Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ

ಬಿಟ್​ಕಾಯಿನ್​ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದರೆ, ‘ಹಿಟ್​ ರನ್ ಕೇಸ್ ಆಗಬಾರದು. ಸ್ಪಷ್ಟವಾಗಿ ಮಾತನಾಡಬೇಕು’ ಎಂದು ಸಚಿವ ವಿ.ಸೋಮಣ್ಣ ತಾಕೀತು ಮಾಡಿದ್ದಾರೆ.

ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತು ವಸತಿ ಸಚಿವ ವಿ.ಸೋಮಣ್ಣ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 02, 2021 | 4:51 PM

ಬೆಂಗಳೂರು: ಕರ್ನಾಟಕದಲ್ಲಿ ಪ್ರಭಾವಿಗಳು ಶಾಮೀಲಾಗಿದ್ದಾರೆ ಎನ್ನಲಾದ ಬಿಟ್​ಕಾಯಿನ್ ದಂಧೆಯ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಸಚಿವ ವಿ.ಸೋಮಣ್ಣ ನಡುವೆ ಹಗ್ಗಜಗ್ಗಾಟ ನಡೆದಿದೆ. ‘ಬಿಟ್​ಕಾಯಿನ್​ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದರೆ, ‘ಹಿಟ್​ ರನ್ ಕೇಸ್ ಆಗಬಾರದು. ಸ್ಪಷ್ಟವಾಗಿ ಮಾತನಾಡಬೇಕು’ ಎಂದು ಸಚಿವ ವಿ.ಸೋಮಣ್ಣ ತಾಕೀತು ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಬಿಟ್‌ಕಾಯಿನ್ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ. ಪ್ರಭಾವಿಗಳಿರುವ ಮಾಹಿತಿ ಇರುವುದರಿಂದ ಹೇಳುತ್ತಿದ್ದೇನೆ. ದಂಧೆಯಲ್ಲಿ ಪ್ರಭಾವಿಗಳು ಇದ್ದರೆ ಕಂಟಕವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಈ ದಂಧೆಯಲ್ಲಿ ರಾಜಕಾರಣಿಗಳಿರುವುದು ಮಾತ್ರ ಸತ್ಯ. ಅದರಲ್ಲಿ ಯಾವ ಪಕ್ಷದವರಿದ್ದಾರೆಂದು ನನಗೆ ಗೊತ್ತಿಲ್ಲ. ಬಿಜೆಪಿಯವರಿದ್ದಾರಾ, ಕಾಂಗ್ರೆಸ್‌ನವರು ಇದ್ದಾರಾ, ಬೇರೆ ಯಾರಿದ್ದಾರೆ ಎಂಬ ಮಾಹಿತಿ ನನಗಿಲ್ಲ. ಆ ರಾಜಕಾರಣಿಗಳು ಯಾರು ಎಂದು ಪತ್ತೆ ಹಚ್ಚಬೇಕಾಗಿದೆ. ಸತ್ಯ ಬಯಲಾಗದಿದ್ದರೆ ಅವರಿಗೆ ರಕ್ಷಣೆ ಕೊಟ್ಟಂತಲ್ಲವೇ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ವಸತಿ ಸಚಿವ ವಿ.ಸೋಮಣ್ಣ, ಬಿಟ್ ಅಂದ್ರೆ ಏನು ಅಂತ ಆ ಪುಣ್ಯಾತ್ಮರಿಗೆ ಕೇಳಿ ನೋಡಿ. ಬೀಟ್ ಅಂದ್ರೆ ಪೊಲೀಸ್ ಬೀಟ್ ಅಂದುಕೊಂಡಿದ್ದೆ ನಾನು. ಸಿದ್ದರಾಮಯ್ಯನವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಏನು ಬೇಕಾದರೂ ಹೇಳಿಕೆ ಕೊಡಲಿ, ಹಿಟ್ ಅಂಡ್ ರನ್ ಬೇಡ. ಸಿದ್ದರಾಮಯ್ಯ ಮಂತ್ರಿ ಆಗಿದ್ದರು, ನಾನೂ ಮಂತ್ರಿಯಾಗಿದ್ದೆ. ಅದೃಷ್ಟದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಯಾರು ಏನೇ ಮಾತಾಡಲಿ, ಸ್ವಲ್ಪ ಯೋಚಿಸಿ ಮಾತಾಡಲಿ ಎಂದು ಹೇಳಿದರು.

ಇದನ್ನೂ ಓದಿ: ಬಿಟ್​ ಕಾಯಿನ್​ Bitcoin ಎಂದರೇನು? ಭಾರತಕ್ಕೆ ಬರುತ್ತಾ ಡಿಜಿಟಲ್​ ಕರೆನ್ಸಿ? ಇದನ್ನೂ ಓದಿ: ಎಸ್.ಆರ್.ಶ್ರೀನಿವಾಸ್​ ಕಾಂಗ್ರೆಸ್​ಗೆ ಬಂದ್ರೆ ಗುಬ್ಬಿ ಕ್ಷೇತ್ರಕ್ಕೆ ಅವರೇ ಅಭ್ಯರ್ಥಿ: ಸಿದ್ದರಾಮಯ್ಯ ಘೋಷಣೆ

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್