AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್, ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ: ಡಿಕೆಶಿ ಹೇಳಿಕೆಗೆ ಸಿ.ಪಿ.ಯೋಗೇಶ್ವರ್ ಟಾಂಗ್

ಡಿ.ಕೆ.ಶಿವಕುಮಾರ್​, ಮಾಜಿ ಸಿಎಂ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿಯವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂಬ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಬಿಜೆಪಿ ಎಂಎಲ್​ಸಿ ಸಿ.ಪಿ. ಯೋಗೇಶ್ವರ್ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್, ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ: ಡಿಕೆಶಿ ಹೇಳಿಕೆಗೆ ಸಿ.ಪಿ.ಯೋಗೇಶ್ವರ್ ಟಾಂಗ್
ಸಿಪಿ ಯೋಗೇಶ್ವರ್, ಬಿಜೆಪಿ ಶಾಸಕ
Follow us
TV9 Web
| Updated By: preethi shettigar

Updated on:Jan 25, 2022 | 5:29 PM

ಬೆಂಗಳೂರು: ಚುನಾವಣಾ ವರ್ಷ ಇರುವುದರಿಂದ ಹೇಳಿಕೆಗಳು ಸಹಜ. ಈವರೆಗೆ ಬಿಜೆಪಿಯಿಂದ (BJP) ಕಾಂಗ್ರೆಸ್‌ಗೆ ಹೋದವರು ಕಡಿಮೆ. ಕಳೆದೆರಡು ವರ್ಷದ ಹಿಂದೆ ಕಾಂಗ್ರೆಸ್(Congress), ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ. ಇದೀಗ ಗೊಂದಲ ಸೃಷ್ಟಿಸುವಂತಹ ಹೇಳಿಕೆ ನೀಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್​, ಮಾಜಿ ಸಿಎಂ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿಯವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂಬ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಬಿಜೆಪಿ ಎಂಎಲ್​ಸಿ ಸಿ.ಪಿ. ಯೋಗೇಶ್ವರ್(CP Yogeshwar) ಟಾಂಗ್ ನೀಡಿದ್ದಾರೆ.

ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗಲ್ಲ: ಸಿ.ಪಿ. ಯೋಗೇಶ್ವರ್

ನನ್ನ ಅಚಲ ವಿಶ್ವಾಸವನ್ನು ಅಲುಗಾಡಿಸಲು ಆಗುವುದಿಲ್ಲ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗಲ್ಲ. ಕಾಂಗ್ರೆಸ್‌ನವರು ಸುಮ್ಮನೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಧ್ಯೆ ಗೊಂದಲವಿದೆ. ಅಧಿಕಾರ, ನಾಯಕನಾಗಬೇಕೆಂದು ಅವರಿಬ್ಬರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಬಿಜೆಪಿಯಿಂದ ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುವವರೇ ಹೆಚ್ಚಾಗಿದ್ದಾರೆ. ಮುಂದಿನ ತಿಂಗಳಿನಿಂದ ಬಿಜೆಪಿಗೆ ಹೆಚ್ಚು ಜನ ಬರುತ್ತಾರೆ. ಕಾದು ನೋಡಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ನಾನು ಸೋತಾಗಲೂ ನನಗೆ 2 ಬಾರಿ ಸಚಿವ ಸ್ಥಾನವನ್ನು ಬಿಜೆಪಿ ನೀಡಿದೆ. ಈಗ ಎಂಎಲ್‌ಸಿ ಮಾಡಿದೆ ಇದನ್ನು ಪದೇಪದೆ ಹೇಳುತ್ತೇನೆ. ಮುಂದಿನ ದಿನಗಳಲ್ಲಿ ನಾನು ಇದರ ಬಗ್ಗೆ ಸುದ್ದಿಗೋಷ್ಠಿ ಮೂಲಕ‌‌ ಸ್ಪಷ್ಟಪಡಿಸುತ್ತೇನೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ರಾಮನಗರ: ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ನಾನು ಮಾತನಾಡುವುದಿಲ್ಲ: ಡಿ.ಕೆ.ಶಿವಕುಮಾರ್

ಬಿಜೆಪಿ, ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಬಗ್ಗೆ ಯತ್ನಾಳ್​ರನ್ನು ಕೇಳಿದರೆ ಅವರಿಗೆ ಎಲ್ಲಾ ಪಟ್ಟಿ​ ಗೊತ್ತಿದೆ. ಅವರೆಲ್ಲ ಸೇರಿ ಒಂದು ಸಭೆ ಕೂಡ ಮಾಡಿದ್ದಾರೆ. ಅದನ್ನೆಲ್ಲ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆಗವಿ ಮಠದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ಜೆಡಿಎಸ್, ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ಯತ್ನಾಳ್ ತಿರುಗೇಟು

ಬಿಜೆಪಿಯಲ್ಲಿ ನಿರೀಕ್ಷಿತ ಸ್ಥಾನ ಸಿಗದೆ ಅಸಮಾಧಾನಗೊಂಡ ಸಚಿವರು ಕಾಂಗ್ರೆಸ್ ಸೇರುವ ಸಾಧ್ಯತೆ; ಕಾಂಗ್ರೆಸ್ ಮೂಲಗಳಿಂದ ಮಾಹಿತಿ

Published On - 5:20 pm, Tue, 25 January 22

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ