AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾನಂದಗೌಡ ವಿರುದ್ಧ ಮಾತಿನ ಚಾಟಿ ಬೀಸಿದ ಕಾಂಗ್ರೆಸ್

ಸದಾನಂದ ಗೌಡ ಅವರೇ, ನಿಮ್ಮ ಮಂತ್ರಿಗಿರಿ ಕಿತ್ತುಕೊಂಡಿದ್ದೇಕೆ? ಅಸಾಮರ್ಥ್ಯಕ್ಕೊ, ಇನ್ಯಾವುದಾದರೂ ಕಾರಣಕ್ಕೋ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಸದಾನಂದಗೌಡ ವಿರುದ್ಧ ಮಾತಿನ ಚಾಟಿ ಬೀಸಿದ ಕಾಂಗ್ರೆಸ್
ಕಾಂಗ್ರೆಸ್
TV9 Web
| Edited By: |

Updated on:Sep 30, 2021 | 7:06 PM

Share

ಬೆಂಗಳೂರು: ‘ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ತಲೆ ಕೆಟ್ಟು ಹೋಗಿದೆ’ ಎಂದು ವಾಗ್ದಾಳಿ ನಡೆಸಿದ್ದ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಮರುಚಾಟಿ ಬೀಸಿರುವ ಕಾಂಗ್ರೆಸ್, ‘ನಿಮ್ಮ ಚಾರಿತ್ರ್ಯವೇ ಕೆಟ್ಟಿದೆ’ ಎಂದು ಹೇಳಿದೆ.

ಈ ಕುರಿತು ಕೂ ಮಾಡಿರುವ ಕರ್ನಾಟಕ ಕಾಂಗ್ರೆಸ್, ‘ಸದಾನಂದಗೌಡರ ಚಾರಿತ್ರ್ಯವೇ ಕೆಟ್ಟಿದೆ, ತಡೆಯಾಜ್ಞೆ ತಂದರೂ ತಡೆಯಲಾಗಲಿಲ್ಲ! ಸದಾನಂದ ಗೌಡ ಅವರೇ, ನಿಮ್ಮ ಮಂತ್ರಿಗಿರಿ ಕಿತ್ತುಕೊಂಡಿದ್ದೇಕೆ? ಅಸಾಮರ್ಥ್ಯಕ್ಕೊ, ಇನ್ಯಾವುದಾದರೂ ಕಾರಣಕ್ಕೋ? ಸಿಎಂ ಆಗಿಯೂ ಅರ್ಧಕ್ಕೆ ಇಳಿದಿರಿ, ಕೇಂದ್ರ ಮಂತ್ರಿಯಾಗಿಯೂ ಅರ್ಧಕ್ಕೆ ಇಳಿದಿರಿ’ ಎಂದು ವ್ಯಂಗ್ಯವಾಡಿದೆ.

‘ಸಿದ್ದರಾಮಯ್ಯನವರಿಗೆ ಸಂಪೂರ್ಣ ತಲೆ ಕೆಟ್ಟು ಹೋಗಿದೆ. ರಾಜಕಾರಣದಲ್ಲಿ ಸ್ವಲ್ಪ ತಲೆ ಕೆಟ್ಟಿದ್ದರೆ ಪರವಾಗಿಲ್ಲ. ಪೂರ್ತಿ ತಲೆ ಕೆಟ್ಟಿರಬಾರದು. ತಾಲಿಬಾನ್‌ ಸಂಸ್ಕೃತಿ ಇದ್ದಿದ್ದರೆ ಪ್ರತಿಪಕ್ಷ ನಾಯಕನಾಗಿ ಕಾರಿನಲ್ಲಿ ಓಡಾಡುತ್ತಿದ್ದರಾ? ಇವರ ಕಾಲಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗುತ್ತಿದ್ದರು. ಅರ್ಥ ಮಾಡಿಕೊಳ್ಳಬೇಕು. ಬಾಯಿಗೆ ಬಂದಂತೆ ಎಲ್ಲವನ್ನು ಮಾತನಾಡಬಾರದು’ ಎಂದು ಸದಾನಂದ ಗೌಡ ಅವರು ಸಿದ್ದರಾಮಯ್ಯ ಅವರ ತಾಲಿಬಾನ್ ಹೇಳಿಕೆಗೆ ತಿರುಗೇಟು ನೀಡಿದ್ದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರ್​ಎಸ್​ಎಸ್​ ಮತ್ತು ಸಂಘ ಪರಿವಾರವನ್ನು ತಾಲಿಬಾನ್​ಗೆ ಹೋಲಿಸಿದ್ದರು. ಕರಾವಳಿ ಭಾಗದಲ್ಲಿ ಹಿಂದೂಪರ ಸಂಘಟನೆಗಳಿಂದ ಆಗಾಗ ನಡೆಯುತ್ತಿರುವ ಅನೈತಿಕ ಗೂಂಡಾಗಿರಿಯನ್ನು ಪ್ರಶ್ನಿಸಿ ನಿಮ್ಮದೇ ಪರಿವಾರದ ಕಾರ್ಯಕರ್ತರು ಮಾಡುತ್ತಿರುವುದು ತಾಲಿಬಾನ್ ಗಿರಿ ಅಲ್ಲವೇ ಎಂದು ಪ್ರಶ್ನಿಸಿದ್ದರು. ಆಗ ಅವರು ಮಂಗಳೂರಿನಲ್ಲಿರುವುದು ಬಿಜೆಪಿ ಸರ್ಕಾರವೋ? ತಾಲಿಬಾನ್ ಸರ್ಕಾರವೋ ಎಂದು ಪ್ರಶ್ನಿಸಿದ್ದರು.

(Congress Criticizes Sadananda Gowda on his Statement on Siddaramaiah)

ಇದನ್ನೂ ಓದಿ: ಅಧಿಕಾರ ಕಳೆದುಕೊಂಡ ಮೇಲೂ ನಾನೆಷ್ಟು ಪುಣ್ಯವಂತ ಅನಿಸುತ್ತಿದೆ: ಮಾಜಿ ಕೇಂದ್ರ ಸಚಿವ ಸದಾನಂದಗೌಡ

ಇದನ್ನೂ ಓದಿ: ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲು ಹೇಳಿಕೆ

Published On - 7:05 pm, Thu, 30 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!