AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿಗಳು ಕೊವಿಡ್ ಮೊದಲ ಅಲೆಗೆ ಕಾರಣರಾದರೆ, ಕಾಂಗ್ರೆಸ್‌ 3ನೇ ಅಲೆಗೆ ಕಾರಣವಾಗುತ್ತಿದ್ದಾರೆ: ರಾಜ್ಯ ಬಿಜೆಪಿ ಟ್ವೀಟ್

ಕೊವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

ತಬ್ಲಿಘಿಗಳು ಕೊವಿಡ್ ಮೊದಲ ಅಲೆಗೆ ಕಾರಣರಾದರೆ, ಕಾಂಗ್ರೆಸ್‌ 3ನೇ ಅಲೆಗೆ ಕಾರಣವಾಗುತ್ತಿದ್ದಾರೆ: ರಾಜ್ಯ ಬಿಜೆಪಿ ಟ್ವೀಟ್
ಬಿಜೆಪಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 11, 2022 | 1:45 PM

Share

ಬೆಂಗಳೂರು: ಕಾಂಗ್ರೆಸ್ ಪಕ್ಷ (Congress) ಹಮ್ಮಿಕೊಂಡಿರುವ ಸುಳ್ಳಿನ ಜಾತ್ರೆ ಈಗ ಕೊರೊನಾ ಮೂರನೇ ಅಲೆಯ (Corona third wave) ಸೂಪರ್ ಸ್ಪ್ರೆಡರ್ ಆಗುತ್ತಿದೆ. ಕೊವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

ನಿಮ್ಮ ಸುಳ್ಳಿನಜಾತ್ರೆ ಪ್ರಹಸನದಲ್ಲಿ ಇಪ್ಪತ್ತು ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಢಾರಿಗಳು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೊವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೊನಾ ಹಬ್ಬಿಸುವುದು ನಿಮ್ಮ ಉದ್ದೇಶವೇ? ಎಂದು ರಾಜ್ಯ ಬಿಜೆಪಿ ಟ್ವೀಟ್​ ಮೂಲಕ ಪ್ರಶ್ನೆ ಮಾಡಿದೆ.

ಬೆಂಗಳೂರಿಗೆ ನೀರು ಹಂಚುವುದಕ್ಕಾಗಿ ಈ ಪಾದಯಾತ್ರೆ ಎಂದು ಸುಳ್ಳಿನಜಾತ್ರೆ ಮಾಡುತ್ತಿರುವ ಕಾಂಗ್ರೆಸ್, ವಾಸ್ತವದಲ್ಲಿ ಬೆಂಗಳೂರಿಗೆ ಕೊವಿಡ್ ರಫ್ತು ಮಾಡುತ್ತಿದೆ. ಈ ಮೂಲಕ ಕೊವಿಡ್ ಸೋಂಕಿತ ಕಾಂಗ್ರೆಸಿಗರು ಊರಿಗೆಲ್ಲ ಸೋಂಕು ಹಂಚುತ್ತಿದ್ದಾರೆ. ರಾಜ್ಯದಲ್ಲಿ ಕೊವಿಡ್ ಮೂರನೇ ಅಲೆ ಉಲ್ಬಣವಾದರೆ ಕಾಂಗ್ರೆಸ್ ತಬ್ಲಿಘಿಗಳೇ ನೇರ ಹೊಣೆ ಎಂದು ಬಿಜೆಪಿ ಟ್ವೀಟ್​ ಮೂಲಕ ತಿಳಿಸಿದೆ.

ಕಾಂಗ್ರೆಸ್‌ ಪ್ರಾಯೋಜಿತ ಸುಳ್ಳಿನ ಜಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಕೊವಿಡ್‌ ಸೋಂಕು ದೃಢಪಟ್ಟಿದೆ. ಕಾಂಗ್ರೆಸ್‌ ಬೆಂಗಳೂರಿಗೆ ನೀರು ಕೊಡುತ್ತೇವೆ ಹೇಳಿ, ಈಗ ಬೆಂಗಳೂರಿಗೆ ಕೊವಿಡ್‌ ಸೋಂಕು ಹಂಚುತ್ತಿದೆ. ಡಿಕೆಶಿ ಅವರೇ, ಕೋವಿಡ್‌ಯಾತ್ರೆ ಮುಂದುವರೆಸಿ ಬೆಂಗಳೂರನ್ನು ಕೊವಿಡ್‌ ಹಬ್‌ ಮಾಡುವ ಯೋಜನೆಯಿದೆಯೇ? ಎಂದು ರಾಜ್ಯ ಬಿಜೆಪಿ ಟ್ವೀಟ್​ ಮಾಡಿದೆ.

ಇದನ್ನೂ ಓದಿ: ಉತ್ತರ ಕನ್ನಡದ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಎಚ್ ಎಮ್ ರೇವಣ್ಣಗೆ ಕೊವಿಡ್ ಪಾಸಿಟಿವ್

Published On - 1:25 pm, Tue, 11 January 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು