AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಲಂಚ ರೇಟ್ ಕಾರ್ಡ್ ಬಿಡುಗಡೆ ಮಾಡಿದ ಕಾಂಗ್ರೆಸ್​: ಪ್ರತಿ ಹುದ್ದೆಗೂ ಒಂದೊಂದು ಲಂಚದ ದರ ಫಿಕ್ಸ್!

ರಾಜ್ಯ ಸರ್ಕಾರ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್​ನಿಂದ ವಿಭಿನ್ನ ರೀತಿಯಾಗಿ ಭ್ರಷ್ಟಾಚಾರ ಅಭಿಯಾನಕ್ಕೆ ಪ್ಲ್ಯಾನ್​ ಮಾಡುತ್ತಿದೆ. ಅಭಿಯಾನದ ಭಾಗವಾಗಿ ಸದ್ಯ ಕಾಂಗ್ರೆಸ್​ನಿಂದ ಬಿಜೆಪಿ ಲಂಚ ರೇಟ್ ಕಾರ್ಡ್ ಬಿಡುಗಡೆ ಮಾಡಿದೆ.

ಬಿಜೆಪಿ ಲಂಚ ರೇಟ್ ಕಾರ್ಡ್ ಬಿಡುಗಡೆ ಮಾಡಿದ ಕಾಂಗ್ರೆಸ್​: ಪ್ರತಿ ಹುದ್ದೆಗೂ ಒಂದೊಂದು ಲಂಚದ ದರ ಫಿಕ್ಸ್!
ರೇಟ್ ಕಾರ್ಡ್
TV9 Web
| Edited By: |

Updated on: Sep 13, 2022 | 5:31 PM

Share

ಬೆಂಗಳೂರು: ಕರ್ನಾಟಕ ಈಗ ಕರಪ್ಶನ್ ಕ್ಯಾಪಿಟಲ್ ಆಫ್‌‌ ಇಂಡಿಯಾ ಆಗಿದೆ. ಡಬಲ್‌ ಇಂಜಿನ್ ಸರ್ಕಾರ ಬಂದ ಮೇಲೆ ಬೊಮ್ಮಾಯಿ ಸರ್ಕಾರ ರೇಟ್ ಕಾರ್ಡ್ ಹಾಕಿ, ಯಾವು ಯಾವುದಕ್ಕೆ ಎಷ್ಟೆಷ್ಟು ರೇಟ್ ಅಂತ ಫಿಕ್ಸ್​ ಮಾಡಲಾಗಿದೆ. ಎಲ್ಲ ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಆಗಿಬಿಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಜೊತೆಗೆ ರಾಜ್ಯ ಸರ್ಕಾರ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್​ನಿಂದ ವಿಭಿನ್ನ ರೀತಿಯಾಗಿ ಭ್ರಷ್ಟಾಚಾರ ಅಭಿಯಾನಕ್ಕೆ ಪ್ಲ್ಯಾನ್​ ಮಾಡುತ್ತಿದೆ. ಅಭಿಯಾನದ ಭಾಗವಾಗಿ ಸದ್ಯ ಕಾಂಗ್ರೆಸ್​ನಿಂದ ಬಿಜೆಪಿ ಲಂಚ ರೇಟ್ ಕಾರ್ಡ್ ಬಿಡುಗಡೆ ಮಾಡಿದೆ.

ಸರ್ಕಾರದ ಡೀಲ್​ಗಳು ಹಾಗೂ ಶೇಕಡಾವಾರು ಕಾರ್ಡ್ ಹೀಗಿದೆ:

ಕೋವಿಡ್ ಕಿಟ್ ಪೂರೈಕೆ -75%, ಪಿಡಬ್ಲ್ಯೂಡಿ ಒಪ್ಪಂದ -40%, ಮಠಕ್ಕೆ ಅನುದಾನ -40%, ಉಪಕರಣಗಳ ಪೂರೈಕೆ – 40%, ಮೊಟ್ಟೆ ಪೂರೈಕೆ -30%.

ಹುದ್ದೆಗಳು ಮತ್ತು ದರ:

ಬೆಸ್ಕಾಂ-1 ಕೋಟಿ, ಸಹಾಯಕ ಪ್ರಾಧ್ಯಾಪಕ 50-70 ಲಕ್ಷ, PSI – 80 ಲಕ್ಷ, ಉಪನ್ಯಾಸಕ – 30-50 ಲಕ್ಷ, FDI 30 ಲಕ್ಷ, ಸಹಾಯಕ ಇಂಜಿನಿಯರ್ 30 ಲಕ್ಷ, ಬಮುಲ್ 25 ಲಕ್ಷ, PWD ಸಹಾಯಕ ಇಂಜಿನಿಯರ್ 10ಲಕ್ಷ, ಪೊಲೀಸ್ ಪೇದೆ 8 ಲಕ್ಷ, BDA ಆಯುಕ್ತ 10- 15 ಲಕ್ಷ, KPSC ಅಧ್ಯಕ್ಷ ಸ್ಥಾನ 3.75 ರಿಂದ 16 ಕೋಟಿ, ಡಿಸಿ ಮತ್ತು ಎಸ್. ಪಿ 1 ರಿಂದ 16 ಕೋಟಿ, ಉಪಕುಲಪತಿ-1 ರಿಂದ 10 ಕೋಟಿ, ಎಸಿ ಮತ್ತು ತಹಸೀಲ್ದಾರ್ 50 ಲಕ್ಷದಿಂದ 3 ಕೋಟಿ, ರೈಲ್ವೆ ಹುದ್ದೆ- 10 ಲಕ್ಷ,

ವರ್ಗಾವಣೆ ದರ:

ಸಬ್ ರಿಜಿಸ್ಟರ್ 50 ಲಕ್ಷದಿಂದ 5 ಕೋಟಿ, PSI 10 ಲಕ್ಷದಿಂದ 1 ಕೋಟಿ, ಇಂಜಿನಿಯರ್ 5 ಲಕ್ಷದಿಂದ 5 ಕೋಟಿ, ವಿವಿಧ ಹಗರಣಗಳಲ್ಲಿ 1 ಲಕ್ಷ 50 ಸಾವಿರ ಕೋಟಿ ಲೂಟಿ ಮಾಡಿದ್ದಾರೆ ಎಂದು ಕಾರ್ಡ್ ಬಿಡುಗಡೆ ಮಾಡಲಾಗಿದೆ.

ವಿಡಂಬನಾತ್ಮಕ ವಿಡಿಯೋ ಬಿಡುಗಡೆ:

ಭ್ರಷ್ಟಾಚಾರ ಭ್ರಷ್ಟಾಚಾರ ಕಮಿಷನ್ನೇ ಬಿಜೆಪಿಗೆ ಆಹಾರ ಸಾಂಗ್ ರಿಲೀಸ್ ಮಾಡಲಾಯಿತು. ಬ್ಯಾನರ್​ನಲ್ಲಿ 200 ರೂ. ನೋಟ್ ಪ್ರಿಂಟ್ ಮಾಡಿದ ಕಾಂಗ್ರೆಸ್, 200 ರೂ. ನೋಟಿನಲ್ಲಿ ಭ್ರಷ್ಟ ಜನತಾ ಪಕ್ಷ ಅಂದ್ರೆ ಭ್ರಷ್ಟಾಚಾರ, 40% ಕಮಿಷನ್ ಸರ್ಕಾರ, ಹೆಚ್ಚಿನ ಮಾಹಿತಿಗಾಗಿ 8447704040 ಈ ನಂಬರ್​ಗೆ ಕರೆ ಮಾಡಿ ಎಂದು ಹೆಲ್ಪ್ ಲೈನ್ ಸಂಖ್ಯೆ ಮುದ್ರಣ ಮಾಡಲಾಗಿದೆ. ನಾನು ಕರ್ನಾಟಕದ ಪ್ರತಿಯೊಬ್ಬ ನಾಗರೀಕರಿಂದ 40% ಕಮಿಷನ್ ತೆಗೆದುಕೊಳ್ಳುವ ಭರವಸೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪೋಟೋ ಮುದ್ರಣ ಮಾಡಲಾಗಿದೆ. ಕಮಿಷನ್​ನ್ನು ಕರೆನ್ಸಿ ಮಾಡಿದ ಸರ್ಕಾರ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ