AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್ ಬೇಕಾದ್ರೂ ಮಾಡಲಿ, ಪಾದಯಾತ್ರೆ ಮಾಡಿಯೇ ಮಾಡ್ತೀವಿ: ಡಿಕೆ ಶಿವಕುಮಾರ್

ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ನಾಯಕರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಅರೆಸ್ಟ್ ಬೇಕಾದ್ರೂ ಮಾಡಲಿ, ಪಾದಯಾತ್ರೆ ಮಾಡಿಯೇ ಮಾಡ್ತೀವಿ: ಡಿಕೆ ಶಿವಕುಮಾರ್
ಕಾಂಗ್ರೆಸ್ (ಪ್ರಾತಿನಿಧಿಕ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 04, 2022 | 8:59 PM

Share

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಸಭೆ ಆರಂಭವಾಗಿದ್ದು, ಮೇಕೆದಾಟು ಯೋಜನೆ ಪಾದಯಾತ್ರೆಯ ಭವಿಷ್ಯದ ಬಗ್ಗೆ ಸುದೀರ್ಘ ಚರ್ಚೆ ನಡೆಯುತ್ತಿದೆ. ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣಕೆಂದು ಹೊಸ ನಿಯಮಗಳನ್ನು ಜಾರಿ ಮಾಡಿದರೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ನಾಯಕರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಾದಯಾತ್ರೆ ಕುರಿತು ಹೇಳಿಕೆ ನೀಡಿದ್ದ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರ ಏನು ಮಾಡಿದರೂ ನಾವು ಪಾದಯಾತ್ರೆ ನಿಲ್ಲಿಸುವುದಿಲ್ಲ. ಪ್ರಕರಣ ಬೇಕಾದರೂ ದಾಖಲಿಸಲಿ, ಅರೆಸ್ಟ್ ಬೇಕಾದರೂ ಮಾಡಲಿ. ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ನಡೆಸಿಯೇ ತೀರುತ್ತೇವೆ ಎಂದು ಘೋಷಿಸಿದರು. ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡಬಹುದು, ನಾವು ನೀರಿಗಾಗಿ ಪಾದಯಾತ್ರೆ ಮಾಡಬಾರದಾ ಎಂದು ಪ್ರಶ್ನಿಸಿದರು.

ಬೆಳಗ್ಗೆಯಿಂದ ಪಾದಯಾತ್ರೆ ಕುರಿತು ಚರ್ಚೆ ಮಾಡಿದ್ದೇವೆ. 100 ವೈದ್ಯರು ಮತ್ತು 10 ಆಂಬುಲೆನ್ಸ್​ಗಳನ್ನು ಸಿದ್ಧಪಡಿಸಿಕೊಂಡಿದ್ದೇವೆ. ಸಂಪೂರ್ಣ ನಿಯಮ ಪಾಲನೆಗೆ ಮುಂದಾಗಿದ್ದೇವೆ. ರಾಜ್ಯದ ಎಲ್ಲಾ ಕಡೆಯ ಜನರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಪಾದಯಾತ್ರೆಯ ಎರಡನೇ ದಿನ ಮೈಸೂರು ಜಿಲ್ಲೆಯವರು, 5ನೇ ದಿನ ಮಂಡ್ಯ, ಹಾಸನದವರು ನಂತರ ತುಮಕೂರಿನವರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಜನವರಿ 19ರವರೆಗೆ ಈ ಪಾದಯಾತ್ರೆ ನಡೆಯಲಿದೆ. ಈವರೆಗೆ 1800 ಜನರು ಪಾದಯಾತ್ರೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ಡಿಕೆಶಿ ಕುಟುಂಬದವರು ಕುತ್ತಿಗೆ ಕೊಯ್ಯುವ ಕುತಂತ್ರ ರಾಜಕಾರಣ ಮಾಡುತ್ತಾರೆ ಎನ್ನುವ ಅಶ್ವತ್ ನಾರಾಯಣ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಉತ್ತರ ಕೊಡಲು ಮತ್ತೊಂದು ಸಮಯ ಬರುತ್ತದೆ. ಆಗ ಹೇಳ್ತೀನಿ. ಅವರೂ ನಮ್ಮ ಬ್ರದರ್ ತಾನೆ. ಅವರು ಅಶ್ವತ್ಥ ನಾರಾಯಣ ಅಣ್ಣ ಎಂದು ವ್ಯಂಗ್ಯವಾಡಿದರು. ಎಂತೆಂಥವರ ವಿರುದ್ಧ ರಾಜಕಾರಣ ಮಾಡಿದ್ದೇನೆ. ಸಮಯ ಬಂದಾಗ ಮಾತಾಡ್ತೀನಿ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಹಿರಿಯ ನಾಯಕರ ಜೊತೆ ಸಭೆ ನಡೆಯುತ್ತಿದೆ. ಮೇಕೆದಾಟು ಪಾದಯಾತ್ರೆ ಕುರಿತಂತೆ ಸುದೀರ್ಘ ಚರ್ಚೆ ನಡೆಯಿತು. ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತಾಳಿದೆ. ಮೇಕೆದಾಟು, ಮಹದಾಯಿ ಸೇರಿದಂತೆ ಹಲವು ಯೋಜನೆಗಳಲ್ಲಿ ಇದೇ ರೀತಿಯ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ. ಈ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಕೋವಿಡ್ ಸಂದರ್ಭದಲ್ಲಿಯೇ ಉತ್ತರ ಪ್ರದೇಶಗಳಲ್ಲಿ ಹಲವು ಸಮಾವೇಶಗಳು ನಡೆದಿವೆ. ಅಲ್ಲಿಗೊಂದು-ಇಲ್ಲಿಗೊಂದು ನಿಯಮ ಸರಿಯೇ ಎಂದು ಕೇಳಿದರು.

ಇದನ್ನೂ ಓದಿ: HD Kumaraswamy: ಮೇಕೆದಾಟು ಪಾದಯಾತ್ರೆ ನಾವು ಪ್ಲಾನ್‌ ಮಾಡಿದ್ದನ್ನೇ ಅವರು ಶುರು ಮಾಡಕೊಂಡ್ರು -ಹೆಚ್‌ಡಿ ಕುಮಾರಸ್ವಾಮಿ ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಪ್ರಚಾರ ವಾಹನಗಳಿಗೆ ಚಾಲನೆ ನೀಡಿದ ಡಿ ಕೆ ಶಿವಕುಮಾರ್

Published On - 8:58 pm, Tue, 4 January 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!