AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿಗಳು ಕೊವಿಡ್ ಮೊದಲ ಅಲೆಗೆ ಕಾರಣರಾದರೆ, ಕಾಂಗ್ರೆಸ್‌ 3ನೇ ಅಲೆಗೆ ಕಾರಣವಾಗುತ್ತಿದ್ದಾರೆ: ರಾಜ್ಯ ಬಿಜೆಪಿ ಟ್ವೀಟ್

ಕೊವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

ತಬ್ಲಿಘಿಗಳು ಕೊವಿಡ್ ಮೊದಲ ಅಲೆಗೆ ಕಾರಣರಾದರೆ, ಕಾಂಗ್ರೆಸ್‌ 3ನೇ ಅಲೆಗೆ ಕಾರಣವಾಗುತ್ತಿದ್ದಾರೆ: ರಾಜ್ಯ ಬಿಜೆಪಿ ಟ್ವೀಟ್
ಬಿಜೆಪಿ (ಪ್ರಾತಿನಿಧಿಕ ಚಿತ್ರ)
TV9 Web
| Updated By: preethi shettigar|

Updated on:Jan 11, 2022 | 1:45 PM

Share

ಬೆಂಗಳೂರು: ಕಾಂಗ್ರೆಸ್ ಪಕ್ಷ (Congress) ಹಮ್ಮಿಕೊಂಡಿರುವ ಸುಳ್ಳಿನ ಜಾತ್ರೆ ಈಗ ಕೊರೊನಾ ಮೂರನೇ ಅಲೆಯ (Corona third wave) ಸೂಪರ್ ಸ್ಪ್ರೆಡರ್ ಆಗುತ್ತಿದೆ. ಕೊವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

ನಿಮ್ಮ ಸುಳ್ಳಿನಜಾತ್ರೆ ಪ್ರಹಸನದಲ್ಲಿ ಇಪ್ಪತ್ತು ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಢಾರಿಗಳು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೊವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೊನಾ ಹಬ್ಬಿಸುವುದು ನಿಮ್ಮ ಉದ್ದೇಶವೇ? ಎಂದು ರಾಜ್ಯ ಬಿಜೆಪಿ ಟ್ವೀಟ್​ ಮೂಲಕ ಪ್ರಶ್ನೆ ಮಾಡಿದೆ.

ಬೆಂಗಳೂರಿಗೆ ನೀರು ಹಂಚುವುದಕ್ಕಾಗಿ ಈ ಪಾದಯಾತ್ರೆ ಎಂದು ಸುಳ್ಳಿನಜಾತ್ರೆ ಮಾಡುತ್ತಿರುವ ಕಾಂಗ್ರೆಸ್, ವಾಸ್ತವದಲ್ಲಿ ಬೆಂಗಳೂರಿಗೆ ಕೊವಿಡ್ ರಫ್ತು ಮಾಡುತ್ತಿದೆ. ಈ ಮೂಲಕ ಕೊವಿಡ್ ಸೋಂಕಿತ ಕಾಂಗ್ರೆಸಿಗರು ಊರಿಗೆಲ್ಲ ಸೋಂಕು ಹಂಚುತ್ತಿದ್ದಾರೆ. ರಾಜ್ಯದಲ್ಲಿ ಕೊವಿಡ್ ಮೂರನೇ ಅಲೆ ಉಲ್ಬಣವಾದರೆ ಕಾಂಗ್ರೆಸ್ ತಬ್ಲಿಘಿಗಳೇ ನೇರ ಹೊಣೆ ಎಂದು ಬಿಜೆಪಿ ಟ್ವೀಟ್​ ಮೂಲಕ ತಿಳಿಸಿದೆ.

ಕಾಂಗ್ರೆಸ್‌ ಪ್ರಾಯೋಜಿತ ಸುಳ್ಳಿನ ಜಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಕೊವಿಡ್‌ ಸೋಂಕು ದೃಢಪಟ್ಟಿದೆ. ಕಾಂಗ್ರೆಸ್‌ ಬೆಂಗಳೂರಿಗೆ ನೀರು ಕೊಡುತ್ತೇವೆ ಹೇಳಿ, ಈಗ ಬೆಂಗಳೂರಿಗೆ ಕೊವಿಡ್‌ ಸೋಂಕು ಹಂಚುತ್ತಿದೆ. ಡಿಕೆಶಿ ಅವರೇ, ಕೋವಿಡ್‌ಯಾತ್ರೆ ಮುಂದುವರೆಸಿ ಬೆಂಗಳೂರನ್ನು ಕೊವಿಡ್‌ ಹಬ್‌ ಮಾಡುವ ಯೋಜನೆಯಿದೆಯೇ? ಎಂದು ರಾಜ್ಯ ಬಿಜೆಪಿ ಟ್ವೀಟ್​ ಮಾಡಿದೆ.

ಇದನ್ನೂ ಓದಿ: ಉತ್ತರ ಕನ್ನಡದ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಎಚ್ ಎಮ್ ರೇವಣ್ಣಗೆ ಕೊವಿಡ್ ಪಾಸಿಟಿವ್

Published On - 1:25 pm, Tue, 11 January 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ