AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕರಿಂದ ದೂರು: ಹಲವು ವರ್ಷದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಡಿಸಿಗಳಿಗೆ ಸೂಚನೆ

ಜುಲೈ 08 ರಂದು ಮಾನ್ಯ ಮುಖ್ಯ ಮಂತ್ರಿಯವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ವೇಳೆ ಒಂದೇ ಹುದ್ದೆ ಅಥವಾ ಒಂದೇ ಸ್ಥಳದಲ್ಲಿ 5 ವರ್ಷ ಮೀರಿ ಮುಂದುವರಿದಿದ್ದಲ್ಲಿ ಮತ್ತು ಅಂತಹವರ ವಿರುದ್ಧ ದೂರುಗಳೇನಾದರೂ ಇದ್ದಲ್ಲಿ, ಅವರ ಅಧಿಕಾರಾವಧಿಯ ವಿವರಗಳೊಂದಿಗೆ ವಿವರವಾದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಸಾರ್ವಜನಿಕರಿಂದ ದೂರು: ಹಲವು ವರ್ಷದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಡಿಸಿಗಳಿಗೆ ಸೂಚನೆ
ಕರ್ನಾಟಕ ಸರ್ಕಾರ
ಕಿರಣ್ ಹನುಮಂತ್​ ಮಾದಾರ್
|

Updated on: Jul 14, 2024 | 3:48 PM

Share

ಬೆಂಗಳೂರು, ಜು.14: ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಕಂದಾಯ ಅಧಿಕಾರಿಗಳ (Revenue Officers) ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನಲೆ ದೂರುಗಳಿರುವವರ ಪಟ್ಟಿಯನ್ನು ಶೀಘ್ರದಲ್ಲಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ.

ಇದೇ ಜುಲೈ 08 ರಂದು ಮಾನ್ಯ ಮುಖ್ಯ ಮಂತ್ರಿಯವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಸಮನ್ವಯತೆ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಕಾಲೆಳೆಯುತ್ತ ಗುಣಗಾನ ಮಾಡಿ ಅನುದಾನ ಯಾಚಿಸಿದ ಮುನಿರತ್ನ ನಾಯ್ಡು!

ಜೊತೆಗೆ ಕಛೇರಿಯಲ್ಲಿ ಉತ್ತಮ ಕಾರ್ಯಕ್ರಮತೆ, ಶಿಸ್ತು ಪಾಲಿಸುವಂತೆ ಕ್ರಮ ವಹಿಸಲು ಮತ್ತು ನಿರ್ಲಕ್ಷತೆ ತೋರಿದ ಅಧಿಕಾರಿ, ಸಿಬ್ಬಂದಿಗಳ ಮೇಲೆ ನಿಯಮಾನುಸಾರ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸಹ ಸೂಚಿಸಲಾಗಿದೆ. ಯಾವುದೇ ಅಧಿಕಾರಿ, ನೌಕರರ ಬಗ್ಗೆ ಅಸಮರ್ಥತೆ ಅಥವಾ ದೂರುಗಳು ಇತ್ಯಾದಿಗಳ ಕಾರಣದಿಂದ ಅವರನ್ನು ವರ್ಗಾವಣೆ ಮಾಡಲು, ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಸ್ತಾವನೆಯನ್ನು ಕಳುಹಿಸುವಂತೆ ಸೂಚಿಸಿದೆ.

ದೂರುಗಳಿರುವವರ ಪಟ್ಟಿಯನ್ನು ಶೀಘ್ರದಲ್ಲಿ ನೀಡುವಂತೆ ಸೂಚನೆ

ಇನ್ನು ಹಲವು ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿರುವುದು, ಅಲ್ಲದೆ ಇಂತಹ ಹಲವು ಅಧಿಕಾರಿಗಳು ಮತ್ತು ನೌಕರರುಗಳ ವಿರುದ್ಧ ದೂರುಗಳು ಸಹ ಸ್ವೀಕೃತವಾಗಿರುವುದು ಸರ್ಕಾರದ ಗಮನಕ್ಕೂ ಬಂದಿದೆ. ಆದ್ದರಿಂದ ಒಂದೇ ಹುದ್ದೆ ಅಥವಾ ಒಂದೇ ಸ್ಥಳದಲ್ಲಿ 5 ವರ್ಷ ಮೀರಿ ಮುಂದುವರಿದಿದ್ದಲ್ಲಿ ಮತ್ತು ಅಂತಹವರ ವಿರುದ್ಧ ದೂರುಗಳೇನಾದರೂ ಇದ್ದಲ್ಲಿ, ಅವರ ಅಧಿಕಾರಾವಧಿಯ ವಿವರಗಳೊಂದಿಗೆ ವಿವರವಾದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಲು ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ