AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿಕೆ ಗೆ ಎಲ್ಲೆಲ್ಲಿ ಮನೆಗಳಿವೆ, ಎಲ್ಲಿ ಏನಾಗ್ತಿದೆ ಎಂದು ಗೊತ್ತಾಗಲ್ಲ ಪಾಪ; ಟಾಂಗ್​ ನೀಡಿದ ​

ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರೇ, ಕರೆಂಟ್ ಕಳ್ಳತನವನ್ನು ಕ್ಷುಲ್ಲುಕ ವಿಚಾರ ಎಂದು ತಿಪ್ಪೆ ಸಾರಿಸುತ್ತಿರುವುದಕ್ಕೆ ನಾಚಿಕೆಯಾಗಬೇಕು. ಹೀಗೆಯೇ ಇನ್ನೆಷ್ಟು ರಾಜ್ಯದ ಲೂಟಿಯನ್ನು "ಕ್ಷುಲ್ಲುಕ ವಿಚಾರ"ವೆಂದು ಸಮರ್ಥಿಸಿಕೊಳ್ಳುವಿರೋ ಏನೋ! ತಮ್ಮ ತಪ್ಪನ್ನು ಕೆಲಸದವರ ಮೇಲೆ ಹಾಕಿ ತಪ್ಪಿಸಿಕೊಳ್ಳುವ ಕುಟೀಲ ಪ್ರಯತ್ನ ತಮ್ಮದು, ಹಿಟ್ ಅಂಡ್ ರನ್ ನಿಮ್ಮ ಕಾಯಕ ಆಗಿದ್ದು, ನಿಮ್ಮ ಪಲಾಯನವಾದದ ಭಾಗವಲ್ಲವೇ ಎಂದು ಕಾಂಗ್ರೆಸ್​ ಪ್ರಶ್ನಿಸಿದೆ.

ಹೆಚ್​ಡಿಕೆ ಗೆ ಎಲ್ಲೆಲ್ಲಿ ಮನೆಗಳಿವೆ, ಎಲ್ಲಿ ಏನಾಗ್ತಿದೆ ಎಂದು ಗೊತ್ತಾಗಲ್ಲ ಪಾಪ; ಟಾಂಗ್​ ನೀಡಿದ ​
ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿಗೆ ಟಾಂಗ್​​ ಕೊಟ್ಟ ಕಾಂಗ್ರೆಸ್​
ಪ್ರಸನ್ನ ಗಾಂವ್ಕರ್​
| Edited By: |

Updated on: Nov 14, 2023 | 3:31 PM

Share

ಬೆಂಗಳೂರು, ನ.14: ದೀಪಾವಳಿ ಹಿನ್ನಲೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿಕೆ(HD Kumaraswamy)ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಪಡೆದ ಆರೋಪ ‘ಕುಮಾರಸ್ವಾಮಿಯವರೇ ಬಿಡದಿ ಮನೆ, ಜೆ ಪಿ ನಗರದ ಮನೆ ಆ ಮನೆ, ಈ ಮನೆ, ಎಲ್ಲೆಲ್ಲಿ ಮನೆಗಳಿವೆ. ಯಾವ್ಯಾವ ಮನೆಯಲ್ಲಿ ಏನೇನಾಗುತ್ತಿದೆ ಎಂಬುದು ನಿಮಗೇ ತಿಳಿದಿರುವುದಿಲ್ಲ ಪಾಪ ಎಂದು ಟ್ವಿಟ್​ ಮಾಡುವ ಮೂಲಕ ಮತ್ತೆ ಕಾಂಗ್ರೆಸ್, ಹೆಚ್‌ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದೆ.

ಹೌದು, ಇದಕ್ಕೂ ಮುಂಚೆ ಕಾಂಗ್ರೆಸ್​ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದ ಹೆಚ್​ಡಿಕೆ ‘ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಕ್ಷುಲ್ಲಕ ವಿಚಾರವನ್ನು ಕಾಂಗ್ರೆಸ್​ ದೊಡ್ಡದು ಮಾಡಿ, ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ ಎಂದಿದ್ದರು.

ಇದನ್ನೂ ಓದಿ:ಕುಮಾರಸ್ವಾಮಿ ನಿವಾಸದ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್​ ಸಂಪರ್ಕ;ಎಷ್ಟು ದಂಡ ಬೀಳಬಹುದು?

ಈ ಹೇಳಿಕೆಗೆ ಕಾಂಗ್ರೆಸ್​ ‘ರಾಜ್ಯದ ಮುಖ್ಯಮಂತ್ರಿಯಾಗಿದ್ದ ತಾವು, ಕರೆಂಟ್ ಕಳ್ಳತನವನ್ನು ಕ್ಷುಲ್ಲುಕ ವಿಚಾರ ಎಂದು ತಿಪ್ಪೆ ಸಾರಿಸುತ್ತಿರುವುದಕ್ಕೆ ನಾಚಿಕೆಯಾಗಬೇಕು. ಹೀಗೆಯೇ ಇನ್ನೆಷ್ಟು ರಾಜ್ಯದ ಲೂಟಿಯನ್ನು “ಕ್ಷುಲ್ಲುಕ ವಿಚಾರ”ವೆಂದು ಸಮರ್ಥಿಸಿಕೊಳ್ಳುವಿರೋ ಏನೋ! ತಮ್ಮ ತಪ್ಪನ್ನು ಕೆಲಸದವರ ಮೇಲೆ ಹಾಕಿ ತಪ್ಪಿಸಿಕೊಳ್ಳುವ ಕುಟೀಲ ಪ್ರಯತ್ನ ತಮ್ಮದು, ಹಿಟ್ ಅಂಡ್ ರನ್ ನಿಮ್ಮ ಕಾಯಕ ಆಗಿದ್ದು, ನಿಮ್ಮ ಪಲಾಯನವಾದದ ಭಾಗವಲ್ಲವೇ ಎಂದು ಪ್ರಶ್ನಿಸಿದೆ. ಜೊತೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿಯ 1.9 ಲಕ್ಷದ ಪೀಠೋಪಕರಣಗಳಿಗೆ 1.9 ಕೋಟಿ ಎಂದು ತಾವು ಸುಳ್ಳು ಆರೋಪ ಮಾಡಿದಾಗ ತಮ್ಮದು ಕ್ಷುಲ್ಲುಕ ಬುದ್ಧಿಯಾಗಿತ್ತೇ?, ಗ್ಯಾರಂಟಿಗಳ ಬಗ್ಗೆ ರಾಜ್ಯದ ಜನತೆಗೆ ಸುಳ್ಳು ಸಂದೇಶ ಕೊಡುತ್ತಿದ್ದೀರಲ್ಲ, ಅದು ನಿಮ್ಮ ಕ್ಷುಲ್ಲುಕ ಬುದ್ಧಿಯೋ, ಪ್ರಚಾರ ಗಿಟ್ಟಿಸಿಕೊಳ್ಳುವ ಹಪಹಪಿಯೋ?, ಅಂದಹಾಗೆ ತಾವು ಅಕ್ರಮ ಸಂಪರ್ಕ ಪಡೆದಾಗ ಕರ್ನಾಟಕ ಕತ್ತಲೆಯಲ್ಲಿ ಇರಲಿಲ್ಲ ಅಲ್ಲವೇ, ತಮ್ಮ ದೀಪಾಲಂಕಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ ಅಲ್ಲವೇ?, ದೀಪಾಲಂಕಾರದ ಅದ್ದೂರಿತನ ತೋರುವಾಗ ರಾಜ್ಯದ ಬರ ನೆನಪಾಗಲಿಲ್ಲವೇ ಎನ್ನುವ ಮೂಲಕ ಟಾಂಗ್​ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ