AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ

ಬಿಟ್​ಕಾಯಿನ್​ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದರೆ, ‘ಹಿಟ್​ ರನ್ ಕೇಸ್ ಆಗಬಾರದು. ಸ್ಪಷ್ಟವಾಗಿ ಮಾತನಾಡಬೇಕು’ ಎಂದು ಸಚಿವ ವಿ.ಸೋಮಣ್ಣ ತಾಕೀತು ಮಾಡಿದ್ದಾರೆ.

ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತು ವಸತಿ ಸಚಿವ ವಿ.ಸೋಮಣ್ಣ
TV9 Web
| Edited By: |

Updated on: Nov 02, 2021 | 4:51 PM

Share

ಬೆಂಗಳೂರು: ಕರ್ನಾಟಕದಲ್ಲಿ ಪ್ರಭಾವಿಗಳು ಶಾಮೀಲಾಗಿದ್ದಾರೆ ಎನ್ನಲಾದ ಬಿಟ್​ಕಾಯಿನ್ ದಂಧೆಯ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಸಚಿವ ವಿ.ಸೋಮಣ್ಣ ನಡುವೆ ಹಗ್ಗಜಗ್ಗಾಟ ನಡೆದಿದೆ. ‘ಬಿಟ್​ಕಾಯಿನ್​ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದರೆ, ‘ಹಿಟ್​ ರನ್ ಕೇಸ್ ಆಗಬಾರದು. ಸ್ಪಷ್ಟವಾಗಿ ಮಾತನಾಡಬೇಕು’ ಎಂದು ಸಚಿವ ವಿ.ಸೋಮಣ್ಣ ತಾಕೀತು ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಬಿಟ್‌ಕಾಯಿನ್ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ. ಪ್ರಭಾವಿಗಳಿರುವ ಮಾಹಿತಿ ಇರುವುದರಿಂದ ಹೇಳುತ್ತಿದ್ದೇನೆ. ದಂಧೆಯಲ್ಲಿ ಪ್ರಭಾವಿಗಳು ಇದ್ದರೆ ಕಂಟಕವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಈ ದಂಧೆಯಲ್ಲಿ ರಾಜಕಾರಣಿಗಳಿರುವುದು ಮಾತ್ರ ಸತ್ಯ. ಅದರಲ್ಲಿ ಯಾವ ಪಕ್ಷದವರಿದ್ದಾರೆಂದು ನನಗೆ ಗೊತ್ತಿಲ್ಲ. ಬಿಜೆಪಿಯವರಿದ್ದಾರಾ, ಕಾಂಗ್ರೆಸ್‌ನವರು ಇದ್ದಾರಾ, ಬೇರೆ ಯಾರಿದ್ದಾರೆ ಎಂಬ ಮಾಹಿತಿ ನನಗಿಲ್ಲ. ಆ ರಾಜಕಾರಣಿಗಳು ಯಾರು ಎಂದು ಪತ್ತೆ ಹಚ್ಚಬೇಕಾಗಿದೆ. ಸತ್ಯ ಬಯಲಾಗದಿದ್ದರೆ ಅವರಿಗೆ ರಕ್ಷಣೆ ಕೊಟ್ಟಂತಲ್ಲವೇ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ವಸತಿ ಸಚಿವ ವಿ.ಸೋಮಣ್ಣ, ಬಿಟ್ ಅಂದ್ರೆ ಏನು ಅಂತ ಆ ಪುಣ್ಯಾತ್ಮರಿಗೆ ಕೇಳಿ ನೋಡಿ. ಬೀಟ್ ಅಂದ್ರೆ ಪೊಲೀಸ್ ಬೀಟ್ ಅಂದುಕೊಂಡಿದ್ದೆ ನಾನು. ಸಿದ್ದರಾಮಯ್ಯನವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಏನು ಬೇಕಾದರೂ ಹೇಳಿಕೆ ಕೊಡಲಿ, ಹಿಟ್ ಅಂಡ್ ರನ್ ಬೇಡ. ಸಿದ್ದರಾಮಯ್ಯ ಮಂತ್ರಿ ಆಗಿದ್ದರು, ನಾನೂ ಮಂತ್ರಿಯಾಗಿದ್ದೆ. ಅದೃಷ್ಟದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಯಾರು ಏನೇ ಮಾತಾಡಲಿ, ಸ್ವಲ್ಪ ಯೋಚಿಸಿ ಮಾತಾಡಲಿ ಎಂದು ಹೇಳಿದರು.

ಇದನ್ನೂ ಓದಿ: ಬಿಟ್​ ಕಾಯಿನ್​ Bitcoin ಎಂದರೇನು? ಭಾರತಕ್ಕೆ ಬರುತ್ತಾ ಡಿಜಿಟಲ್​ ಕರೆನ್ಸಿ? ಇದನ್ನೂ ಓದಿ: ಎಸ್.ಆರ್.ಶ್ರೀನಿವಾಸ್​ ಕಾಂಗ್ರೆಸ್​ಗೆ ಬಂದ್ರೆ ಗುಬ್ಬಿ ಕ್ಷೇತ್ರಕ್ಕೆ ಅವರೇ ಅಭ್ಯರ್ಥಿ: ಸಿದ್ದರಾಮಯ್ಯ ಘೋಷಣೆ

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ