AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ

ಬಿಟ್​ಕಾಯಿನ್​ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದರೆ, ‘ಹಿಟ್​ ರನ್ ಕೇಸ್ ಆಗಬಾರದು. ಸ್ಪಷ್ಟವಾಗಿ ಮಾತನಾಡಬೇಕು’ ಎಂದು ಸಚಿವ ವಿ.ಸೋಮಣ್ಣ ತಾಕೀತು ಮಾಡಿದ್ದಾರೆ.

ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತು ವಸತಿ ಸಚಿವ ವಿ.ಸೋಮಣ್ಣ
TV9 Web
| Edited By: |

Updated on: Nov 02, 2021 | 4:51 PM

Share

ಬೆಂಗಳೂರು: ಕರ್ನಾಟಕದಲ್ಲಿ ಪ್ರಭಾವಿಗಳು ಶಾಮೀಲಾಗಿದ್ದಾರೆ ಎನ್ನಲಾದ ಬಿಟ್​ಕಾಯಿನ್ ದಂಧೆಯ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಸಚಿವ ವಿ.ಸೋಮಣ್ಣ ನಡುವೆ ಹಗ್ಗಜಗ್ಗಾಟ ನಡೆದಿದೆ. ‘ಬಿಟ್​ಕಾಯಿನ್​ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದರೆ, ‘ಹಿಟ್​ ರನ್ ಕೇಸ್ ಆಗಬಾರದು. ಸ್ಪಷ್ಟವಾಗಿ ಮಾತನಾಡಬೇಕು’ ಎಂದು ಸಚಿವ ವಿ.ಸೋಮಣ್ಣ ತಾಕೀತು ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಬಿಟ್‌ಕಾಯಿನ್ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ. ಪ್ರಭಾವಿಗಳಿರುವ ಮಾಹಿತಿ ಇರುವುದರಿಂದ ಹೇಳುತ್ತಿದ್ದೇನೆ. ದಂಧೆಯಲ್ಲಿ ಪ್ರಭಾವಿಗಳು ಇದ್ದರೆ ಕಂಟಕವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಈ ದಂಧೆಯಲ್ಲಿ ರಾಜಕಾರಣಿಗಳಿರುವುದು ಮಾತ್ರ ಸತ್ಯ. ಅದರಲ್ಲಿ ಯಾವ ಪಕ್ಷದವರಿದ್ದಾರೆಂದು ನನಗೆ ಗೊತ್ತಿಲ್ಲ. ಬಿಜೆಪಿಯವರಿದ್ದಾರಾ, ಕಾಂಗ್ರೆಸ್‌ನವರು ಇದ್ದಾರಾ, ಬೇರೆ ಯಾರಿದ್ದಾರೆ ಎಂಬ ಮಾಹಿತಿ ನನಗಿಲ್ಲ. ಆ ರಾಜಕಾರಣಿಗಳು ಯಾರು ಎಂದು ಪತ್ತೆ ಹಚ್ಚಬೇಕಾಗಿದೆ. ಸತ್ಯ ಬಯಲಾಗದಿದ್ದರೆ ಅವರಿಗೆ ರಕ್ಷಣೆ ಕೊಟ್ಟಂತಲ್ಲವೇ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ವಸತಿ ಸಚಿವ ವಿ.ಸೋಮಣ್ಣ, ಬಿಟ್ ಅಂದ್ರೆ ಏನು ಅಂತ ಆ ಪುಣ್ಯಾತ್ಮರಿಗೆ ಕೇಳಿ ನೋಡಿ. ಬೀಟ್ ಅಂದ್ರೆ ಪೊಲೀಸ್ ಬೀಟ್ ಅಂದುಕೊಂಡಿದ್ದೆ ನಾನು. ಸಿದ್ದರಾಮಯ್ಯನವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಏನು ಬೇಕಾದರೂ ಹೇಳಿಕೆ ಕೊಡಲಿ, ಹಿಟ್ ಅಂಡ್ ರನ್ ಬೇಡ. ಸಿದ್ದರಾಮಯ್ಯ ಮಂತ್ರಿ ಆಗಿದ್ದರು, ನಾನೂ ಮಂತ್ರಿಯಾಗಿದ್ದೆ. ಅದೃಷ್ಟದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಯಾರು ಏನೇ ಮಾತಾಡಲಿ, ಸ್ವಲ್ಪ ಯೋಚಿಸಿ ಮಾತಾಡಲಿ ಎಂದು ಹೇಳಿದರು.

ಇದನ್ನೂ ಓದಿ: ಬಿಟ್​ ಕಾಯಿನ್​ Bitcoin ಎಂದರೇನು? ಭಾರತಕ್ಕೆ ಬರುತ್ತಾ ಡಿಜಿಟಲ್​ ಕರೆನ್ಸಿ? ಇದನ್ನೂ ಓದಿ: ಎಸ್.ಆರ್.ಶ್ರೀನಿವಾಸ್​ ಕಾಂಗ್ರೆಸ್​ಗೆ ಬಂದ್ರೆ ಗುಬ್ಬಿ ಕ್ಷೇತ್ರಕ್ಕೆ ಅವರೇ ಅಭ್ಯರ್ಥಿ: ಸಿದ್ದರಾಮಯ್ಯ ಘೋಷಣೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!