AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡರೆ ಕೇಸ್ ಮುಕ್ತಾಯವಾದಂತೆ, ಆದರೆ…! ಹೈಕೋರ್ಟ್

ರಾಜಿ ಮೂಲಕ ಇತ್ಯರ್ಥಪಡಿಸಿದ ಚೆಕ್ ಬೌನ್ಸ್ ಪ್ರಕರಣವನ್ನು ಮರು ವಿಚಾರಣೆ ನಡೆಸಲು ಕೋರಿ ಸಲ್ಲಿಸಿದ್ದ ಮೆಮೋ ವಜಾಗೊಳಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಕ್ರಮ ಪ್ರಶ್ನಿಸಿ ಶೆಲ್ಲಿ ಎಂ ಪೀಟರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡರೆ ಕೇಸ್ ಮುಕ್ತಾಯವಾದಂತೆ, ಆದರೆ...! ಹೈಕೋರ್ಟ್
ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡರೆ ಕೇಸ್ ಮುಕ್ತಾಯವಾದಂತೆ, ಆದರೆ...! ಹೈಕೋರ್ಟ್
TV9 Web
| Edited By: |

Updated on: Sep 19, 2022 | 8:57 PM

Share

ನ್ಯಾಯಾಲಯದಲ್ಲಿ ಅಥವಾ ಲೋಕ ಅದಾಲತ್ ನಲ್ಲಿ (court or lok adalat) ರಾಜಿ ಸಂಧಾನದ ಮೂಲಕ (compromised case) ಇತ್ಯರ್ಥಪಡಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಮತ್ತೆ ಮರುವಿಚಾರಣೆಗೆ (retrial) ಕೋರಲು ಅವಕಾಶವಿಲ್ಲ ಎಂದು ಹೈಕೋರ್ಟ್ (karnataka high court) ಸ್ಪಷ್ಟಪಡಿಸಿದೆ.

ರಾಜಿ ಮೂಲಕ ಇತ್ಯರ್ಥಪಡಿಸಿದ ಚೆಕ್ ಬೌನ್ಸ್ ಪ್ರಕರಣವನ್ನು ಮರು ವಿಚಾರಣೆ ನಡೆಸಲು ಕೋರಿ ಸಲ್ಲಿಸಿದ್ದ ಮೆಮೋ ವಜಾಗೊಳಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಕ್ರಮ ಪ್ರಶ್ನಿಸಿ ಶೆಲ್ಲಿ ಎಂ ಪೀಟರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ರಾಜಿ ಒಪ್ಪಂದದಂತೆ ಆಗದಿದ್ದಾಗ ಅರ್ಜಿ ಸಲ್ಲಿಸಬಹುದು:

ಪೀಠವು ತನ್ನ ಆದೇಶದಲ್ಲಿ, ಕೋರ್ಟ್ ಅಥವಾ ಲೋಕ ಅದಾಲತ್ ನಲ್ಲಿ ರಾಜಿ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡರೆ ಕೇಸ್ ಮುಕ್ತಾಯವಾದಂತೆ ಆಗುತ್ತದೆ. ಸಿಆರ್​ಪಿಸಿ ಸೆಕ್ಷನ್ 362ರ ಪ್ರಕಾರ ನ್ಯಾಯಾಲಯ ಒಮ್ಮೆ ಆದೇಶ ಪ್ರಕಟಿಸಿದ ನಂತರ ಅದನ್ನು ಬದಲಾಯಿಸಲು ಅಥವಾ ಹಿಂಪಡೆಯಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ಪುನಃ ಆರಂಭಿಸಲು ಸಾಧ್ಯವಿಲ್ಲ. ಆದರೆ, ರಾಜಿ ಒಪ್ಪಂದದಂತೆ ಹಣ ಪಾವತಿಸದಿದ್ದಾಗ, ಹಣ ವಸೂಲಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.

ಅಲ್ಲದೇ, ಮೆಮೋ ವಜಾಗೊಳಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ರದ್ದುಪಡಿಸಿರುವ ಪೀಠ, ಅರ್ಜಿದಾರರ ಮೆಮೋವನ್ನು ಕ್ರಿಮಿನಲ್ ಮಿಸಲೇನಿಯಸ್ ಅರ್ಜಿಯಾಗಿ ಪರಿಗಣಿಸಬೇಕು. ರಾಜಿ ಒಪ್ಪಂದದಂತೆ ಹಣ ಪಾವತಿಸಲು ವಿಫಲವಾಗಿರುವ ಪ್ರತಿವಾದಿ ಸಂಸ್ಥೆಗೆ ವಾರಂಟ್ ಜಾರಿ ಮಾಡಿ, ಹಣ ವಸೂಲಿ ಪ್ರಕ್ರಿಯೆ ನಡೆಸಬೇಕು ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ: ಬನ್ಯಾನ್ ಪ್ರಾಜೆಕ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಹಾಗೂ ಅರ್ಜಿದಾರ ಶೆಲ್ಲಿ ಪೀಟರ್ ನಡುವಿನ ಹಣಕಾಸು ವ್ಯಾಜ್ಯವನ್ನು ಪಕ್ಷಗಾರರ ಇಚ್ಛೆ ಮೇರೆಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ರಾಜಿ ಮೂಲಕ ಇತ್ಯರ್ಥಪಡಿಸಿತ್ತು. ಆದರೆ, ಬನ್ಯಾನ್ ಪ್ರಾಜೆಕ್ಟ್ ನೀಡಿದ್ದ ಚೆಕ್ ಗಳು ಬೌನ್ಸ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಶೆಲ್ಲಿ ಪ್ರಕರಣದ ವಿಚಾರಣೆಯನ್ನು ಪುನಃ ಆರಂಭಿಸುವಂತೆ ಕೋರಿ ಮೆಮೋ ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಮೋವನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಶೆಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. (ಕೃಪೆ: lawtime.in)

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ