AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹೋರಾತ್ರಿ ಧರಣಿಗೆ ಸರ್ಕಾರದ ಊಟ ಬೇಡ ಎಂದ ಕಾಂಗ್ರೆಸ್: ಅಶೋಕ್ ಟೀಕೆಗೆ ಕಾಂಗ್ರೆಸ್ ಸೆಡ್ಡು

ಧರಣಿ ಕುರಿತು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ನಿರ್ಧಾರ ತೆಗೆದುಕೊಂಡಿದೆ.

ಆಹೋರಾತ್ರಿ ಧರಣಿಗೆ ಸರ್ಕಾರದ ಊಟ ಬೇಡ ಎಂದ ಕಾಂಗ್ರೆಸ್: ಅಶೋಕ್ ಟೀಕೆಗೆ ಕಾಂಗ್ರೆಸ್ ಸೆಡ್ಡು
ಸದನದಲ್ಲೇ ರಾತ್ರಿ ಕಳೆದ ಕಾಂಗ್ರೆಸ್ ನಾಯಕರು
TV9 Web
| Edited By: |

Updated on: Feb 20, 2022 | 10:14 PM

Share

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ವಿರೋಧಿಸಿ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಸರ್ಕಾರದ ವತಿಯಿಂದ ಪೂರೈಸುತ್ತಿರುವ ಊಟವನ್ನು ನಿರಾಕರಿಸಿ, ಪಕ್ಷದ ವತಿಯಿಂದಲೇ ಶಾಸಕರಿಗೆ ಊಟ ಕೊಡಲು ಕಾಂಗ್ರೆಸ್ ನಿರ್ಧರಿಸಿದೆ. ಧರಣಿ ಕುರಿತು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ನಿರ್ಧಾರ ತೆಗೆದುಕೊಂಡಿದೆ. ಸಚಿವಾಲಯದ ಹಣವನ್ನು ಬಳಸಿ ಪ್ರತಿಭಟನಾನಿರತರಿಗೆ ಊಟ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಧರಣಿ ನಿರತರಿಗೆ ಕಂದಾಯ ಸಚಿವ ಆರ್.ಅಶೋಕ್ ಟಾಂಗ್ ನೀಡಿದ್ದರು. ‘ಸರ್ಕಾರದ ಹಣದಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಊಟ ಮಾಡ್ಕೊಂಡು ಮಲ್ಕೊಂಡಿದ್ದಾರೆ’ ಎಂದು ಅಶೋಕ್ ವ್ಯಂಗ್ಯವಾಡಿದ್ದ ಹಿನ್ನೆಲೆಯಲ್ಲಿ ನಿನ್ನೆ ಮತ್ತು ಇವತ್ತು ಕೆಪಿಸಿಸಿ ವತಿಯಿಂದಲೇ ಊಟದ ವ್ಯವಸ್ಥೆ ಮಾಡಲಾಗಿತ್ತು. ಮೊದಲೆರೆಡು ದಿನ ಸರ್ಕಾರ ವ್ಯವಸ್ಥೆ ಮಾಡಿದ್ದ ಊಟದ ಹಣವನ್ನೂ ಮರುಪಾವತಿಸಲು ಕೆಪಿಸಿಸಿ ನಿರ್ಧರಿಸಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ತಂತ್ರ: ಅಶೋಕ್ ಟೀಕೆ

ಉಡುಪಿಯಲ್ಲಿ ಕಾಂಗ್ರೆಸ್ ನಾಯಕರ ವರ್ತನೆಯನ್ನು ಟೀಕಿಸಿದ್ದ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಒಡಕು ಬೀದಿಯಲ್ಲಿದೆ. ಹಿಜಾಬ್ ವಿವಾದ ಚರ್ಚೆಗೆ ಬರದಂತೆ ಮಾಡಲು ವಿಧಾನಸಭೆಯಲ್ಲಿ ತಂತ್ರ ಮಾಡುತ್ತಿದ್ದಾರೆ. ಹಿಜಾಬ್ ವಿವಾದದ ಹಿಂದೆ ಐಸಿಸ್ ಸಂಘಟನೆ ಕೆಲಸ ಮಾಡುತ್ತಿದೆ. ಒಂದು ಸಂಸ್ಥೆಯ ಹಿಜಾಬ್ ವಿಚಾರ ಪ್ರಪಂಚಕ್ಕೆ ಹಬ್ಬಿದ್ದು ಹೇಗೆ? ಆರು ವಿದ್ಯಾರ್ಥಿಗಳೇ ಇಷ್ಟೆಲ್ಲಾ ಮಾಡುವುದಕ್ಕೆ ಸಾಧ್ಯವೇ? ಕೆಲವರು ಟಿಸಿ ಕೇಳ್ತಿದ್ದಾರೆ, ಕೆಲವರು ಶಾಲೆಗೆ ಬರಲ್ಲ ಅಂತಿದ್ದಾರೆ. ವಿದ್ಯೆ ಮುಖ್ಯ, ಧರ್ಮ ಮುಖ್ಯ ಅಲ್ಲ ಎಂದು ವಿನಂತಿಸುವೆ. ವಿದ್ಯೆ ಇದ್ದರೆ ಧರ್ಮ ಎಲ್ಲವೂ ನಿಮ್ಮ ಹತ್ತಿರ ಓಡಿಬರುತ್ತದೆ. ದೇಶ ದೊಡ್ಡದು, ಧರ್ಮ ದೊಡ್ಡದಲ್ಲ ಅರ್ಥ ಮಾಡಿಕೊಳ್ಳಿ. ಕಾಂಗ್ರೆಸ್​ ಪಕ್ಷ ನಂಬಿಕೊಂಡು ಹೋದರೆ ದೇವರೇ ಗತಿ ಎಂದು ಹೇಳಿದ್ದರು.

ಈಶ್ವರಪ್ಪ ವಜಾಕ್ಕೆ ಪಟ್ಟು ಹಿಡಿದಿರುವ ಕಾಂಗ್ರೆಸ್​ಗೆ ತಿರುಗೇಟು ನೀಡಿದ ಅಶೋಕ್, ಕಾಂಗ್ರೆಸ್​ ಪಕ್ಷದ ಎಲ್ಲರೂ ಬಿಜೆಪಿಗೆ ಸೇರಿಬಿಡಿ. ಆಮೇಲೆ ನೀವು ಬಿಜೆಪಿಗೆ ಸಲಹೆ ಕೊಡಿ ಎಂದು ಸಿಎಂ, ಬಿಜೆಪಿಗೆ ಸ್ವಾಭಿಮಾನವಿಲ್ಲ ಎಂದಿದ್ದ ಡಿಕೆಶಿಗೆ ಟಾಂಗ್ ಕೊಟ್ಟರು.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ: ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರ ಕರೆ

ಇದನ್ನೂ ಓದಿ: ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಮುಂದುವರಿದ ಕಾಂಗ್ರೆಸ್ ನಾಯಕರ ಧರಣಿ

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ