ ಎಂಬುವವರು ದೂರು ನೀಡಿದವರು. ಇವರು ದ್ವಾರಕಾನಗರದ ಜಯದುರ್ಗ ಬೇಕರಿಗೆ ತೆರಳಿದ್ದರು. ಈ ವೇಳೆ ಬೇಕರಿಯ ಟೇಬಲ್ ಮೇಲೆ 10 ಸಾವಿರ ಮೌಲ್ಯದ ಹೆಲ್ಮೆಟ್ ಇಟ್ಟಿದ್ದಾರೆ. ಬಳಿಕ ಜ್ಯೂಸ್ ಕುಡಿದು ಹೆಲ್ಮೆಟ್ ಮರೆತು ಸ್ವಲ್ಪ ದೂರ ಹೋದ ಮೇಲೆ ಮರೆತಿರುವುದು ಅರಿವಿಗೆ ಬಂದಿದೆ. ವಾಪಸ್​ ಬೇಕರಿಗೆ ಬಂದು ನೋಡುವಷ್ಟರಲ್ಲಿ ಹೆಲ್ಮೆಟ್​ ಕಳುವಾಗಿದೆ ಎಂದು ದೂರು ನೀಡಿದ್ದಾರೆ.

ಸಿಸಿಕ್ಯಾಮರಾ ದೃಶ್ಯ ಆಧರಿಸಿ ಹೆಲ್ಮೆಟ್​ ಪತ್ತೆಗೆ ಶೋಧ

ಇನ್ನು ಬೈಕ್​ ಸವಾರ ಸೂರ್ಯ ಎಂಬುವವರು ನೀಡಿದ ದೂರಿನನ್ವಯ ಗಿರಿನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಈ ಕುರಿತು ಬೇಕರಿಯಲ್ಲಿನ ಸಿಸಿಕ್ಯಾಮರಾ ದೃಶ್ಯ ಆಧರಿಸಿ ಹೆಲ್ಮೆಟ್​ ಪತ್ತೆಗೆ ಈಗಾಗಲೇ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:Mysore police: ಐಶಾರಾಮಿ ಕಾರು, ಶ್ರೀಮಂತರ ಮನೆಯೇ ಇವನ ಟಾರ್ಗೆಟ್: 56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​

ಸಕ್ಕರೆ ಸಮೇತ ಲಾರಿ ಮಾರಾಟ ಮಾಡುತ್ತಿದ್ದ ಚಾಲಕನ ಬಂಧನ

ಬಾಗಲಕೋಟೆ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಾಳದ ವಿಜಯ್ ದಳವಾಯಿ ಎಂಬಾತ ಸಕ್ಕರೆ ಲೋಡ್ ಸಮೇತ ಲಾರಿ ಮಾರಾಟ ಮಾಡುತ್ತಿದ್ದ ವೇಳೆ ಆತನನ್ನು ಮುಧೋಳ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ 10.83 ಲಕ್ಷ ಮೌಲ್ಯದ 600 ಚೀಲ ಸಕ್ಕರೆ ಜೊತೆಗೆ 10 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಲಾಗಿದೆ. ಇನ್ನು ಈ ಲಾರಿ ಟ್ರಾನ್ಸ್​​ಪೋರ್ಟ್​​ ಉದ್ಯಮಿ ಸಂತೋಷ್ ನೀರಕೇರಿ ಎನ್ನುವವರಿಗೆ ಸೇರಿದೆ. ಈ ಲಾರಿ ನಿರಾಣಿ ಕಾರ್ಖಾನೆಯಿಂದ ಲೋಡ್​ ಮಾಡಿಕೊಂಡು ಹೋಗಿದ್ದು, ಚಿಕ್ಕಬಳ್ಳಾಪುರದ ವಿಲ್​ಕಾರ್ಟ್ ಕಂಪನಿಗೆ ಅನ್​ಲೋಡ್ ಮಾಡಬೇಕಿತ್ತು. ಆದರೆ, ಜೂ.14ರಂದು ಲಾರಿ ಸಮೇತ ಚಾಲಕ ನಾಪತ್ತೆಯಾಗಿದ್ದ. ಈ ಬಗ್ಗೆ ಮುಧೋಳ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:07 am, Thu, 17 August 23

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ