AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರ: ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​

ಕಾಂಗ್ರೆಸ್​ನಿಂದ ಸಿಎಂ ಅಂಕಲ್ ಅಭಿಯಾನ ಶುರು ಮಾಡಿದ್ದು, ಮಕ್ಕಳು ಸಿಎಂಗೆ ಪ್ರಶ್ನೆ ಕೇಳುವ ಮಾದರಿಯಲ್ಲೇ ಪ್ರಶ್ನೆ ಕೇಳಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರ: ಸಿಎಂ ಅಂಕಲ್​ ಅಭಿಯಾನ ಆರಂಭಿಸಿದ ಕಾಂಗ್ರೆಸ್​​
ಶಾಲೆಗಳಿಗೆ ಕೇಸರಿ ಬಣ್ಣ, ಸಿಎಂ ಬೊಮ್ಮಾಯಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 14, 2022 | 9:10 PM

Share

ಬೆಂಗಳೂರು: ಶಾಲೆಗಳಿಗೆ ಕೇಸರಿ ಬಣ್ಣ (saffron paint) ಬಳಿಯುವ ವಿಚಾರ ಸದ್ಯ ರಾಜಕೀಯ ವಲಯದಲ್ಲಿ ಭಾರಿ ವಿವಾದ ಹುಟ್ಟು ಹಾಕಿದೆ. ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೂ ಇದು ಕಾರಣವಾಗಿದೆ. ಸದ್ಯ ಇದೇ ವಿಚಾರವಾಗಿ ಕಾಂಗ್ರೆಸ್​ನಿಂದ ಸಿಎಂ ಅಂಕಲ್ ಅಭಿಯಾನ ಶುರು ಮಾಡಿದ್ದು, ಮಕ್ಕಳು ಸಿಎಂಗೆ ಪ್ರಶ್ನೆ ಕೇಳುವ ಮಾದರಿಯಲ್ಲೇ ಪ್ರಶ್ನೆ ಕೇಳಿ ಕಾಂಗ್ರೆಸ್ ಟ್ವೀಟ್ ಮಾಡಿದೆ. ರಾಜ್ಯಾದ್ಯಂತ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆ ಇದೆ. ಶೌಚಾಲಯವಿಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ ಸಿಎಂ ಅಂಕಲ್. ಕೇಸರಿ ಬಣ್ಣ ಬಳಿಯುವಿರಂತೆ, ಆದರೆ ಮೊದಲು ಶೌಚಾಲಯ ಕಟ್ಟಿಸಿಕೊಡಿ. ಕುಡಿಯಲು ಶುಚಿಯಾದ ನೀರು ಕೊಡಿ. ಶಾಲೆಗಳು ಮಕ್ಕಳನ್ನು ಆಕರ್ಷಿಸುವಂತೆ ಮಾಡಿಕೊಡಿ ಎಂದು ಟ್ವೀಟ್​ ಮೂಲಕ ಕಾಂಗ್ರೆಸ್​ ಕಾಲೆಳೆದಿದೆ.

ಕರೋನಾನಂತರದ ಶೈಕ್ಷಣಿಕ ಬಿಕ್ಕಟ್ಟುಗಳನ್ನು ಗಮನಿಸುವುದನ್ನು ಬಿಟ್ಟು ಪಠ್ಯಪುಸ್ತಕದಲ್ಲಿ ಅವಾಂತರ ಸೃಷ್ಟಿಸಿತ್ತು ಸರ್ಕಾರ. ಶಾಲೆ ಶುರುವಾಗಿ ಅರ್ಧ ವರ್ಷ ಕಳೆದರೂ ಪಠ್ಯಪುಸ್ತಕದ ಗೊಂದಲ ಬಗೆಹರಿಸಲಿಲ್ಲ, ಮಕ್ಕಳಿಗೆ ಪಠ್ಯಪುಸ್ತಕ ನೀಡಲಿಲ್ಲ ಸಿಎಂ ಅಂಕಲ್. ಮಕ್ಕಳು ಏನನ್ನ ಓದಬೇಕು, ಪರೀಕ್ಷೆಗೆ ಹೇಗೆ ಸಜ್ಜಾಗಬೇಕು? ನೀವು ಪುಸ್ತಕ ಕೊಡುವುದೆಂದು? ಬಡ ಮಕ್ಕಳ ಶಿಕ್ಷಣಕ್ಕೆ ಬಡತನ, ಹಸಿವು ಅಡ್ಡಿಯಾಗಬಾರದು ಎಂಬ ದೃಷ್ಟಿಯಲ್ಲಿ ಜಾರಿಗೆ ತಂದ ಬಿಸಿಯೂಟ ಯೋಜನೆಗೆ ಅನುದಾನ ನೀಡದೆ ಬಡ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಸರ್ಕಾರ ಎಂದು ಪ್ರಶ್ನಿಸಿದೆ.

ಒಳ್ಳೆಯ ಪಾಠವೂ ಇಲ್ಲ, ಬಿಸಿ ಊಟವೂ ಇಲ್ಲ. ಊಟ, ಪಾಠದ ಸಮಸ್ಯೆ ಬಗೆಹರಿಸಲು ಯಾವ ಕ್ರಮ ಕೈಗೊಳ್ಳುವಿರಿ ಸಿಎಂಅಂಕಲ್? ಅಪೌಷ್ಟಿಕತೆಯ ನಿವಾರಣೆಗಾಗಿ ಶಾಲೆ ಮಕ್ಕಳಿಗೆ ಮೊಟ್ಟೆ ವಿತರಣೆಯ ಯೋಜನೆಗೆ ಗ್ರಹಣ ಹಿಡಿಸಿದೆ ಸರ್ಕಾರ ಸಿಎಂಅಂಕಲ್​. ಸಮರ್ಪಕವಾಗಿ ಮೊಟ್ಟೆ ವಿತರಣೆಗೆ ಕ್ರಮ ಕೈಗೊಳ್ಳಿ, ಅನುದಾನ ಬಿಡುಗಡೆ ಮಾಡಿ, ಮೊಟ್ಟೆಯಲ್ಲೂ ಭ್ರಷ್ಟಾಚಾರಕ್ಕೆ ಅವಕಾಶ ಕೊಡಬೇಡಿ ಎಂದು ವಾಗ್ದಾಳಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:04 pm, Mon, 14 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?