AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆಗಿಳಿದ ಕಾಂಗ್ರೆಸ್

PSI ನೇಮಕಾತಿ ಹಗರಣದಲ್ಲಿ ಅರೆಸ್ಟ್ ಆಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರು ಇನ್ನೂ ಕೂಡ ಜೈಲಿನಲ್ಲೆ ಇದ್ದಾರೆ. ಆದ್ರೆ ಅಮೃತ್ ಪಾಲ್ ನಂತರ ಮುಂದಿನ ಹಂತಕ್ಕೆ ತನಿಖೆ ಹೋಗಿರಲಿಲ್ಲಾ. ಅಂದಿನ ಸರ್ಕಾರದ ಪ್ರಭಾವಿ ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು.

PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆಗಿಳಿದ ಕಾಂಗ್ರೆಸ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: May 25, 2023 | 8:16 AM

Share

ಬೆಂಗಳೂರು: ಕಾಂಗ್ರೆಸ್ ಸರ್ಕಾರ(Congress Government) ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ(BJP) ವಿರುದ್ಧ ಪ್ರಬಲ ಅಸ್ತ್ರ ಪ್ರಯೋಗಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ನೂತನ ಸಚಿವ ಎಂಬಿ ಪಾಟೀಲ್(MB Patil) ತಿಳಿಸಿದ್ದಾರೆ. ಹೀಗಾಗಿ PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ ಬಂದಂತಾಗಿದೆ(PSI Recruitment Scam). ಈಗಾಗಲೇ ಈ ಪ್ರಕರಣದಲ್ಲಿ 30ಕ್ಕೂ ಹೆಚ್ಚು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆದ್ರೂ ತನಿಖೆ ನಡೆಸದೆ ಅನೇಕ ಅಂಶಗಳು ಉಳಿದುಕೊಂಡಿವೆ ಎಂದು ಈ ಹಿಂದೆಯೇ ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಅದರ ಮುಂದುವರೆದ ಭಾಗವಾಗಿ ಪಿಎಸ್​ಐ ನೇಮಕಾತಿ ಹಗರಣ ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಲು ಕಾಂಗ್ರೆಸ್ ಸರ್ಕಾರ ಉತ್ಸುಕವಾಗಿದೆ.

ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರು ಇನ್ನೂ ಕೂಡ ಜೈಲಿನಲ್ಲೆ ಇದ್ದಾರೆ. ಆದ್ರೆ ಅಮೃತ್ ಪಾಲ್ ನಂತರ ಮುಂದಿನ ಹಂತಕ್ಕೆ ತನಿಖೆ ಹೋಗಿರಲಿಲ್ಲಾ. ಅಂದಿನ ಸರ್ಕಾರದ ಪ್ರಭಾವಿ ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು. ಕಾಂಗ್ರೆಸ್ ಓರ್ವ ಸಚಿವರಲ್ಲದೆ ಹಲವಾರು ಬಿಜೆಪಿ ನಾಯಕರ ವಿರುದ್ದ ಸಹ ಆರೋಪಗಳು ಕೇಳಿಬಂದಿದ್ದವು. ಈಗಾಗಲೇ ಎರಡು ಬಾರಿ ಚಾರ್ಜ್ ಶೀಟ್ ಸಲ್ಲಿಸಿ ತನಿಖೆ ಮುಂದುವರೆಸಲಾಗುತ್ತಿದೆ. ಈ ಸಮಯದಲ್ಲಿ ತನಿಖೆಗೆ ಮತ್ತಷ್ಟು ವೇಗ ನೀಡಲು ನೂತನ ಸರ್ಕಾರ ತಯಾರಿ ನಡೆಸಿದೆ‌.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ: ಎಂಬಿ ಪಾಟೀಲ್​​

ಇನ್ನು ವಿಧಾನಸೌಧ ಠಾಣೆಯಲ್ಲಿ ನಿನ್ನೆ ದಾಖಲಾದ ಎಫ್​ಐಆರ್​ನಲ್ಲಿ  ಮತ್ತೊಂದು ರಾಜ್ಯಮಟ್ಟದ ಹಗರಣ ಬಯಲಾಗುತ್ತಾ ಎನ್ನಲಾಗುತ್ತಿದೆ. ಪಿಎಸ್ ಐ ಹಾಗೂ ಶಿಕ್ಷಕರ ನೇಮಕಾತಿಯಂತೆ ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಾಗುವ ಸಾಧ್ಯತೆ ಇದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿಯ ಗಂಗಾ ಕಲ್ಯಾಣ ಯೋಜನೆ ಅಕ್ರಮ‌ ಸಂಬಂಧ  ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇದನ್ನ ಶೀಘ್ರವೇ ಸಿಐಡಿ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.   ಈಗ ಕೇವಲ ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಮಾತ್ರ ದೂರು ಸಲ್ಲಿಸಲಾಗಿದೆ. ಆದ್ರೆ ಸಿಐಡಿಗೆ ವರ್ಗಾವಣೆಯಾದ ಬಳಿಕ ಇತರ ಅಭಿವೃದ್ಸಿ ನಿಗಮಗಳ ಗಂಗಾ ಕಲ್ಯಾಣ ಯೋಜನೆ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತೆ. ಸುಮಾರು 13 ಸಾವಿರ ಕೋಟಿ ಗಂಗಾ ಕಲ್ಯಾಣ ಯೋಜನೆಗೆ ವ್ಯಯಿಸಲಾಗಿದೆ ಎಂದು ಸದನಕ್ಕೆ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ