Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಪ್ರವೇಶಿಸುವ ವಾಹನಗಳಿಗೆ ಸಂಚಾರ ದಟ್ಟಣೆ ತೆರಿಗೆ: ಸರ್ಕಾರಕ್ಕೆ ಶಿಫಾರಸು

ಪ್ರಸ್ತುತ ದಿನಕ್ಕೆ 12 ಮಿಲಿಯನ್ ವಾಹನಗಳು ಬೆಂಗಳೂರು ಪ್ರವೇಶಿಸುತ್ತಿವೆ. ದಟ್ಟಣೆ ತೆರಿಗೆಯನ್ನು ವಿಧಿಸುವುದರಿಂದ ನಗರಕ್ಕೆ ಗಮನಾರ್ಹ ಆದಾಯ ಬರುತ್ತದೆ. ಫಾಸ್ಟ್ಯಾಗ್ ಮಾದರಿಯಲ್ಲೇ ದಟ್ಟಣೆ ತೆರಿಗೆಯನ್ನು ಸಂಗ್ರಹಿಸುವಂತೆ ವರದಿ ಹೇಳಿದೆ.

ಬೆಂಗಳೂರಿಗೆ ಪ್ರವೇಶಿಸುವ ವಾಹನಗಳಿಗೆ ಸಂಚಾರ ದಟ್ಟಣೆ ತೆರಿಗೆ: ಸರ್ಕಾರಕ್ಕೆ ಶಿಫಾರಸು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 22, 2023 | 9:18 AM

ಬೆಂಗಳೂರು ಸೆ.22: ನಗರದಲ್ಲಿನ ಸಂಚಾರ ದಟ್ಟಣೆಯನ್ನು (Traffic) ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ (Bengaluru) ಪ್ರವೇಶಿಸುವ ವಾಹನಗಳಿಗೆ ದಟ್ಟಣೆ ತೆರಿಗೆ ವಿಧಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯು ಕರ್ನಾಟಕ 1 ಟ್ರಿಲಿಯನ್ ಡಾಲರ್​ ಆರ್ಥಿಕತೆಗಾಗಿ, ವಿವಿಧ ವಲಯಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸೂಚಿಸಿದೆ. ಇದು ಕೃಷಿ ಮತ್ತು ಸಂಬಂಧಿತ ವಲಯಗಳು, ಉತ್ಪಾದನೆ, ತಂತ್ರಜ್ಞಾನ, ಪ್ರವಾಸೋದ್ಯಮ, ನಗರಾಭಿವೃದ್ಧಿ, ಸ್ಟಾರ್ಟಪ್‌ಗಳು ಮತ್ತು ಬೆಂಗಳೂರು ಅಭಿವೃದ್ಧಿ ಇತ್ಯಾದಿಗಳ ಬಗ್ಗೆ ಸರ್ಕಾರಕ್ಕೆ ಸಮಗ್ರ ವರದಿ ನೀಡಿದೆ.

ಪ್ರಸ್ತುತ ದಿನಕ್ಕೆ 12 ಮಿಲಿಯನ್ ವಾಹನಗಳು ಬೆಂಗಳೂರು ಪ್ರವೇಶಿಸುತ್ತಿವೆ. ದಟ್ಟಣೆ ತೆರಿಗೆಯನ್ನು ವಿಧಿಸುವುದರಿಂದ ನಗರಕ್ಕೆ ಗಮನಾರ್ಹ ಆದಾಯ ಬರುತ್ತದೆ. ಫಾಸ್ಟ್ಯಾಗ್ ಮಾದರಿಯಲ್ಲೇ ದಟ್ಟಣೆ ತೆರಿಗೆಯನ್ನು ಸಂಗ್ರಹಿಸುವಂತೆ ವರದಿ ಹೇಳಿದೆ. ದಟ್ಟಣೆ ಶುಲ್ಕದಿಂದ ಸರ್ಕಾರಕ್ಕೆ ಆದಾಯ ಕೂಡ ಹೆಚ್ಚುತ್ತದೆ. ಇದನ್ನು ನಗರದಲ್ಲಿ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಲು ಖರ್ಚು ಮಾಡಬಹುದು. ವಾಹನಗಳ ಓಡಾಟ ಕಡಿಮೆ ಆದರೆ ಮಾಲಿನ್ಯ ನಿಯಂತ್ರಣಕ್ಕೆ ಬರುತ್ತದೆ. ಪಾದಚಾರಿಗಳಿಗೆ ಮತ್ತು ಸೈಕ್ಲಿಸ್ಟ್‌ಗಳಿಗೆ ಹೆಚ್ಚು ಅನುಕೂಲವಾಗುತ್ತದೆ.

ಇದನ್ನೂ ಓದಿ: DK Shivakumar Speech: ಟ್ರಾಫಿಕ್, ಕಸ ಸಮಸ್ಯೆ ಸೇರಿದಂತೆ ಬ್ರ್ಯಾಂಡ್​ ಬೆಂಗಳೂರು ಕಟ್ಟುವ ಬಗ್ಗೆ​ ಡಿಕೆ ಶಿವಕುಮಾರ್ ಮನದಾಳದ ಮಾತು​

ದಟ್ಟಣೆಯಿಂದಾಗಿ ನಗರದಲ್ಲಿ ಸುಮಾರು 1.2 ಕೋಟಿ ಜನರು ವಾರ್ಷಿಕವಾಗಿ ತಮ್ಮ 60 ಕೋಟಿ ಗಂಟೆಗಳನ್ನು ವ್ಯರ್ಥ ಮಾಡುತ್ತಿದ್ದಾರೆ. ಮತ್ತು ಗಂಟೆಗೆ ಸುಮಾರು 2.8 ಲಕ್ಷ ಲೀಟರ್ ಇಂಧನವನ್ನು ವ್ಯರ್ಥ ಮಾಡುತ್ತಾರೆ ಎಂದು ವರದಿ ಹೇಳಿದರುದೆ. ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಪಾಲು 2007 ಮತ್ತು 2020 ರ ನಡುವೆ ಶೇ 280 ರಷ್ಟು ಏರಿಕೆಯಾಗಿದೆ. ವಾಹನಗಳ ಸಂಖ್ಯೆ 2.1 ಮಿಲಿಯನ್‌ನಿಂದ 8 ಮಿಲಿಯನ್​ಗೆ ಏರಿದೆ. ಮತ್ತೊಂದೆಡೆ ಸಾರ್ವಜನಿಕ ಸಾರಿಗೆ ಮೂಲಸೌಕರ್ಯವು ಕಡಿಮೆ ಶೇ 48% ಬಳಕೆಯನ್ನು ಹೊಂದಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯು ಸಾರಿಗೆ ಬೇಡಿಕೆಯಲ್ಲಿ ಗಣನೀಯ ಹೆಚ್ಚಳದೊಂದಿಗೆ ವೇಗವನ್ನು ಹೊಂದಲು ಸಾಧ್ಯವಿಲ್ಲ ಎಂದು ವರದಿ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!