AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಲಿಕಾನ್ ಸಿಟಿ’ಯನ್ನು ಬಿಜೆಪಿ ‘ಸಿಂಕಿಂಗ್ ಸಿಟಿ’ ಮಾಡಿದೆ: ಜಲಾವೃತಗೊಂಡ ರಸ್ತೆಯಲ್ಲಿ ರಬ್ಬರ್ ಟ್ಯೂಬ್ ಮೇಲೆ ಕೂತು ಪ್ರತಿಭಟನೆ ಮಾಡಿದ ನಲಪಾಡ್

ಸಿಲಿಕಾನ್ ಸಿಟಿ'ಯನ್ನು ಬಿಜೆಪಿ 'ಸಿಂಕಿಂಗ್ ಸಿಟಿ' ಮಾಡಿದೆ. ತೊಲಗಲಿ ತೊಲಗಲಿ, ಬಿಜೆಪಿ ತೊಲಗಲಿ ಎಂದು ಘೋಷಣೆ ಕೂಗುತ್ತ ಪ್ಲಾಸ್ಟಿಕ್ ಟ್ಯೂಬ್ ಮೇಲೆ ಕುಳಿತು ಮೊಹಮ್ಮದ್ ನಲಪಾಡ್‌ ಪ್ರತಿಭಟನೆ ನಡೆದಿದ್ದಾರೆ.

'ಸಿಲಿಕಾನ್ ಸಿಟಿ'ಯನ್ನು ಬಿಜೆಪಿ 'ಸಿಂಕಿಂಗ್ ಸಿಟಿ' ಮಾಡಿದೆ: ಜಲಾವೃತಗೊಂಡ ರಸ್ತೆಯಲ್ಲಿ ರಬ್ಬರ್ ಟ್ಯೂಬ್ ಮೇಲೆ ಕೂತು ಪ್ರತಿಭಟನೆ ಮಾಡಿದ ನಲಪಾಡ್
ರಬ್ಬರ್ ಟ್ಯೂಬ್ ಮೇಲೆ ಕೂತು ಪ್ರತಿಭಟನೆ ಮಾಡಿದ ನಲಪಾಡ್
TV9 Web
| Updated By: ಆಯೇಷಾ ಬಾನು|

Updated on: Sep 06, 2022 | 10:42 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಳೆ ನೀರಿನ ದ್ವೀಪವಾಗಿದೆ(Bengaluru Rain). ನಗರದಲ್ಲಿ ಮಳೆಗೆ ಮನೆಗಳು, ವಾಹನಗಳು ರಸ್ತೆಗಳೆಲ್ಲ ಮುಳುಗಿ ಜನ ಜೀವನವೇ ಅಸ್ತವ್ಯಸ್ತವಾಗಿದೆ. ಮಳೆರಾಯನಿಂದ ಸಿಲಿಕಾನ್ ಸಿಟಿ ಜನ ನಿತ್ಯ ಸಂಕಷ್ಟಗಳನ್ನು ಎದುರಿಸುವಂತಾಗಿದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಜಲಾವೃತಗೊಂಡ ರಸ್ತೆಯಲ್ಲಿ ಗಾಳಿ ತುಂಬಿದ ರಬ್ಬರ್ ಟ್ಯೂಬ್ ಮೇಲೆ ಕೂತು ಸಂಚರಿಸುವ ಮೂಲಕ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್(Mohammad Nalpad) ಪ್ರತಿಭಟನೆ ನಡೆಸಿದರು.

‘ಸಿಲಿಕಾನ್ ಸಿಟಿ’ಯನ್ನು ಬಿಜೆಪಿ ‘ಸಿಂಕಿಂಗ್ ಸಿಟಿ’ ಮಾಡಿದೆ. ತೊಲಗಲಿ ತೊಲಗಲಿ, ಬಿಜೆಪಿ ತೊಲಗಲಿ ಎಂದು ಘೋಷಣೆ ಕೂಗುತ್ತ ಪ್ಲಾಸ್ಟಿಕ್ ಟ್ಯೂಬ್ ಮೇಲೆ ಕುಳಿತು ಮೊಹಮ್ಮದ್ ನಲಪಾಡ್‌ ಪ್ರತಿಭಟನೆ ನಡೆದಿದ್ದಾರೆ. ನಲಪಾಡ್ಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಾಥ್ ನೀಡಿದರು. ಇದೇ ವೇಳೆ ಪೊಲೀಸರು ನಲಪಾಡ್ ನನ್ನು ವಶಕ್ಕೆ ಪಡೆದು ನಂತರ ಅವರನ್ನು ಬಿಡುಗಡೆ ಮಾಡಿದ್ದಾರೆ. ನಲಪಾಡ್ ರಸ್ತೆಯಲ್ಲಿ ನಡೆಸಿದ ವಿಭಿನ್ನ ಪ್ರತಿಭಟನೆ ದೃಶ್ಯಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮಳೆ ನೀರಲ್ಲಿ ತೇಲಿದ ಐಷಾರಾಮಿ ಕಾರುಗಳು

ಬೆಂಗಳೂರು ಪ್ರವಾಹ ಪ್ರದೇಶದಂತಾಗಿದೆ. ಮನುಷ್ಯ ಮುಳುಗುವಂತೆ ಎದೆ ಎತ್ತರದಷ್ಟು ನೀರು ಆವರಿಸಿದೆ. ಐಷಾರಾಮಿ ಕಾರುಗಳು ನೀರಿನಲ್ಲಿ ಮುಳುಗಿವೆ. ಸದ್ಯ ಈಗ ಬಹುಕೋಟಿ ಬೆಲೆ ಬಾಳುವ ಬೆಂಟ್ಲಿ ಮತ್ತು ಲೆಕ್ಸಸ್ ಸೇರಿದಂತೆ ಐಷಾರಾಮಿ ಕಾರುಗಳು ಮುಳುಗಿರುವ ವಿಡಿಯೋ ವೈರಲ್ ಆಗಿದೆ. ಲೆಕ್ಸಸ್ NX SUV ಮತ್ತು ಲೆಕ್ಸಸ್ ಸೆಡಾನ್, ಬೆಂಟ್ಲಿ ಬೆಂಟೈಗಾ, ಆಡಿ ಕ್ಯೂ5 ಮತ್ತು ಲ್ಯಾಂಡ್ ರೋವರ್, ವಿಡಬ್ಲ್ಯೂ ಪೊಲೊ ಮತ್ತು ಹೋಂಡಾ ಸಿವಿಕ್ ಸೇರಿದಂತೆ ಅನೇಕ ಕಾರುಗಳು ಮುಳುಗಿವೆ.

ಮಳೆಗೆ ನಗರದ ಬೆಳ್ಳಂದೂರು, ವೈಟ್ ಫೀಲ್ಡ್, ಹೊರ ವರ್ತುಲ ರಸ್ತೆ, ಬಿಇಎಂಎಲ್ ಲೇಔಟ್, ಸರ್ಜಾಪುರ ರಸ್ತೆಗಳಲ್ಲಿ ಹೆಚ್ಚಿನ ಹಾನಿಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದಲ್ಲಿ ಸೆಪ್ಟೆಂಬರ್ 9 ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!