AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ವೀಕ್ಷಣೆ; ದೂರು ದಾಖಲು

ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ/ ಭಾವಚಿತ್ರಗಳ ವೀಕ್ಷಣೆ ಅಥವಾ ಶೇರ್​​ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಆದರೆ ಬೆಂಗಳೂರಿನ ವಿಮಾನಪುರದ ಇಸ್ಲಾಂಪುರ ನಿವಾಸಿಯೊಬ್ಬ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ವೀಕ್ಷಣೆ; ದೂರು ದಾಖಲು
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 24, 2023 | 7:44 AM

Share

ಬೆಂಗಳೂರು ನ.24: ಸಾಮಾಜಿಕ ಜಾಲತಾಣಗಳಲ್ಲಿ (Social Media) ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ವೈಟ್‌ಫೀಲ್ಡ್ ಸೈಬರ್ ಕ್ರೈಂ (Cyber Crime) ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಂಕಿತನನ್ನು ವಿಮಾನಪುರದ ಇಸ್ಲಾಂಪುರ ನಿವಾಸಿ ಮಹಮ್ಮದ್ ಜಾಹಿದ್ ಎಂದು ಗುರುತಿಸಲಾಗಿದೆ.

ನವೆಂಬರ್ 14 ರಂದು ದೇಶದಲ್ಲಿ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಅಂದು ವೈಟ್‌ಫೀಲ್ಡ್ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್ (CEN) ಪೊಲೀಸ್ ಠಾಣೆಗೆ ಅಪರಾಧ ತನಿಖಾ ಇಲಾಖೆಯ (CID) ಸೈಬರ್ ತರಬೇತಿ ಮತ್ತು ಸಂಶೋಧನಾ ವಿಭಾಗ ಒಂದು ಪತ್ರ ಕಳೆಸಿತ್ತು.

ಇದನ್ನೂ ಓದಿ: ಬೆಂಗಳೂರು: ಸೈಬರ್ ಕ್ರೈಂ ಕಥೆ ಹೇಳಿ ಉದ್ಯಮಿ ಖಾತೆಯಿಂದಲೇ ಹಣ ಲಪಟಾಯಿಸಿದ ಖದೀಮ

ಸಿಐಡಿ ಬರೆದ ಪತ್ರದಲ್ಲಿ “ಸಾಹಿದ್ ಸಾಮಾಜಿಕ ಮಾಧ್ಯಮದಲ್ಲಿ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವೀಡಿಯೊಗಳು / ಛಾಯಾಚಿತ್ರಗಳನ್ನು ವೀಕ್ಷಿಸಿದ್ದಾರೆ ಅಥವಾ ಹಂಚಿಕೊಂಡಿದ್ದಾರೆ” ಎಂದು ಬರೆದಿತ್ತು. ಸಿಐಡಿ ಅಧಿಕಾರಿಗಳ ಸೂಚನೆ ಮೇರೆಗೆ ವೈಟ್‌ಫೀಲ್ಡ್ ಸಿಇಎನ್ ಪೊಲೀಸರು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯಿದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡರು.

“ಪ್ರಕರಣದ ತನಿಖೆಗಾಗಿ ನಾವು ವಿಶೇಷ ತಂಡವನ್ನು ರಚಿಸಿದ್ದೇವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತನಿಖೆಯ ಮೇಲ್ವಿಚಾರಣೆಯ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Fri, 24 November 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ