AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ, ಡಿಸಿಎಂ ಬೆಂಬಲಕ್ಕೆ ನಿಲ್ಲುವಂತೆ ಶಾಸಕರು, ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಸಿಎಂ ಡಿಸಿಎಂ ಬೆಂಬಲಕ್ಕೆ ಸಚಿವರು ಶಾಸಕರು ಯಾಕೆ ಮುಂದೆ ಬರುತ್ತಿಲ್ಲ ಎಂದು ಪ್ರಶ್ನೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್, ವಾರ್ನಿಂಗ್ ಕೊಟ್ಟಿದ್ದಾರೆ. ವಿವಾದ, ಗೊಂದಲಗಳ ಸಂದರ್ಭದಲ್ಲಿ ಶಾಸಕರು ಸಚಿವರು ಸಿಎಂ ಡಿಸಿಎಂ ಬೆಂಬಲಕ್ಕೆ ನಿಂತು ಕೌಂಟರ್ ಕೊಡುವ ಕೆಲಸ ಮಾಡಿ ಎಂದಿದ್ದಾರೆ.

ಸಿಎಂ, ಡಿಸಿಎಂ ಬೆಂಬಲಕ್ಕೆ ನಿಲ್ಲುವಂತೆ ಶಾಸಕರು, ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Follow us
ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು

Updated on: Jan 15, 2024 | 12:11 PM

ಬೆಂಗಳೂರು, ಜ.15: ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ಚರ್ಚೆ, ವಾದ-ವಿವಾದ, ಆರೋಪ-ಪ್ರತ್ಯಾರೋಪಗಳು ಜೋರಾಗಿದೆ. ಸೈಲೆಂಟ್ ಆಗಿದ್ದ ಅನಂತಕುಮಾರ್ ಹೆಗಡೆಯಿಂದ (Ananth Kumar Hegde) ಹಿಡಿದು ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ಮುಗಿಬಿದಿದ್ದಾರೆ. ಸರ್ಕಾರದ ನ್ಯೂನತೆಗಳನ್ನು ಎತ್ತಿ ಹಿಡಿದು ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ ಇದಕ್ಕೆ ಸಮಪರ್ಕವಾಗಿ ಉತ್ತರ ಕೊಡುವುದರಲ್ಲಿ ಕಾಂಗ್ರೆಸ್ ಎಡವುತಿದೆ ಎಂದು ಕಾಂಗ್ರೆಸ್ ಹೈಕಮಾಂಡ್ (Congress High Command) ಗಮನಕ್ಕೆ ಬಂದಿದ್ದು ಸಿಎಂ ಡಿಸಿಎಂ ಬೆಂಬಲಕ್ಕೆ ಸಚಿವರು ಶಾಸಕರು ಯಾಕೆ ಮುಂದೆ ಬರುತ್ತಿಲ್ಲ ಎಂದು ಪ್ರಶ್ನೆ ಮಾಡಿ ವಾರ್ನಿಂಗ್ ಕೊಟ್ಟಿದೆ.

ಶಾಸಕರಿಗೆ, ಸಚಿವರಿಗೆ ಹೈಕಮಾಂಡ್ ವಾರ್ನಿಂಗ್

ಸಿಎಂ, ಡಿಸಿಎಂ ಬೆಂಬಲಕ್ಕೆ ಸಚಿವರು, ಶಾಸಕರು ಯಾಕೆ ಮುಂದೆ ಬರುತ್ತಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಪ್ರಶ್ನೆ ಮಾಡಿದ್ದಾರೆ. ವಿವಾದ, ಗೊಂದಲಗಳ ಸಂದರ್ಭದಲ್ಲಿ ಶಾಸಕರು, ಸಚಿವರು ಸಿಎಂ ಡಿಸಿಎಂ ಬೆಂಬಲಕ್ಕೆ ನಿಲ್ಲುತ್ತಿಲ್ಲ. ಶಾಸಕರು ಕೂಡ ವಿರೋಧ ಪಕ್ಷಗಳ ತಂತ್ರಗಾರಿಕೆಗೆ ಕೌಂಟರ್ ಕೊಡುವ ಕೆಲಸ ಮಾಡಿ. ಕೇವಲ ಸಿಎಂ ಡಿಸಿಎಂ ಮಾತ್ರ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡರೆ ಸಾಲದು. ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಶಾಸಕರೇ ಜನರ ಮುಂದಿಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದಾರೆ.

ಇದನ್ನೂ ಓದಿ: ಪ್ರಚೋದನಾಕರಿ ಹೇಳಿಕೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್ ದಾಖಲು

ಇನ್ನು ಸರ್ಕಾರದ ಕೆಲಸ, ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆ ಶಾಸಕರೇ ಜನರ ಮುಂದಿಡಬೇಕು. ವಿಪಕ್ಷಗಳು ಸರ್ಕಾರವನ್ನು ಅಟ್ಯಾಕ್ ಮಾಡುವಾಗ ಶಾಸಕರು ಸಚಿವರು ಸಿಎಂ ಡಿಸಿಎಂ ಬೆಂಬಲಕ್ಕೆ ಬರಬೇಕು. ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಅಧ್ಯಯನ ಮಾಡಿ ಎಂದು ಹೈಕಮಾಂಡ್ ಸಲಹೆ ನೀಡಿದ್ದು ಶಾಸಕರು ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ.

ಕಾರ್ಯಕರ್ತರೊಂದಿಗೆ ಸಭೆ ನಡೆಸಲು ಹೆಗಡೆ ನಿರ್ಧಾರ

ಮಸೀದಿ ಹಾಗೂ ಸಿದ್ಧರಾಮಯ್ಯ ಬಗ್ಗೆ ಆಡಿದ ಮಾತಿಗೆ ಬದ್ಧವಾಗಿರಲು ನಿರ್ಧರಿಸಿ, ಈಗ ಎದ್ದಿರುವ ಹಿಂದುತ್ವದ ಅಲೆಯನ್ನೆ ಅಸ್ತ್ರವಾಗಿಸಲು ಅನಂತ ಕುಮಾರ್ ಹೆಗಡೆ ಪ್ಲಾನ್ ಮಾಡಿಕೊಂಡಿದ್ದಾರೆ. ನಾಳೆ ಹಲಿಯಾಳ, ಜೊಯಿಡಾ, ದಾಂಡೆಲಿ ಮೂರು ತಾಲೂಕುಗಳ ಕಾರ್ಯಕರ್ತರ ಜೊತೆ ಹೆಗಡೆ ಸಭೆ ಮಾಡಲು ನಿರ್ಧರಿಸಿದ್ದಾರೆ. ನಾಡಿದ್ದು ಬೆಳಗಾವಿ ಜಿಲ್ಲೆಯ ಕಿತ್ತೂರು, ಖಾನಾಪುರ ತಾಲೂಕಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ