AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹೋರಾತ್ರಿ ಧರಣಿಗೆ ಸರ್ಕಾರದ ಊಟ ಬೇಡ ಎಂದ ಕಾಂಗ್ರೆಸ್: ಅಶೋಕ್ ಟೀಕೆಗೆ ಕಾಂಗ್ರೆಸ್ ಸೆಡ್ಡು

ಧರಣಿ ಕುರಿತು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ನಿರ್ಧಾರ ತೆಗೆದುಕೊಂಡಿದೆ.

ಆಹೋರಾತ್ರಿ ಧರಣಿಗೆ ಸರ್ಕಾರದ ಊಟ ಬೇಡ ಎಂದ ಕಾಂಗ್ರೆಸ್: ಅಶೋಕ್ ಟೀಕೆಗೆ ಕಾಂಗ್ರೆಸ್ ಸೆಡ್ಡು
ಸದನದಲ್ಲೇ ರಾತ್ರಿ ಕಳೆದ ಕಾಂಗ್ರೆಸ್ ನಾಯಕರು
TV9 Web
| Edited By: |

Updated on: Feb 20, 2022 | 10:14 PM

Share

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ವಿರೋಧಿಸಿ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಸರ್ಕಾರದ ವತಿಯಿಂದ ಪೂರೈಸುತ್ತಿರುವ ಊಟವನ್ನು ನಿರಾಕರಿಸಿ, ಪಕ್ಷದ ವತಿಯಿಂದಲೇ ಶಾಸಕರಿಗೆ ಊಟ ಕೊಡಲು ಕಾಂಗ್ರೆಸ್ ನಿರ್ಧರಿಸಿದೆ. ಧರಣಿ ಕುರಿತು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ನಿರ್ಧಾರ ತೆಗೆದುಕೊಂಡಿದೆ. ಸಚಿವಾಲಯದ ಹಣವನ್ನು ಬಳಸಿ ಪ್ರತಿಭಟನಾನಿರತರಿಗೆ ಊಟ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಧರಣಿ ನಿರತರಿಗೆ ಕಂದಾಯ ಸಚಿವ ಆರ್.ಅಶೋಕ್ ಟಾಂಗ್ ನೀಡಿದ್ದರು. ‘ಸರ್ಕಾರದ ಹಣದಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಊಟ ಮಾಡ್ಕೊಂಡು ಮಲ್ಕೊಂಡಿದ್ದಾರೆ’ ಎಂದು ಅಶೋಕ್ ವ್ಯಂಗ್ಯವಾಡಿದ್ದ ಹಿನ್ನೆಲೆಯಲ್ಲಿ ನಿನ್ನೆ ಮತ್ತು ಇವತ್ತು ಕೆಪಿಸಿಸಿ ವತಿಯಿಂದಲೇ ಊಟದ ವ್ಯವಸ್ಥೆ ಮಾಡಲಾಗಿತ್ತು. ಮೊದಲೆರೆಡು ದಿನ ಸರ್ಕಾರ ವ್ಯವಸ್ಥೆ ಮಾಡಿದ್ದ ಊಟದ ಹಣವನ್ನೂ ಮರುಪಾವತಿಸಲು ಕೆಪಿಸಿಸಿ ನಿರ್ಧರಿಸಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ತಂತ್ರ: ಅಶೋಕ್ ಟೀಕೆ

ಉಡುಪಿಯಲ್ಲಿ ಕಾಂಗ್ರೆಸ್ ನಾಯಕರ ವರ್ತನೆಯನ್ನು ಟೀಕಿಸಿದ್ದ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಒಡಕು ಬೀದಿಯಲ್ಲಿದೆ. ಹಿಜಾಬ್ ವಿವಾದ ಚರ್ಚೆಗೆ ಬರದಂತೆ ಮಾಡಲು ವಿಧಾನಸಭೆಯಲ್ಲಿ ತಂತ್ರ ಮಾಡುತ್ತಿದ್ದಾರೆ. ಹಿಜಾಬ್ ವಿವಾದದ ಹಿಂದೆ ಐಸಿಸ್ ಸಂಘಟನೆ ಕೆಲಸ ಮಾಡುತ್ತಿದೆ. ಒಂದು ಸಂಸ್ಥೆಯ ಹಿಜಾಬ್ ವಿಚಾರ ಪ್ರಪಂಚಕ್ಕೆ ಹಬ್ಬಿದ್ದು ಹೇಗೆ? ಆರು ವಿದ್ಯಾರ್ಥಿಗಳೇ ಇಷ್ಟೆಲ್ಲಾ ಮಾಡುವುದಕ್ಕೆ ಸಾಧ್ಯವೇ? ಕೆಲವರು ಟಿಸಿ ಕೇಳ್ತಿದ್ದಾರೆ, ಕೆಲವರು ಶಾಲೆಗೆ ಬರಲ್ಲ ಅಂತಿದ್ದಾರೆ. ವಿದ್ಯೆ ಮುಖ್ಯ, ಧರ್ಮ ಮುಖ್ಯ ಅಲ್ಲ ಎಂದು ವಿನಂತಿಸುವೆ. ವಿದ್ಯೆ ಇದ್ದರೆ ಧರ್ಮ ಎಲ್ಲವೂ ನಿಮ್ಮ ಹತ್ತಿರ ಓಡಿಬರುತ್ತದೆ. ದೇಶ ದೊಡ್ಡದು, ಧರ್ಮ ದೊಡ್ಡದಲ್ಲ ಅರ್ಥ ಮಾಡಿಕೊಳ್ಳಿ. ಕಾಂಗ್ರೆಸ್​ ಪಕ್ಷ ನಂಬಿಕೊಂಡು ಹೋದರೆ ದೇವರೇ ಗತಿ ಎಂದು ಹೇಳಿದ್ದರು.

ಈಶ್ವರಪ್ಪ ವಜಾಕ್ಕೆ ಪಟ್ಟು ಹಿಡಿದಿರುವ ಕಾಂಗ್ರೆಸ್​ಗೆ ತಿರುಗೇಟು ನೀಡಿದ ಅಶೋಕ್, ಕಾಂಗ್ರೆಸ್​ ಪಕ್ಷದ ಎಲ್ಲರೂ ಬಿಜೆಪಿಗೆ ಸೇರಿಬಿಡಿ. ಆಮೇಲೆ ನೀವು ಬಿಜೆಪಿಗೆ ಸಲಹೆ ಕೊಡಿ ಎಂದು ಸಿಎಂ, ಬಿಜೆಪಿಗೆ ಸ್ವಾಭಿಮಾನವಿಲ್ಲ ಎಂದಿದ್ದ ಡಿಕೆಶಿಗೆ ಟಾಂಗ್ ಕೊಟ್ಟರು.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ: ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರ ಕರೆ

ಇದನ್ನೂ ಓದಿ: ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಮುಂದುವರಿದ ಕಾಂಗ್ರೆಸ್ ನಾಯಕರ ಧರಣಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?