AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ

ಬಿಟ್​ಕಾಯಿನ್​ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದರೆ, ‘ಹಿಟ್​ ರನ್ ಕೇಸ್ ಆಗಬಾರದು. ಸ್ಪಷ್ಟವಾಗಿ ಮಾತನಾಡಬೇಕು’ ಎಂದು ಸಚಿವ ವಿ.ಸೋಮಣ್ಣ ತಾಕೀತು ಮಾಡಿದ್ದಾರೆ.

ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತು ವಸತಿ ಸಚಿವ ವಿ.ಸೋಮಣ್ಣ
TV9 Web
| Edited By: |

Updated on: Nov 02, 2021 | 4:51 PM

Share

ಬೆಂಗಳೂರು: ಕರ್ನಾಟಕದಲ್ಲಿ ಪ್ರಭಾವಿಗಳು ಶಾಮೀಲಾಗಿದ್ದಾರೆ ಎನ್ನಲಾದ ಬಿಟ್​ಕಾಯಿನ್ ದಂಧೆಯ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಸಚಿವ ವಿ.ಸೋಮಣ್ಣ ನಡುವೆ ಹಗ್ಗಜಗ್ಗಾಟ ನಡೆದಿದೆ. ‘ಬಿಟ್​ಕಾಯಿನ್​ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದರೆ, ‘ಹಿಟ್​ ರನ್ ಕೇಸ್ ಆಗಬಾರದು. ಸ್ಪಷ್ಟವಾಗಿ ಮಾತನಾಡಬೇಕು’ ಎಂದು ಸಚಿವ ವಿ.ಸೋಮಣ್ಣ ತಾಕೀತು ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಬಿಟ್‌ಕಾಯಿನ್ ದಂಧೆಯಲ್ಲಿ ಇಬ್ಬರು ಪ್ರಭಾವಿಗಳಿದ್ದಾರೆ. ಪ್ರಭಾವಿಗಳಿರುವ ಮಾಹಿತಿ ಇರುವುದರಿಂದ ಹೇಳುತ್ತಿದ್ದೇನೆ. ದಂಧೆಯಲ್ಲಿ ಪ್ರಭಾವಿಗಳು ಇದ್ದರೆ ಕಂಟಕವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಈ ದಂಧೆಯಲ್ಲಿ ರಾಜಕಾರಣಿಗಳಿರುವುದು ಮಾತ್ರ ಸತ್ಯ. ಅದರಲ್ಲಿ ಯಾವ ಪಕ್ಷದವರಿದ್ದಾರೆಂದು ನನಗೆ ಗೊತ್ತಿಲ್ಲ. ಬಿಜೆಪಿಯವರಿದ್ದಾರಾ, ಕಾಂಗ್ರೆಸ್‌ನವರು ಇದ್ದಾರಾ, ಬೇರೆ ಯಾರಿದ್ದಾರೆ ಎಂಬ ಮಾಹಿತಿ ನನಗಿಲ್ಲ. ಆ ರಾಜಕಾರಣಿಗಳು ಯಾರು ಎಂದು ಪತ್ತೆ ಹಚ್ಚಬೇಕಾಗಿದೆ. ಸತ್ಯ ಬಯಲಾಗದಿದ್ದರೆ ಅವರಿಗೆ ರಕ್ಷಣೆ ಕೊಟ್ಟಂತಲ್ಲವೇ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ವಸತಿ ಸಚಿವ ವಿ.ಸೋಮಣ್ಣ, ಬಿಟ್ ಅಂದ್ರೆ ಏನು ಅಂತ ಆ ಪುಣ್ಯಾತ್ಮರಿಗೆ ಕೇಳಿ ನೋಡಿ. ಬೀಟ್ ಅಂದ್ರೆ ಪೊಲೀಸ್ ಬೀಟ್ ಅಂದುಕೊಂಡಿದ್ದೆ ನಾನು. ಸಿದ್ದರಾಮಯ್ಯನವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಏನು ಬೇಕಾದರೂ ಹೇಳಿಕೆ ಕೊಡಲಿ, ಹಿಟ್ ಅಂಡ್ ರನ್ ಬೇಡ. ಸಿದ್ದರಾಮಯ್ಯ ಮಂತ್ರಿ ಆಗಿದ್ದರು, ನಾನೂ ಮಂತ್ರಿಯಾಗಿದ್ದೆ. ಅದೃಷ್ಟದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಯಾರು ಏನೇ ಮಾತಾಡಲಿ, ಸ್ವಲ್ಪ ಯೋಚಿಸಿ ಮಾತಾಡಲಿ ಎಂದು ಹೇಳಿದರು.

ಇದನ್ನೂ ಓದಿ: ಬಿಟ್​ ಕಾಯಿನ್​ Bitcoin ಎಂದರೇನು? ಭಾರತಕ್ಕೆ ಬರುತ್ತಾ ಡಿಜಿಟಲ್​ ಕರೆನ್ಸಿ? ಇದನ್ನೂ ಓದಿ: ಎಸ್.ಆರ್.ಶ್ರೀನಿವಾಸ್​ ಕಾಂಗ್ರೆಸ್​ಗೆ ಬಂದ್ರೆ ಗುಬ್ಬಿ ಕ್ಷೇತ್ರಕ್ಕೆ ಅವರೇ ಅಭ್ಯರ್ಥಿ: ಸಿದ್ದರಾಮಯ್ಯ ಘೋಷಣೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್