ಸಿಎಂ, ಡಿಸಿಎಂ ಬೆಂಬಲಕ್ಕೆ ನಿಲ್ಲುವಂತೆ ಶಾಸಕರು, ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಸಿಎಂ ಡಿಸಿಎಂ ಬೆಂಬಲಕ್ಕೆ ಸಚಿವರು ಶಾಸಕರು ಯಾಕೆ ಮುಂದೆ ಬರುತ್ತಿಲ್ಲ ಎಂದು ಪ್ರಶ್ನೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್, ವಾರ್ನಿಂಗ್ ಕೊಟ್ಟಿದ್ದಾರೆ. ವಿವಾದ, ಗೊಂದಲಗಳ ಸಂದರ್ಭದಲ್ಲಿ ಶಾಸಕರು ಸಚಿವರು ಸಿಎಂ ಡಿಸಿಎಂ ಬೆಂಬಲಕ್ಕೆ ನಿಂತು ಕೌಂಟರ್ ಕೊಡುವ ಕೆಲಸ ಮಾಡಿ ಎಂದಿದ್ದಾರೆ.

ಸಿಎಂ, ಡಿಸಿಎಂ ಬೆಂಬಲಕ್ಕೆ ನಿಲ್ಲುವಂತೆ ಶಾಸಕರು, ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Edited By: ಆಯೇಷಾ ಬಾನು

Updated on: Jan 15, 2024 | 12:11 PM

ಬೆಂಗಳೂರು, ಜ.15: ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ಚರ್ಚೆ, ವಾದ-ವಿವಾದ, ಆರೋಪ-ಪ್ರತ್ಯಾರೋಪಗಳು ಜೋರಾಗಿದೆ. ಸೈಲೆಂಟ್ ಆಗಿದ್ದ ಅನಂತಕುಮಾರ್ ಹೆಗಡೆಯಿಂದ (Ananth Kumar Hegde) ಹಿಡಿದು ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ಮುಗಿಬಿದಿದ್ದಾರೆ. ಸರ್ಕಾರದ ನ್ಯೂನತೆಗಳನ್ನು ಎತ್ತಿ ಹಿಡಿದು ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ ಇದಕ್ಕೆ ಸಮಪರ್ಕವಾಗಿ ಉತ್ತರ ಕೊಡುವುದರಲ್ಲಿ ಕಾಂಗ್ರೆಸ್ ಎಡವುತಿದೆ ಎಂದು ಕಾಂಗ್ರೆಸ್ ಹೈಕಮಾಂಡ್ (Congress High Command) ಗಮನಕ್ಕೆ ಬಂದಿದ್ದು ಸಿಎಂ ಡಿಸಿಎಂ ಬೆಂಬಲಕ್ಕೆ ಸಚಿವರು ಶಾಸಕರು ಯಾಕೆ ಮುಂದೆ ಬರುತ್ತಿಲ್ಲ ಎಂದು ಪ್ರಶ್ನೆ ಮಾಡಿ ವಾರ್ನಿಂಗ್ ಕೊಟ್ಟಿದೆ.

ಶಾಸಕರಿಗೆ, ಸಚಿವರಿಗೆ ಹೈಕಮಾಂಡ್ ವಾರ್ನಿಂಗ್

ಸಿಎಂ, ಡಿಸಿಎಂ ಬೆಂಬಲಕ್ಕೆ ಸಚಿವರು, ಶಾಸಕರು ಯಾಕೆ ಮುಂದೆ ಬರುತ್ತಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಪ್ರಶ್ನೆ ಮಾಡಿದ್ದಾರೆ. ವಿವಾದ, ಗೊಂದಲಗಳ ಸಂದರ್ಭದಲ್ಲಿ ಶಾಸಕರು, ಸಚಿವರು ಸಿಎಂ ಡಿಸಿಎಂ ಬೆಂಬಲಕ್ಕೆ ನಿಲ್ಲುತ್ತಿಲ್ಲ. ಶಾಸಕರು ಕೂಡ ವಿರೋಧ ಪಕ್ಷಗಳ ತಂತ್ರಗಾರಿಕೆಗೆ ಕೌಂಟರ್ ಕೊಡುವ ಕೆಲಸ ಮಾಡಿ. ಕೇವಲ ಸಿಎಂ ಡಿಸಿಎಂ ಮಾತ್ರ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡರೆ ಸಾಲದು. ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಶಾಸಕರೇ ಜನರ ಮುಂದಿಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದಾರೆ.

ಇದನ್ನೂ ಓದಿ: ಪ್ರಚೋದನಾಕರಿ ಹೇಳಿಕೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್ ದಾಖಲು

ಇನ್ನು ಸರ್ಕಾರದ ಕೆಲಸ, ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆ ಶಾಸಕರೇ ಜನರ ಮುಂದಿಡಬೇಕು. ವಿಪಕ್ಷಗಳು ಸರ್ಕಾರವನ್ನು ಅಟ್ಯಾಕ್ ಮಾಡುವಾಗ ಶಾಸಕರು ಸಚಿವರು ಸಿಎಂ ಡಿಸಿಎಂ ಬೆಂಬಲಕ್ಕೆ ಬರಬೇಕು. ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಅಧ್ಯಯನ ಮಾಡಿ ಎಂದು ಹೈಕಮಾಂಡ್ ಸಲಹೆ ನೀಡಿದ್ದು ಶಾಸಕರು ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ.

ಕಾರ್ಯಕರ್ತರೊಂದಿಗೆ ಸಭೆ ನಡೆಸಲು ಹೆಗಡೆ ನಿರ್ಧಾರ

ಮಸೀದಿ ಹಾಗೂ ಸಿದ್ಧರಾಮಯ್ಯ ಬಗ್ಗೆ ಆಡಿದ ಮಾತಿಗೆ ಬದ್ಧವಾಗಿರಲು ನಿರ್ಧರಿಸಿ, ಈಗ ಎದ್ದಿರುವ ಹಿಂದುತ್ವದ ಅಲೆಯನ್ನೆ ಅಸ್ತ್ರವಾಗಿಸಲು ಅನಂತ ಕುಮಾರ್ ಹೆಗಡೆ ಪ್ಲಾನ್ ಮಾಡಿಕೊಂಡಿದ್ದಾರೆ. ನಾಳೆ ಹಲಿಯಾಳ, ಜೊಯಿಡಾ, ದಾಂಡೆಲಿ ಮೂರು ತಾಲೂಕುಗಳ ಕಾರ್ಯಕರ್ತರ ಜೊತೆ ಹೆಗಡೆ ಸಭೆ ಮಾಡಲು ನಿರ್ಧರಿಸಿದ್ದಾರೆ. ನಾಡಿದ್ದು ಬೆಳಗಾವಿ ಜಿಲ್ಲೆಯ ಕಿತ್ತೂರು, ಖಾನಾಪುರ ತಾಲೂಕಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us