AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ, ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ -ಬಿಎಸ್​ ಯಡಿಯೂರಪ್ಪ

ಮುನಿರತ್ನ ಕ್ಷೇತ್ರದಲ್ಲಿ ಸೇಡಿನ ರಾಜಕಾರಣ ನಡೆಯುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರು ಮಾಡಿ ಅರ್ಧಂಬರ್ಧ ಕೆಲಸ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ಸತ್ಯಾಗ್ರಹ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್​ನಲ್ಲಿ ಸತ್ಯಾಗ್ರಹ ಮಾಡ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದರು.

ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ, ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ -ಬಿಎಸ್​ ಯಡಿಯೂರಪ್ಪ
ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ
Follow us
ಕಿರಣ್​ ಹನಿಯಡ್ಕ
| Updated By: ಆಯೇಷಾ ಬಾನು

Updated on: Nov 09, 2023 | 1:54 PM

ಬೆಂಗಳೂರು, ನ.09: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್​ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ (BS Yediyurappa) ಅವರು ತಿಳಿಸಿದ್ದಾರೆ. ಮುನಿರತ್ನ (Munirathna) ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲೂ ಕೂಡ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಹಳೇ ಕೆಲಸಕ್ಕೂ 7ರಿಂದ 8 ಪರ್ಸೆಂಟ್​ ಕಮಿಷನ್ ಕೇಳುತ್ತಿದ್ದಾರೆ. ಈ ರೀತಿಯ ಸೇಡಿನ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಾಂಕೇತಿಕ ಸತ್ಯಾಗ್ರಹ ಮಾಡ್ತೇವೆ. ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ನಮ್ಮ ಶಾಸಕರಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಬಿ.ಎಸ್​.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಕೈಗೊಂಡಿದ್ದ ಮಾಜಿ ಸಿಎಂ ಯಡಿಯೂರಪ್ಪ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ರೌಂಡ್ಸ್ ಹಾಕಿದರು. ಆರ್​.ಆರ್.ನಗರ ಕ್ಷೇತ್ರದಲ್ಲಿ ಸ್ಥಗಿತಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಮುನಿರತ್ನ ಕ್ಷೇತ್ರದಲ್ಲಿ ಸೇಡಿನ ರಾಜಕಾರಣ ನಡೆಯುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರು ಮಾಡಿ ಅರ್ಧಂಬರ್ಧ ಕೆಲಸ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ಸತ್ಯಾಗ್ರಹ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ರಾಜ್ಯದಲ್ಲಿ ಎಲ್ಲೂ ಕೂಡಾ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಹಳೆಯ ಕೆಲಸಕ್ಕೂ 7-8 % ಕಮಿಷನ್ ಕೇಳುತ್ತಿದ್ದಾರೆ. ಈ ರೀತಿಯ ಸೇಡಿನ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ರಾಜರಾಜೇಶ್ವರಿ ನಗರದಲ್ಲಿ ಕೆಲವು ರಸ್ತೆ ನೋಡಿದಾಗ ಹಳ್ಳಿಯಲ್ಲಿದ್ದೇವೋ ಎಂಬ ಅನುಮಾನ ಬರುತ್ತದೆ. ಬೆಳಗಾವಿ ಅಧಿವೇಶನಕ್ಕೂ ಮೊದಲು ಸಾಂಕೇತಿಕ ಸತ್ಯಾಗ್ರಹ ಮಾಡುತ್ತೇವೆ. ರಾಜರಾಜೇಶ್ವರಿ ನಗರದ 126 ಕೋಟಿ ಅನುದಾನ ವಾಪಸ್ ಕೊಡಿಸಲು ಸರ್ಕಾರದ ಜೊತೆ ಮಾತಾಡಲು ಇದುವರೆಗೆ ನನಗೆ ಯಾರೂ ಸಿಕ್ಕಿಲ್ಲ. ಮಾತಾಡುತ್ತೇನೆ, ಪ್ರಯತ್ನ ಮಾಡುತ್ತೇನೆ. ಮಾಡಲಿಲ್ಲ ಅಂದರೆ ಹೋರಾಟ ಅನಿವಾರ್ಯ. ಅದನ್ನು ನಮಗೆ ಹೊಸದಾಗಿ ಹೇಳಿಕೊಡಬೇಕಾಗಿಲ್ಲ. ಗುತ್ತಿಗೆದಾರರು ಕೆಲಸ ಮಾಡಲು ರೆಡಿ ಇಲ್ಲ, ಬಿಟ್ಟು ಓಡಿ ಹೋಗುತ್ತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡಲು ನಮ್ಮ ಶಾಸಕರಿಗೆ ಹೇಳುತ್ತೇನೆ ಎಂದರು.

ಇದನ್ನೂ ಓದಿ: ಆರ್ ಆರ್ ನಗರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಯಡಿಯೂರಪ್ಪಗೆ ತೋರಿಸಿದ ಶಾಸಕ ಮುನಿರತ್ನ

ಇನ್ನು ದೀಪಾವಳಿ ಬಳಿಕ ಕಾಂಗ್ರೆಸ್ ಗೆ ಶಾಸಕರು ಹೋಗುವ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್​ವೈ, ಯಾರು ಎಲ್ಲಿ ಬೇಕಾದರೂ ಹೋಗಲಿ. ಅದರ ಬಗ್ಗ ನಾನು ಚಿಂತೆ ಮಾಡುತ್ತಿಲ್ಲ. ವಿಪಕ್ಷವಾಗಿ ಕೆಲಸ ಮಾಡುವ ಬಗ್ಗೆ ನಾನು ಯೋಚನೆ ಮಾಡುತ್ತಿದ್ದೇನೆ. ಬೇರೆ ವಿಷಯದ ಬಗ್ಗೆ ಚರ್ಚೆ ಮಾಡಲು ನಾನು ಇಷ್ಟಪಡಲ್ಲ ಎಂದರು. ಇದೇ ವೇಳೆ ಅನುದಾನ ತಡೆ ಹಿಡಿಯಲು ಅಕ್ರಮ ಕಾಮಗಾರಿಗಳು ಕಾರಣ ಎಂಬ ಡಿಸಿಎಂ ಹೇಳಿಕೆ ವಿಚಾರ ಸಂಬಂಧ ಬಿಎಸ್​ವೈ ಮಾತನಾಡಿದ್ದು, ಅಕ್ರಮ ಕಾಮಗಾರಿ ಆಗಿದ್ದರೆ ಅದನ್ನು ತನಿಖೆ ಮಾಡಿಸಿ ಕ್ರಮ ತೆಗೆದುಕೊಳ್ಳಲಿ. ಅದನ್ನು ಬಿಟ್ಟು ಎಲ್ಲಾ ಕಾಮಗಾರಿಗಳನ್ನು ತಡೆ ಹಿಡಿಯುವುದು ಎಷ್ಟು ಸರಿ? ಇದನ್ನು ನಾನು ಡಿ.ಕೆ. ಶಿವಕುಮಾರ್ ಅವರಿಗೆ ಕೇಳುತ್ತೇನೆ. ಇದು ಸೇಡಿನ ರಾಜಕಾರಣವಲ್ಲದೇ ಬೇರೆ ಅಲ್ಲ. ಈ ರೀತಿ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.

ನನಗೆ ಇನ್ನೂ ಕ್ಷೇತ್ರದ 126 ಕೋಟಿ ಅನುದಾನ ವಾಪಸ್ ನೀಡಿಲ್ಲ

ನನಗೆ ಇನ್ನೂ ಕ್ಷೇತ್ರದ 126 ಕೋಟಿ ಅನುದಾನ ವಾಪಸ್ ನೀಡಿಲ್ಲ. ಕಾಮಗಾರಿ ವೀಕ್ಷಣೆಗೆ ದಿನಾಂಕ ನಿಗದಿಗೆ ಬಿಎಸ್​ವೈ ಸೂಚಿಸಿದ್ದರು. ಅನುದಾನ ವಾಪಸ್​ ನೀಡಲು ಡಿ.ಕೆ.ಸುರೇಶ್​ಗೆ ಮನವಿ ಮಾಡ್ತೇನೆ. ವೈಯಕ್ತಿಕವಾಗಿ ಬರಲ್ಲ, ಅಭಿವೃದ್ಧಿ ವಿಚಾರದಲ್ಲಿ ಒಟ್ಟಿಗೆ ಹೋಗೋಣ. ಬಿಎಸ್​ವೈ ದ್ವೇಷದ ರಾಜಕೀಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಯಾರೂ ಶಾಶ್ವತ ಅಲ್ಲ, ಒಟ್ಟಾಗಿ ಕೆಲಸ ಮಾಡೋಣ ಅಂತಾ ಆಸೆ ಎಂದು ಬೆಂಗಳೂರಿನಲ್ಲಿ ಆರ್.ಆರ್​.ನಗರ BJP ಶಾಸಕ ಮುನಿರತ್ನ  ಹೇಳಿದರು. ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್