ಕಾಂಗ್ರೆಸ್​ನವರೇ ಕೆಲವರಿಗೆ ಬ್ಲಾಕ್​ಮೇಲ್ ಮಾಡುತ್ತಿದ್ದಾರೆ: ಬಿಜೆಪಿ ಶಾಸಕ ಡಾ ಸಿಎನ್​ ಅಶ್ವತ್ಥ್ ನಾರಾಯಣ ಆರೋಪ

ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್​​ ನಾರಾಯಣ ಆರೋಪ ಮಾಡಿದ್ದಾರೆ.

ಕಾಂಗ್ರೆಸ್​ನವರೇ ಕೆಲವರಿಗೆ ಬ್ಲಾಕ್​ಮೇಲ್ ಮಾಡುತ್ತಿದ್ದಾರೆ: ಬಿಜೆಪಿ ಶಾಸಕ ಡಾ ಸಿಎನ್​ ಅಶ್ವತ್ಥ್ ನಾರಾಯಣ ಆರೋಪ
ಬಿಜೆಪಿ ಶಾಸಕ ಡಾ.ಅಶ್ವತ್ಥ್​​ ನಾರಾಯಣ
Edited By:

Updated on: Sep 03, 2023 | 3:01 PM

ಬೆಂಗಳೂರು, ಸೆಪ್ಟೆಂಬರ್​ 3: ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್​​ ನಾರಾಯಣ (Dr CN Ashwath Narayan) ಆರೋಪ ಮಾಡಿದ್ದಾರೆ. ಬಿಸಿ ಪಾಟೀಲ್, ರಾಜುಗೌಡರಿಂದ ಡಿಕೆ ಶಿವಕುಮಾರ್​​ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿದ್ದಾರೆ. ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯವಿದ್ದೇವೆ, ಗೆಳೆಯರಿದ್ದೇವೆ ಎಂದು ಹೇಳಿದರು.

ಸಚಿವ ಉದಯನಿಧಿ​ ಸ್ಟಾಲಿನ್​ ಹೇಳಿಕೆ ಅಜ್ಞಾನದಿಂದ ಕೂಡಿದೆ: ಅಶ್ವತ್ಥ್​​ ನಾರಾಯಣ

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ಸಚಿವ ಉದಯನಿಧಿಯಿಂದ ದುರಹಂಕಾರದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಸಚಿವ ಉದಯನಿಧಿ​ ಸ್ಟಾಲಿನ್​ ಹೇಳಿಕೆ ಅಜ್ಞಾನದಿಂದ ಕೂಡಿದೆ ಎಂದರು.

ಇದನ್ನೂ ಓದಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಫೋಟ: ನಾಯಕತ್ವ, ಉಸ್ತುವಾರಿ ಬದಲಾವಣೆಗೆ ಪಟ್ಟು

ಪಕ್ಷದಿಂದ ಉದಯನಿಧಿ​ ಸ್ಟಾಲಿನ್​ ಉಚ್ಚಾಟನೆ ಮಾಡಬೇಕು. ಸಚಿವ ಉದಯನಿಧಿ​ ಸ್ಟಾಲಿನ್​ ದುರಹಂಕಾರದ ಹೇಳಿಕೆ ಹಿಂಪಡೆಯಲಿ. ಉದಯನಿಧಿ​ ಸ್ಟಾಲಿನ್​ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಶಾಸಕ ಡಾ.ಅಶ್ವತ್ಥ್​​ ನಾರಾಯಣ ಆಗ್ರಹಿಸಿದ್ದಾರೆ.

ಡಾ.ಅಶ್ವತ್ಥ್ ನಾರಾಯಣ ಬ್ಲಾಕ್​ಮೇಲ್ ಆರೋಪಕ್ಕೆ ಎಂಬಿಪಿ ತಿರುಗೇಟು

ಡಾ.ಅಶ್ವತ್ಥ್ ನಾರಾಯಣ ಬ್ಲಾಕ್​ಮೇಲ್ ಆರೋಪಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ ಪ್ರತಿಕ್ರಿಯಿಸಿದ್ದು, ಬಿಜೆಪಿಯವರು ಬ್ಲಾಕ್​ಮೇಲ್​ಗೆ ಒಳಗಾಗುವಂಥ ಕೆಲಸ ಮಾಡಿದ್ದಾರೆ ಅಂತಾಯ್ತಲ್ಲ ಎಂದು ತಿರುಗೇಟು ನೀಡಿದ್ದಾರೆ. ಅದೇನು ಅಂತ ಬಿಜೆಪಿ ನಾಯಕರೇ ಸ್ಪಷ್ಟಪಡಿಸಲಿ. ಯಾವ ತರಹದ ಬ್ಲಾಕ್​ಮೇಲ್ ನಮಗಂತೂ ಗೊತ್ತಿಲ್ಲ, ಅವರೇ ಸ್ಪಷ್ಟಪಡಿಸಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೆ.8 ರಂದು ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

ಕೇವಲ ಲಿಂಗಾಯತರಷ್ಟೇ ಅಲ್ಲ, ಎಲ್ಲರೂ ಕಾಂಗ್ರೆಸ್​ಗೆ ಬರುತ್ತಿದ್ದಾರೆ. ಎಲ್ಲ ಸಮುದಾಯಗಳ ನಾಯಕರು ಕೂಡ ಕಾಂಗ್ರೆಸ್​​ಗೆ ಬರುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ನೋಡಲಿಲ್ವಾ ಎಂದು ಪ್ರಶ್ನಿಸಿದರು. ವಿಧಾನಸಭೆ ಚುನಾವಣೆಯಲ್ಲಿ 36 ಲಿಂಗಾಯತ ನಾಯಕರು ಗೆದ್ದಿದ್ದಾರೆ. ಬಿಜೆಪಿಯಲ್ಲಿ ಕೇವಲ 17 ಲಿಂಗಾಯತ ಶಾಸಕರು ಗೆದ್ದಿದ್ದಾರೆ. ಆಗಲೇ ಕಾಂಗ್ರೆಸ್​ಗೆ ಲಿಂಗಾಯತರು ಶಿಫ್ಟ್ ಆಗಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us