Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕಾಗಿ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆರೋಪ

ಧಾರವಾಡದಲ್ಲಿ ಯಾರಿಗೆ ಟಿಕೆಟ್ ಕೊಟ್ಟಿದ್ದಾರೆ? ಬೇರೆ ಕಡೆ ಯಾರಿಗೆ ಕೊಟ್ಟಿದ್ದಾರೆ ಅಂತಲೂ ನೋಡಿಕೊಳ್ಳಲಿ. ಅವರ ಪಟ್ಟಿಗೆ ಅವರೇ ಕನ್ನಡಿ ಹಿಡಿದುಕೊಳ್ಳಲಿ ಎಂದು ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.

ರಾಜಕೀಯಕ್ಕಾಗಿ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆರೋಪ
ಡಿಕೆ ಶಿವಕುಮಾರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 23, 2021 | 10:25 PM

ಬೆಂಗಳೂರು: ಮಳೆ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಭೇಟಿ ಒಂದು ರಾಜಕೀಯ ಎಂದು ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು. ಕಳೆದ ಬಾರಿಯ ಹಾನಿಗೆ ಈವರೆಗೂ ಪರಿಹಾರ ನೀಡಿಲ್ಲ. ಕೊರೊನಾಗೆ ಬಲಿಯಾದವರ ಕುಟುಂಬಕ್ಕೂ ಪರಿಹಾರ ಕೊಟ್ಟಿಲ್ಲ. ಮೊದಲು ಆ ಬಗ್ಗೆ ದಾಖಲೆ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಕುಟುಂಬ ರಾಜಕೀಯಕ್ಕೆ ಮಣೆ ಹಾಕಿದ ಎಂಬ ಬಿಜೆಪಿ ನಾಯಕರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರ, ನಮ್ಮ ಬಗ್ಗೆ ಆರೋಪ ಮಾಡುವ ಮೊದಲು ಬಿಜೆಪಿ ಸದಸ್ಯರನ್ನು ನೋಡಲಿ. ಧಾರವಾಡದಲ್ಲಿ ಯಾರಿಗೆ ಟಿಕೆಟ್ ಕೊಟ್ಟಿದ್ದಾರೆ? ಬೇರೆ ಕಡೆ ಯಾರಿಗೆ ಕೊಟ್ಟಿದ್ದಾರೆ ಅಂತಲೂ ನೋಡಿಕೊಳ್ಳಲಿ. ಅವರ ಪಟ್ಟಿಗೆ ಅವರೇ ಕನ್ನಡಿ ಹಿಡಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಷ ಮೊದಲಿನಿಂದ ಈ ಸೀಟ್ ಗೆದ್ದುಕೊಂಡು ಬಂದಿದೆ. ಈಗಲೂ ಈ ಕ್ಷೇತ್ರ ಗೆದ್ದುಕೊಳ್ಳುತ್ತೇವೆ. ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಗ್ರಾಮ ಪಂಚಾಯತಿ ಸದಸ್ಯರು ಮಾತ್ರ ಮತ ಹಾಕುತ್ತಾರೆ. ಕೆಲವು ಕಾರ್ಯಕರ್ತರು ಕೂಡ ನಾಮಿನೇಶನ್ ಹಾಕಿದ್ದಾರೆ. ಕಾನೂನು ಸಲಹೆ ಪಡೆದು ಅವರನ್ನು ವಾಪಸ್ಸು ತೆಗೆಸುವ ಕೆಲಸ ಮಾಡುತ್ತೇನೆ ಎಂದರು.

ಬೆಳಗಾವಿಯಲ್ಲಿ ಬಿಜೆಪಿ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಒಬ್ಬ ಅಭ್ಯರ್ಥಿಯನ್ನು ಬೆಳಗಾವಿಯಲ್ಲಿ ನಿಲ್ಲಿಸಿದ್ದೇವೆ. ಬಿಜೆಪಿಯವರು ಎಷ್ಟು ಮಂದಿಯನ್ನು ಬೇಕಾದರೂ ಹಾಕಲಿ. ಇಬ್ಬರಾದರೂ ಸರಿ, ನಾಲ್ವರಾದರೂ ಸರಿ. ಅದಕ್ಕೂ ನಮಗೂ ಸಂಬಂಧವಿಲ್ಲ. ವಿವೇಕ್ ರಾವ್ ಪಾಟೀಲ್ ಕಾಂಗ್ರೆಸ್​ನಲ್ಲಿ ಇರಲಿಲ್ಲ. ಕಾಂಗ್ರೆಸ್​ನಲ್ಲಿ ಅರ್ಜಿ ಹಾಕಿದ್ರು. ಕಾಂಗ್ರೆಸ್ ಸದಸ್ಯ ಆಗ್ತೇನೆ ಅಂತ ಬಂದಿದ್ರು. ಮೊದಲಿನಿಂದ ಪಾಟೀಲ್ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ನಾಯಕ ಯಡಿಯೂರಪ್ಪ ಹೇಳಿಕೆಗಳನ್ನು ಗಮನಿಸಿದ್ದೇನೆ. ಬಿಜೆಪಿಯು ಅಶಿಸ್ತಿಗೆ ಗೌರವ ಕೊಡುತ್ತದೆ ಅಂದರೆ ಕೊಟ್ಟುಕೊಳ್ಳಲಿ. ನಮ್ಮ ‌ಪಕ್ಷದಿಂದ ಒಬ್ಬ ಅಭ್ಯರ್ಥಿ ಮಾತ್ರವೇ ಇರುತ್ತಾರೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಯಾವ ಬಣ ರಾಜಕೀಯವೂ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ ಇದನ್ನೂ ಓದಿ: ಮಳೆಯಿಂದ ಹಾನಿ: 24 ಗಂಟೆಯಲ್ಲೇ ರೈತರಿಗೆ ಪರಿಹಾರ ನೀಡಲು ಬಸವರಾಜ ಬೊಮ್ಮಾಯಿ ಸೂಚನೆ

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್