AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾನಂದಗೌಡ ವಿರುದ್ಧ ಮಾತಿನ ಚಾಟಿ ಬೀಸಿದ ಕಾಂಗ್ರೆಸ್

ಸದಾನಂದ ಗೌಡ ಅವರೇ, ನಿಮ್ಮ ಮಂತ್ರಿಗಿರಿ ಕಿತ್ತುಕೊಂಡಿದ್ದೇಕೆ? ಅಸಾಮರ್ಥ್ಯಕ್ಕೊ, ಇನ್ಯಾವುದಾದರೂ ಕಾರಣಕ್ಕೋ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಸದಾನಂದಗೌಡ ವಿರುದ್ಧ ಮಾತಿನ ಚಾಟಿ ಬೀಸಿದ ಕಾಂಗ್ರೆಸ್
ಕಾಂಗ್ರೆಸ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 30, 2021 | 7:06 PM

Share

ಬೆಂಗಳೂರು: ‘ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ತಲೆ ಕೆಟ್ಟು ಹೋಗಿದೆ’ ಎಂದು ವಾಗ್ದಾಳಿ ನಡೆಸಿದ್ದ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಮರುಚಾಟಿ ಬೀಸಿರುವ ಕಾಂಗ್ರೆಸ್, ‘ನಿಮ್ಮ ಚಾರಿತ್ರ್ಯವೇ ಕೆಟ್ಟಿದೆ’ ಎಂದು ಹೇಳಿದೆ.

ಈ ಕುರಿತು ಕೂ ಮಾಡಿರುವ ಕರ್ನಾಟಕ ಕಾಂಗ್ರೆಸ್, ‘ಸದಾನಂದಗೌಡರ ಚಾರಿತ್ರ್ಯವೇ ಕೆಟ್ಟಿದೆ, ತಡೆಯಾಜ್ಞೆ ತಂದರೂ ತಡೆಯಲಾಗಲಿಲ್ಲ! ಸದಾನಂದ ಗೌಡ ಅವರೇ, ನಿಮ್ಮ ಮಂತ್ರಿಗಿರಿ ಕಿತ್ತುಕೊಂಡಿದ್ದೇಕೆ? ಅಸಾಮರ್ಥ್ಯಕ್ಕೊ, ಇನ್ಯಾವುದಾದರೂ ಕಾರಣಕ್ಕೋ? ಸಿಎಂ ಆಗಿಯೂ ಅರ್ಧಕ್ಕೆ ಇಳಿದಿರಿ, ಕೇಂದ್ರ ಮಂತ್ರಿಯಾಗಿಯೂ ಅರ್ಧಕ್ಕೆ ಇಳಿದಿರಿ’ ಎಂದು ವ್ಯಂಗ್ಯವಾಡಿದೆ.

‘ಸಿದ್ದರಾಮಯ್ಯನವರಿಗೆ ಸಂಪೂರ್ಣ ತಲೆ ಕೆಟ್ಟು ಹೋಗಿದೆ. ರಾಜಕಾರಣದಲ್ಲಿ ಸ್ವಲ್ಪ ತಲೆ ಕೆಟ್ಟಿದ್ದರೆ ಪರವಾಗಿಲ್ಲ. ಪೂರ್ತಿ ತಲೆ ಕೆಟ್ಟಿರಬಾರದು. ತಾಲಿಬಾನ್‌ ಸಂಸ್ಕೃತಿ ಇದ್ದಿದ್ದರೆ ಪ್ರತಿಪಕ್ಷ ನಾಯಕನಾಗಿ ಕಾರಿನಲ್ಲಿ ಓಡಾಡುತ್ತಿದ್ದರಾ? ಇವರ ಕಾಲಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗುತ್ತಿದ್ದರು. ಅರ್ಥ ಮಾಡಿಕೊಳ್ಳಬೇಕು. ಬಾಯಿಗೆ ಬಂದಂತೆ ಎಲ್ಲವನ್ನು ಮಾತನಾಡಬಾರದು’ ಎಂದು ಸದಾನಂದ ಗೌಡ ಅವರು ಸಿದ್ದರಾಮಯ್ಯ ಅವರ ತಾಲಿಬಾನ್ ಹೇಳಿಕೆಗೆ ತಿರುಗೇಟು ನೀಡಿದ್ದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರ್​ಎಸ್​ಎಸ್​ ಮತ್ತು ಸಂಘ ಪರಿವಾರವನ್ನು ತಾಲಿಬಾನ್​ಗೆ ಹೋಲಿಸಿದ್ದರು. ಕರಾವಳಿ ಭಾಗದಲ್ಲಿ ಹಿಂದೂಪರ ಸಂಘಟನೆಗಳಿಂದ ಆಗಾಗ ನಡೆಯುತ್ತಿರುವ ಅನೈತಿಕ ಗೂಂಡಾಗಿರಿಯನ್ನು ಪ್ರಶ್ನಿಸಿ ನಿಮ್ಮದೇ ಪರಿವಾರದ ಕಾರ್ಯಕರ್ತರು ಮಾಡುತ್ತಿರುವುದು ತಾಲಿಬಾನ್ ಗಿರಿ ಅಲ್ಲವೇ ಎಂದು ಪ್ರಶ್ನಿಸಿದ್ದರು. ಆಗ ಅವರು ಮಂಗಳೂರಿನಲ್ಲಿರುವುದು ಬಿಜೆಪಿ ಸರ್ಕಾರವೋ? ತಾಲಿಬಾನ್ ಸರ್ಕಾರವೋ ಎಂದು ಪ್ರಶ್ನಿಸಿದ್ದರು.

(Congress Criticizes Sadananda Gowda on his Statement on Siddaramaiah)

ಇದನ್ನೂ ಓದಿ: ಅಧಿಕಾರ ಕಳೆದುಕೊಂಡ ಮೇಲೂ ನಾನೆಷ್ಟು ಪುಣ್ಯವಂತ ಅನಿಸುತ್ತಿದೆ: ಮಾಜಿ ಕೇಂದ್ರ ಸಚಿವ ಸದಾನಂದಗೌಡ

ಇದನ್ನೂ ಓದಿ: ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲು ಹೇಳಿಕೆ

Published On - 7:05 pm, Thu, 30 September 21

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ