AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಲಂಚ ರೇಟ್ ಕಾರ್ಡ್ ಬಿಡುಗಡೆ ಮಾಡಿದ ಕಾಂಗ್ರೆಸ್​: ಪ್ರತಿ ಹುದ್ದೆಗೂ ಒಂದೊಂದು ಲಂಚದ ದರ ಫಿಕ್ಸ್!

ರಾಜ್ಯ ಸರ್ಕಾರ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್​ನಿಂದ ವಿಭಿನ್ನ ರೀತಿಯಾಗಿ ಭ್ರಷ್ಟಾಚಾರ ಅಭಿಯಾನಕ್ಕೆ ಪ್ಲ್ಯಾನ್​ ಮಾಡುತ್ತಿದೆ. ಅಭಿಯಾನದ ಭಾಗವಾಗಿ ಸದ್ಯ ಕಾಂಗ್ರೆಸ್​ನಿಂದ ಬಿಜೆಪಿ ಲಂಚ ರೇಟ್ ಕಾರ್ಡ್ ಬಿಡುಗಡೆ ಮಾಡಿದೆ.

ಬಿಜೆಪಿ ಲಂಚ ರೇಟ್ ಕಾರ್ಡ್ ಬಿಡುಗಡೆ ಮಾಡಿದ ಕಾಂಗ್ರೆಸ್​: ಪ್ರತಿ ಹುದ್ದೆಗೂ ಒಂದೊಂದು ಲಂಚದ ದರ ಫಿಕ್ಸ್!
ರೇಟ್ ಕಾರ್ಡ್
TV9 Web
| Edited By: |

Updated on: Sep 13, 2022 | 5:31 PM

Share

ಬೆಂಗಳೂರು: ಕರ್ನಾಟಕ ಈಗ ಕರಪ್ಶನ್ ಕ್ಯಾಪಿಟಲ್ ಆಫ್‌‌ ಇಂಡಿಯಾ ಆಗಿದೆ. ಡಬಲ್‌ ಇಂಜಿನ್ ಸರ್ಕಾರ ಬಂದ ಮೇಲೆ ಬೊಮ್ಮಾಯಿ ಸರ್ಕಾರ ರೇಟ್ ಕಾರ್ಡ್ ಹಾಕಿ, ಯಾವು ಯಾವುದಕ್ಕೆ ಎಷ್ಟೆಷ್ಟು ರೇಟ್ ಅಂತ ಫಿಕ್ಸ್​ ಮಾಡಲಾಗಿದೆ. ಎಲ್ಲ ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಆಗಿಬಿಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಜೊತೆಗೆ ರಾಜ್ಯ ಸರ್ಕಾರ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್​ನಿಂದ ವಿಭಿನ್ನ ರೀತಿಯಾಗಿ ಭ್ರಷ್ಟಾಚಾರ ಅಭಿಯಾನಕ್ಕೆ ಪ್ಲ್ಯಾನ್​ ಮಾಡುತ್ತಿದೆ. ಅಭಿಯಾನದ ಭಾಗವಾಗಿ ಸದ್ಯ ಕಾಂಗ್ರೆಸ್​ನಿಂದ ಬಿಜೆಪಿ ಲಂಚ ರೇಟ್ ಕಾರ್ಡ್ ಬಿಡುಗಡೆ ಮಾಡಿದೆ.

ಸರ್ಕಾರದ ಡೀಲ್​ಗಳು ಹಾಗೂ ಶೇಕಡಾವಾರು ಕಾರ್ಡ್ ಹೀಗಿದೆ:

ಕೋವಿಡ್ ಕಿಟ್ ಪೂರೈಕೆ -75%, ಪಿಡಬ್ಲ್ಯೂಡಿ ಒಪ್ಪಂದ -40%, ಮಠಕ್ಕೆ ಅನುದಾನ -40%, ಉಪಕರಣಗಳ ಪೂರೈಕೆ – 40%, ಮೊಟ್ಟೆ ಪೂರೈಕೆ -30%.

ಹುದ್ದೆಗಳು ಮತ್ತು ದರ:

ಬೆಸ್ಕಾಂ-1 ಕೋಟಿ, ಸಹಾಯಕ ಪ್ರಾಧ್ಯಾಪಕ 50-70 ಲಕ್ಷ, PSI – 80 ಲಕ್ಷ, ಉಪನ್ಯಾಸಕ – 30-50 ಲಕ್ಷ, FDI 30 ಲಕ್ಷ, ಸಹಾಯಕ ಇಂಜಿನಿಯರ್ 30 ಲಕ್ಷ, ಬಮುಲ್ 25 ಲಕ್ಷ, PWD ಸಹಾಯಕ ಇಂಜಿನಿಯರ್ 10ಲಕ್ಷ, ಪೊಲೀಸ್ ಪೇದೆ 8 ಲಕ್ಷ, BDA ಆಯುಕ್ತ 10- 15 ಲಕ್ಷ, KPSC ಅಧ್ಯಕ್ಷ ಸ್ಥಾನ 3.75 ರಿಂದ 16 ಕೋಟಿ, ಡಿಸಿ ಮತ್ತು ಎಸ್. ಪಿ 1 ರಿಂದ 16 ಕೋಟಿ, ಉಪಕುಲಪತಿ-1 ರಿಂದ 10 ಕೋಟಿ, ಎಸಿ ಮತ್ತು ತಹಸೀಲ್ದಾರ್ 50 ಲಕ್ಷದಿಂದ 3 ಕೋಟಿ, ರೈಲ್ವೆ ಹುದ್ದೆ- 10 ಲಕ್ಷ,

ವರ್ಗಾವಣೆ ದರ:

ಸಬ್ ರಿಜಿಸ್ಟರ್ 50 ಲಕ್ಷದಿಂದ 5 ಕೋಟಿ, PSI 10 ಲಕ್ಷದಿಂದ 1 ಕೋಟಿ, ಇಂಜಿನಿಯರ್ 5 ಲಕ್ಷದಿಂದ 5 ಕೋಟಿ, ವಿವಿಧ ಹಗರಣಗಳಲ್ಲಿ 1 ಲಕ್ಷ 50 ಸಾವಿರ ಕೋಟಿ ಲೂಟಿ ಮಾಡಿದ್ದಾರೆ ಎಂದು ಕಾರ್ಡ್ ಬಿಡುಗಡೆ ಮಾಡಲಾಗಿದೆ.

ವಿಡಂಬನಾತ್ಮಕ ವಿಡಿಯೋ ಬಿಡುಗಡೆ:

ಭ್ರಷ್ಟಾಚಾರ ಭ್ರಷ್ಟಾಚಾರ ಕಮಿಷನ್ನೇ ಬಿಜೆಪಿಗೆ ಆಹಾರ ಸಾಂಗ್ ರಿಲೀಸ್ ಮಾಡಲಾಯಿತು. ಬ್ಯಾನರ್​ನಲ್ಲಿ 200 ರೂ. ನೋಟ್ ಪ್ರಿಂಟ್ ಮಾಡಿದ ಕಾಂಗ್ರೆಸ್, 200 ರೂ. ನೋಟಿನಲ್ಲಿ ಭ್ರಷ್ಟ ಜನತಾ ಪಕ್ಷ ಅಂದ್ರೆ ಭ್ರಷ್ಟಾಚಾರ, 40% ಕಮಿಷನ್ ಸರ್ಕಾರ, ಹೆಚ್ಚಿನ ಮಾಹಿತಿಗಾಗಿ 8447704040 ಈ ನಂಬರ್​ಗೆ ಕರೆ ಮಾಡಿ ಎಂದು ಹೆಲ್ಪ್ ಲೈನ್ ಸಂಖ್ಯೆ ಮುದ್ರಣ ಮಾಡಲಾಗಿದೆ. ನಾನು ಕರ್ನಾಟಕದ ಪ್ರತಿಯೊಬ್ಬ ನಾಗರೀಕರಿಂದ 40% ಕಮಿಷನ್ ತೆಗೆದುಕೊಳ್ಳುವ ಭರವಸೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪೋಟೋ ಮುದ್ರಣ ಮಾಡಲಾಗಿದೆ. ಕಮಿಷನ್​ನ್ನು ಕರೆನ್ಸಿ ಮಾಡಿದ ಸರ್ಕಾರ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ