AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆಗಿಳಿದ ಕಾಂಗ್ರೆಸ್

PSI ನೇಮಕಾತಿ ಹಗರಣದಲ್ಲಿ ಅರೆಸ್ಟ್ ಆಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರು ಇನ್ನೂ ಕೂಡ ಜೈಲಿನಲ್ಲೆ ಇದ್ದಾರೆ. ಆದ್ರೆ ಅಮೃತ್ ಪಾಲ್ ನಂತರ ಮುಂದಿನ ಹಂತಕ್ಕೆ ತನಿಖೆ ಹೋಗಿರಲಿಲ್ಲಾ. ಅಂದಿನ ಸರ್ಕಾರದ ಪ್ರಭಾವಿ ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು.

PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆಗಿಳಿದ ಕಾಂಗ್ರೆಸ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: May 25, 2023 | 8:16 AM

Share

ಬೆಂಗಳೂರು: ಕಾಂಗ್ರೆಸ್ ಸರ್ಕಾರ(Congress Government) ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ(BJP) ವಿರುದ್ಧ ಪ್ರಬಲ ಅಸ್ತ್ರ ಪ್ರಯೋಗಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ನೂತನ ಸಚಿವ ಎಂಬಿ ಪಾಟೀಲ್(MB Patil) ತಿಳಿಸಿದ್ದಾರೆ. ಹೀಗಾಗಿ PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ ಬಂದಂತಾಗಿದೆ(PSI Recruitment Scam). ಈಗಾಗಲೇ ಈ ಪ್ರಕರಣದಲ್ಲಿ 30ಕ್ಕೂ ಹೆಚ್ಚು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆದ್ರೂ ತನಿಖೆ ನಡೆಸದೆ ಅನೇಕ ಅಂಶಗಳು ಉಳಿದುಕೊಂಡಿವೆ ಎಂದು ಈ ಹಿಂದೆಯೇ ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಅದರ ಮುಂದುವರೆದ ಭಾಗವಾಗಿ ಪಿಎಸ್​ಐ ನೇಮಕಾತಿ ಹಗರಣ ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಲು ಕಾಂಗ್ರೆಸ್ ಸರ್ಕಾರ ಉತ್ಸುಕವಾಗಿದೆ.

ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರು ಇನ್ನೂ ಕೂಡ ಜೈಲಿನಲ್ಲೆ ಇದ್ದಾರೆ. ಆದ್ರೆ ಅಮೃತ್ ಪಾಲ್ ನಂತರ ಮುಂದಿನ ಹಂತಕ್ಕೆ ತನಿಖೆ ಹೋಗಿರಲಿಲ್ಲಾ. ಅಂದಿನ ಸರ್ಕಾರದ ಪ್ರಭಾವಿ ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು. ಕಾಂಗ್ರೆಸ್ ಓರ್ವ ಸಚಿವರಲ್ಲದೆ ಹಲವಾರು ಬಿಜೆಪಿ ನಾಯಕರ ವಿರುದ್ದ ಸಹ ಆರೋಪಗಳು ಕೇಳಿಬಂದಿದ್ದವು. ಈಗಾಗಲೇ ಎರಡು ಬಾರಿ ಚಾರ್ಜ್ ಶೀಟ್ ಸಲ್ಲಿಸಿ ತನಿಖೆ ಮುಂದುವರೆಸಲಾಗುತ್ತಿದೆ. ಈ ಸಮಯದಲ್ಲಿ ತನಿಖೆಗೆ ಮತ್ತಷ್ಟು ವೇಗ ನೀಡಲು ನೂತನ ಸರ್ಕಾರ ತಯಾರಿ ನಡೆಸಿದೆ‌.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ: ಎಂಬಿ ಪಾಟೀಲ್​​

ಇನ್ನು ವಿಧಾನಸೌಧ ಠಾಣೆಯಲ್ಲಿ ನಿನ್ನೆ ದಾಖಲಾದ ಎಫ್​ಐಆರ್​ನಲ್ಲಿ  ಮತ್ತೊಂದು ರಾಜ್ಯಮಟ್ಟದ ಹಗರಣ ಬಯಲಾಗುತ್ತಾ ಎನ್ನಲಾಗುತ್ತಿದೆ. ಪಿಎಸ್ ಐ ಹಾಗೂ ಶಿಕ್ಷಕರ ನೇಮಕಾತಿಯಂತೆ ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಾಗುವ ಸಾಧ್ಯತೆ ಇದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿಯ ಗಂಗಾ ಕಲ್ಯಾಣ ಯೋಜನೆ ಅಕ್ರಮ‌ ಸಂಬಂಧ  ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇದನ್ನ ಶೀಘ್ರವೇ ಸಿಐಡಿ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.   ಈಗ ಕೇವಲ ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಮಾತ್ರ ದೂರು ಸಲ್ಲಿಸಲಾಗಿದೆ. ಆದ್ರೆ ಸಿಐಡಿಗೆ ವರ್ಗಾವಣೆಯಾದ ಬಳಿಕ ಇತರ ಅಭಿವೃದ್ಸಿ ನಿಗಮಗಳ ಗಂಗಾ ಕಲ್ಯಾಣ ಯೋಜನೆ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತೆ. ಸುಮಾರು 13 ಸಾವಿರ ಕೋಟಿ ಗಂಗಾ ಕಲ್ಯಾಣ ಯೋಜನೆಗೆ ವ್ಯಯಿಸಲಾಗಿದೆ ಎಂದು ಸದನಕ್ಕೆ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು