AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ರಾಹಿಂ ವಿರುದ್ಧ ಹರಿಹಾಯ್ದ ಉಗ್ರಪ್ಪ: ವಕ್ಫ್​ ಬೋರ್ಡ್​ ಆಸ್ತಿ ಕಬಳಿಕೆ ಆರೋಪ

ವಕ್ಫ್​ ಬೋರ್ಡ್​ಗೆ ಸೇರಿದ ಆಸ್ತಿ ಕಬಳಿಸಿದ್ದೀರಿ ಎಂದು ದೂರಿರುವ ಉಗ್ರಪ್ಪ ಸಾರ್ವಜನಿಕ ಚರ್ಚೆಗೆ ಬರುವಂತೆ ಇಬ್ರಾಹಿಂ ಅವರಿಗೆ ಸವಾಲು ಹಾಕಿದ್ದಾರೆ.

ಇಬ್ರಾಹಿಂ ವಿರುದ್ಧ ಹರಿಹಾಯ್ದ ಉಗ್ರಪ್ಪ: ವಕ್ಫ್​ ಬೋರ್ಡ್​ ಆಸ್ತಿ ಕಬಳಿಕೆ ಆರೋಪ
ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ
TV9 Web
| Edited By: |

Updated on: Feb 14, 2022 | 11:39 PM

Share

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ವಿರೋಧ ಪಕ್ಷ ನಾಯಕನ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿರುವ ಸಿ.ಎಂ.ಇಬ್ರಾಹಿಂ ವಿರುದ್ಧ ಕಾಂಗ್ರೆಸ್​ ನಾಯಕ ವಿ.ಎಸ್.ಉಗ್ರಪ್ಪ ಹರಿಹಾಯ್ದಿದ್ದಾರೆ. ನಿಷ್ಠೆ ಮತ್ತು ಪ್ರಾಮಾಣಿಕತೆ ನಿಮಗೆ ಇಲ್ಲ. ಜನ್ಮ ಕೊಟ್ಟ ಧರ್ಮ, ಜನಾಂಗಕ್ಕೂ ನಿಮ್ಮಿಂದ ಮೋಸ ಆಗಿದೆ. ವಕ್ಫ್​ ಬೋರ್ಡ್​ಗೆ ಸೇರಿದ ಆಸ್ತಿ ಕಬಳಿಸಿದ್ದೀರಿ ಎಂದು ದೂರಿರುವ ಅವರು ಸಾರ್ವಜನಿಕ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. ಇಬ್ರಾಹಿಂಗೆ ಎರಡು ನಾಲಗೆ ಇದೆ. ಯಾವಾಗಲೂ ದ್ವಂದ್ವ ನಿಲುವು ಹೊಂದಿರುವ ಮನುಷ್ಯ. ಬೆಳಿಗ್ಗೆ ಯಡಿಯೂರಪ್ಪ, ಮಧ್ಯಾಹ್ನ ದೇವೇಗೌಡ, ರಾತ್ರಿ ಡಿ.ಕೆ.ಶಿವಕುಮಾರ್ ಎಂದು ತಿರುಗುತ್ತಾರೆ. ಇಬ್ರಾಹಿಂ ಒಬ್ಬ ದೊಡ್ಡ ಬ್ಲ್ಯಾಕ್​ಮೇಲ್ ರಾಜಕಾರಣಿ. ಸಂದರ್ಭ ಬಂದರೆ ಅವರ ವಿರುದ್ಧ ಪಕ್ಷದ ಹೈಕಮಾಂಡ್​ಗೆ ದೂರು ನೀಡುವೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್​ ವಿವಾದ ಬಗೆಹರಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ. ಕೇಂದ್ರ, ರಾಜ್ಯ ಸರ್ಕಾರಗಳ ಗುಪ್ತಚರ ಇಲಾಖೆ ಸತ್ತುಹೋಗಿದೆಯೇ? ಸರ್ಕಾರದ ವೈಫಲ್ಯದಿಂದ ಹಿಜಾಬ್ ವಿವಾದ ಇಷ್ಟು ದೊಡ್ಡದಾಗಿದೆ. ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎನ್ನುವ ಸಚಿವ ಕೆ.ಎಸ್.ಈಶ್ವರಪ್ಪ ಧ್ವಜಾರೋಹಣ ನಿಯಮಗಳನ್ನು ಓದಿಲ್ಲ. ಅವರ ವಿರುದ್ಧ ರಾಜ್ಯಪಾಲರು ಶಿಸ್ತುಕ್ರಮ ಜರುಗಿಸಬೇಕು. ರಾಮನ ಜಪ ಮಾಡುವ ಬಿಜೆಪಿಯವರು ಆದರ್ಶ ರೂಢಿಸಿಕೊಳ್ಳಬೇಕು. ವೋಟ್ ಬ್ಯಾಂಕ್​ಗಾಗಿ ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ. ರಾಜ್ಯದ ಜನತೆ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಹಿಜಾಬ್ ಕುರಿತು ಹೈಕೋರ್ಟ್​ನ ಮಧ್ಯಂತರ ಆದೇಶ ಇದ್ದರೂ ಅದ ಪಾಲನೆ ಈ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಯಾವ ಮುಖ ಇಟ್ಟುಕೊಂಡು ನೀವು ಸರ್ಕಾರ ಮಾಡುತ್ತಿದ್ದೀರಿ. ಸರ್ಕಾರ ನಡೆಸಲು ಬಿಜೆಪಿಗೆ ಆಗುತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ರಾಜೀನಾಮೆ ನೀಡುವುದಿಲ್ಲ, ಹೈಕಮಾಂಡ್​ನಿಂದ ಬುಲಾವ್ ಬಂದಿದೆ: ಮುನಿಸಿಕೊಂಡಿದ್ದ ಸಿಎಂ ಇಬ್ರಾಹಿಂ ಯುಟರ್ನ್

ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಕಥೆ ಮುಗಿದಿದೆ; ಸಿಎಂ ಬೊಮ್ಮಾಯಿ ಸರ್ಕಾರ ಪಂಕ್ಚರ್ ಆಗಿರುವ ಬಸ್: ಸಿಎಂ ಇಬ್ರಾಹಿಂ ಟೀಕೆ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್