AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿಗಳು ಕೊವಿಡ್ ಮೊದಲ ಅಲೆಗೆ ಕಾರಣರಾದರೆ, ಕಾಂಗ್ರೆಸ್‌ 3ನೇ ಅಲೆಗೆ ಕಾರಣವಾಗುತ್ತಿದ್ದಾರೆ: ರಾಜ್ಯ ಬಿಜೆಪಿ ಟ್ವೀಟ್

ಕೊವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

ತಬ್ಲಿಘಿಗಳು ಕೊವಿಡ್ ಮೊದಲ ಅಲೆಗೆ ಕಾರಣರಾದರೆ, ಕಾಂಗ್ರೆಸ್‌ 3ನೇ ಅಲೆಗೆ ಕಾರಣವಾಗುತ್ತಿದ್ದಾರೆ: ರಾಜ್ಯ ಬಿಜೆಪಿ ಟ್ವೀಟ್
ಬಿಜೆಪಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 11, 2022 | 1:45 PM

Share

ಬೆಂಗಳೂರು: ಕಾಂಗ್ರೆಸ್ ಪಕ್ಷ (Congress) ಹಮ್ಮಿಕೊಂಡಿರುವ ಸುಳ್ಳಿನ ಜಾತ್ರೆ ಈಗ ಕೊರೊನಾ ಮೂರನೇ ಅಲೆಯ (Corona third wave) ಸೂಪರ್ ಸ್ಪ್ರೆಡರ್ ಆಗುತ್ತಿದೆ. ಕೊವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

ನಿಮ್ಮ ಸುಳ್ಳಿನಜಾತ್ರೆ ಪ್ರಹಸನದಲ್ಲಿ ಇಪ್ಪತ್ತು ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಢಾರಿಗಳು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೊವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೊನಾ ಹಬ್ಬಿಸುವುದು ನಿಮ್ಮ ಉದ್ದೇಶವೇ? ಎಂದು ರಾಜ್ಯ ಬಿಜೆಪಿ ಟ್ವೀಟ್​ ಮೂಲಕ ಪ್ರಶ್ನೆ ಮಾಡಿದೆ.

ಬೆಂಗಳೂರಿಗೆ ನೀರು ಹಂಚುವುದಕ್ಕಾಗಿ ಈ ಪಾದಯಾತ್ರೆ ಎಂದು ಸುಳ್ಳಿನಜಾತ್ರೆ ಮಾಡುತ್ತಿರುವ ಕಾಂಗ್ರೆಸ್, ವಾಸ್ತವದಲ್ಲಿ ಬೆಂಗಳೂರಿಗೆ ಕೊವಿಡ್ ರಫ್ತು ಮಾಡುತ್ತಿದೆ. ಈ ಮೂಲಕ ಕೊವಿಡ್ ಸೋಂಕಿತ ಕಾಂಗ್ರೆಸಿಗರು ಊರಿಗೆಲ್ಲ ಸೋಂಕು ಹಂಚುತ್ತಿದ್ದಾರೆ. ರಾಜ್ಯದಲ್ಲಿ ಕೊವಿಡ್ ಮೂರನೇ ಅಲೆ ಉಲ್ಬಣವಾದರೆ ಕಾಂಗ್ರೆಸ್ ತಬ್ಲಿಘಿಗಳೇ ನೇರ ಹೊಣೆ ಎಂದು ಬಿಜೆಪಿ ಟ್ವೀಟ್​ ಮೂಲಕ ತಿಳಿಸಿದೆ.

ಕಾಂಗ್ರೆಸ್‌ ಪ್ರಾಯೋಜಿತ ಸುಳ್ಳಿನ ಜಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಕೊವಿಡ್‌ ಸೋಂಕು ದೃಢಪಟ್ಟಿದೆ. ಕಾಂಗ್ರೆಸ್‌ ಬೆಂಗಳೂರಿಗೆ ನೀರು ಕೊಡುತ್ತೇವೆ ಹೇಳಿ, ಈಗ ಬೆಂಗಳೂರಿಗೆ ಕೊವಿಡ್‌ ಸೋಂಕು ಹಂಚುತ್ತಿದೆ. ಡಿಕೆಶಿ ಅವರೇ, ಕೋವಿಡ್‌ಯಾತ್ರೆ ಮುಂದುವರೆಸಿ ಬೆಂಗಳೂರನ್ನು ಕೊವಿಡ್‌ ಹಬ್‌ ಮಾಡುವ ಯೋಜನೆಯಿದೆಯೇ? ಎಂದು ರಾಜ್ಯ ಬಿಜೆಪಿ ಟ್ವೀಟ್​ ಮಾಡಿದೆ.

ಇದನ್ನೂ ಓದಿ: ಉತ್ತರ ಕನ್ನಡದ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಎಚ್ ಎಮ್ ರೇವಣ್ಣಗೆ ಕೊವಿಡ್ ಪಾಸಿಟಿವ್

Published On - 1:25 pm, Tue, 11 January 22

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ