AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆಗಿಳಿದ ಕಾಂಗ್ರೆಸ್

PSI ನೇಮಕಾತಿ ಹಗರಣದಲ್ಲಿ ಅರೆಸ್ಟ್ ಆಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರು ಇನ್ನೂ ಕೂಡ ಜೈಲಿನಲ್ಲೆ ಇದ್ದಾರೆ. ಆದ್ರೆ ಅಮೃತ್ ಪಾಲ್ ನಂತರ ಮುಂದಿನ ಹಂತಕ್ಕೆ ತನಿಖೆ ಹೋಗಿರಲಿಲ್ಲಾ. ಅಂದಿನ ಸರ್ಕಾರದ ಪ್ರಭಾವಿ ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು.

PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆಗಿಳಿದ ಕಾಂಗ್ರೆಸ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: May 25, 2023 | 8:16 AM

Share

ಬೆಂಗಳೂರು: ಕಾಂಗ್ರೆಸ್ ಸರ್ಕಾರ(Congress Government) ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ(BJP) ವಿರುದ್ಧ ಪ್ರಬಲ ಅಸ್ತ್ರ ಪ್ರಯೋಗಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ನೂತನ ಸಚಿವ ಎಂಬಿ ಪಾಟೀಲ್(MB Patil) ತಿಳಿಸಿದ್ದಾರೆ. ಹೀಗಾಗಿ PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ ಬಂದಂತಾಗಿದೆ(PSI Recruitment Scam). ಈಗಾಗಲೇ ಈ ಪ್ರಕರಣದಲ್ಲಿ 30ಕ್ಕೂ ಹೆಚ್ಚು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆದ್ರೂ ತನಿಖೆ ನಡೆಸದೆ ಅನೇಕ ಅಂಶಗಳು ಉಳಿದುಕೊಂಡಿವೆ ಎಂದು ಈ ಹಿಂದೆಯೇ ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಅದರ ಮುಂದುವರೆದ ಭಾಗವಾಗಿ ಪಿಎಸ್​ಐ ನೇಮಕಾತಿ ಹಗರಣ ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಲು ಕಾಂಗ್ರೆಸ್ ಸರ್ಕಾರ ಉತ್ಸುಕವಾಗಿದೆ.

ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರು ಇನ್ನೂ ಕೂಡ ಜೈಲಿನಲ್ಲೆ ಇದ್ದಾರೆ. ಆದ್ರೆ ಅಮೃತ್ ಪಾಲ್ ನಂತರ ಮುಂದಿನ ಹಂತಕ್ಕೆ ತನಿಖೆ ಹೋಗಿರಲಿಲ್ಲಾ. ಅಂದಿನ ಸರ್ಕಾರದ ಪ್ರಭಾವಿ ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು. ಕಾಂಗ್ರೆಸ್ ಓರ್ವ ಸಚಿವರಲ್ಲದೆ ಹಲವಾರು ಬಿಜೆಪಿ ನಾಯಕರ ವಿರುದ್ದ ಸಹ ಆರೋಪಗಳು ಕೇಳಿಬಂದಿದ್ದವು. ಈಗಾಗಲೇ ಎರಡು ಬಾರಿ ಚಾರ್ಜ್ ಶೀಟ್ ಸಲ್ಲಿಸಿ ತನಿಖೆ ಮುಂದುವರೆಸಲಾಗುತ್ತಿದೆ. ಈ ಸಮಯದಲ್ಲಿ ತನಿಖೆಗೆ ಮತ್ತಷ್ಟು ವೇಗ ನೀಡಲು ನೂತನ ಸರ್ಕಾರ ತಯಾರಿ ನಡೆಸಿದೆ‌.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ: ಎಂಬಿ ಪಾಟೀಲ್​​

ಇನ್ನು ವಿಧಾನಸೌಧ ಠಾಣೆಯಲ್ಲಿ ನಿನ್ನೆ ದಾಖಲಾದ ಎಫ್​ಐಆರ್​ನಲ್ಲಿ  ಮತ್ತೊಂದು ರಾಜ್ಯಮಟ್ಟದ ಹಗರಣ ಬಯಲಾಗುತ್ತಾ ಎನ್ನಲಾಗುತ್ತಿದೆ. ಪಿಎಸ್ ಐ ಹಾಗೂ ಶಿಕ್ಷಕರ ನೇಮಕಾತಿಯಂತೆ ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಾಗುವ ಸಾಧ್ಯತೆ ಇದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿಯ ಗಂಗಾ ಕಲ್ಯಾಣ ಯೋಜನೆ ಅಕ್ರಮ‌ ಸಂಬಂಧ  ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇದನ್ನ ಶೀಘ್ರವೇ ಸಿಐಡಿ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.   ಈಗ ಕೇವಲ ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಮಾತ್ರ ದೂರು ಸಲ್ಲಿಸಲಾಗಿದೆ. ಆದ್ರೆ ಸಿಐಡಿಗೆ ವರ್ಗಾವಣೆಯಾದ ಬಳಿಕ ಇತರ ಅಭಿವೃದ್ಸಿ ನಿಗಮಗಳ ಗಂಗಾ ಕಲ್ಯಾಣ ಯೋಜನೆ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತೆ. ಸುಮಾರು 13 ಸಾವಿರ ಕೋಟಿ ಗಂಗಾ ಕಲ್ಯಾಣ ಯೋಜನೆಗೆ ವ್ಯಯಿಸಲಾಗಿದೆ ಎಂದು ಸದನಕ್ಕೆ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್